ಶ್ರೀರಾಮುಲು 
ರಾಜ್ಯ

ಸಜೀವ ದಹನವಾದ ಬಿಎಂಟಿಸಿ ನೌಕರನ ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರ, ಸರ್ಕಾರಿ ಹುದ್ದೆ: ಶ್ರೀರಾಮುಲು

ಬಸ್ ನಲ್ಲಿ ಸಂಭವಿಸಿದ ಅಗ್ನಿ ಅನಾಹುತದಲ್ಲಿ ಮೃತಪಟ್ಟ ಬಿಎಂಟಿಸಿ ನೌಕರನ ಕುಟಂಬಕ್ಕೆ ಐದು ಲಕ್ಷ ರೂ. ಪರಿಹಾರ ಹಾಗೂ  ಆತನ ಕುಟುಂಬದ ಒಬ್ಬರಿಗೆ ಸರ್ಕಾರಿ ನೌಕರಿ ಕೊಡಿಸುವಂತೆ ಆದೇಶ ಮಾಡಲಾಗಿದೆ ಎಂದು ಸಾರಿಗೆ ಸಚಿವ ಬಿ.ಶ್ರೀರಾಮುಲು ಹೇಳಿದ್ದಾರೆ.

ಬೆಂಗಳೂರು: ಬಸ್ ನಲ್ಲಿ ಸಂಭವಿಸಿದ ಅಗ್ನಿ ಅನಾಹುತದಲ್ಲಿ ಮೃತಪಟ್ಟ ಬಿಎಂಟಿಸಿ ನೌಕರನ ಕುಟಂಬಕ್ಕೆ ಐದು ಲಕ್ಷ ರೂ. ಪರಿಹಾರ ಹಾಗೂ  ಆತನ ಕುಟುಂಬದ ಒಬ್ಬರಿಗೆ ಸರ್ಕಾರಿ ನೌಕರಿ ಕೊಡಿಸುವಂತೆ ಆದೇಶ ಮಾಡಲಾಗಿದೆ ಎಂದು ಸಾರಿಗೆ ಸಚಿವ ಬಿ.ಶ್ರೀರಾಮುಲು ಹೇಳಿದ್ದಾರೆ.

ರಾಯಚೂರಿನಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಸಚಿವ ಶ್ರೀರಾಮುಲು, ನಿದ್ರೆ ಮಂಪರಿನಲ್ಲಿದ್ದಾಗ ಅನಾಹುತ ಸಂಭವಿಸಿದೆ. ಘಟನೆ ತಿಳಿಯುತ್ತಿದ್ದಂತೆ ಕ್ರಮ ಕೈಗೊಳ್ಳಲಾಗಿದೆ ಎಂದರು.

ಸಾರಿಗೆ ನೌಕರರಿಗೆ ವೇತನ ಹೆಚ್ಚಳದ ವಿಚಾರದಲ್ಲಿ ಶೀಘ್ರವೇ ಸಿಹಿ ಸುದ್ದಿ ಕೊಡಲಾಗುವುದು. ನಾವು ಶೇ.10ರಷ್ಟು ವೇತನ ಹೆಚ್ಚಳ ಮಾಡುವುದಾಗಿ ತಿಳಿಸಿದ್ದು, ಸರ್ಕಾರಿ ನೌಕರರ ಮಾದರಿಯಲ್ಲಿ ಶೇ.17ರಷ್ಟು ವೇತನ ಹೆಚ್ಚಿಸುವಂತೆ ಸಾರಿಗೆ ಸಿಬ್ಬಂದಿ ಒತ್ತಾಯಿಸುತ್ತಿದ್ದಾರೆ. ಆದರೆ, ಇದರಿಂದ ಸರ್ಕಾರಕ್ಕೆ 6500 ಕೋಟಿ ಹೊರೆಯಾಗಲಿದೆ.

ಅನೇಕ ವರ್ಷಗಳಿಂದ ಸಾರಿಗೆ ಪ್ರಯಾಣ ದರ ಕೂಡ ಹೆಚ್ಚಿಸಿಲ್ಲ. ಈ ಎಲ್ಲ ವಿಚಾರಗಳ ಬಗ್ಗೆ ಆರ್ಥಿಕ ಇಲಾಖೆ ಜತೆ ಚರ್ಚೆ ಮಾಡಿದ್ದು, ಶೀಘ್ರದಲ್ಲೇ ಸಿಎಂ ಜತೆ ಕೂಡ ಚರ್ಚಿಸಲಾಗುವುದು. ಆದಷ್ಟು ಬೇಗ ಸಾರಿಗೆ ಸಿಬಂದಿ ಮನವೊಲಿಸಿ ವೇತನ ಹೆಚ್ಚಳ ಮಾಡಲಾಗುವುದು ಎಂದರು.

ಲಿಂಗಧೀರನಹಳ್ಳಿ ಡಿ ಗ್ರೂಪ್‌ ಬಡಾವಣೆ ನಿಲ್ದಾಣದಲ್ಲಿ‌ ಗುರುವಾರ ರಾತ್ರಿ ನಿಲ್ಲಿಸಿದ್ದ ಬಸ್‌ಗೆ ಬೆಂಕಿ ಹೊತ್ತಿಕೊಂಡಿದ್ದು, ಬಸ್‌ನಲ್ಲಿ‌ ಮಲಗಿದ್ದ ನಿರ್ವಾಹಕ ಮುತ್ತಯ್ಯ ಸ್ವಾಮಿ (45) ಸಜೀವವಾಗಿ ದಹನವಾಗಿದ್ದರು. ಸೋಮನಹಳ್ಳಿ‌ ಡಿಪೊ-31ಕ್ಕೆ ಸೇರಿದ್ದ ಬಸ್‌ನಲ್ಲಿ (ಕೆಎ 57 ಎಫ್ 2069) ಬಳ್ಳಾರಿಯ ಮುತ್ತಯ್ಯ ಹಾಗೂ‌ ಚಾಲಕ ಪ್ರಕಾಶ್ (39) ಕರ್ತವ್ಯದಲ್ಲಿದ್ದರು. ಗುರುವಾರ ರಾತ್ರಿ 10.30ಕ್ಕೆ ಕರ್ತವ್ಯ‌ ಮುಗಿಸಿದ್ದ ಅವರಿಬ್ಬರು, ಡಿ ಗ್ರೂಪ್ ಬಡಾವಣೆ ನಿಲ್ದಾಣದಲ್ಲಿ ಬಸ್ ನಿಲ್ಲಿಸಿದ್ದರು. ಅಲ್ಲಿಯೇ ರಾತ್ರಿ ತಂಗಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

Ragigudda Metro ಮೆಟ್ರೋ ನಿಲ್ದಾಣದಲ್ಲಿ ತಪ್ಪಿದ ದುರಂತ, ಆಯತಪ್ಪಿ ಹಳಿ ಮೇಲೆ ಬಿದ್ದ ಸಿಬ್ಬಂದಿ!... ಮುಂದೇನಾಯ್ತು? Video

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

SCROLL FOR NEXT