ಸಂಗ್ರಹ ಚಿತ್ರ 
ರಾಜ್ಯ

ಶಿವಾಜಿನಗರ ಕ್ಷೇತ್ರದಲ್ಲಿ ಯಾವುದೇ ಮತದಾರರ ಹೆಸರು ಕೈಬಿಟ್ಟಿಲ್ಲ: ಬಿಬಿಎಂಪಿ

ಶಿವಾಜಿನಗರ ಕ್ಷೇತ್ರದಲ್ಲಿ ಮತದಾರರ ಪಟ್ಟಿಯಿಂದ ಯಾವುದೇ ಹೆಸರುಗಳನ್ನು ಕೈಬಿಟ್ಟಿಲ್ಲ ಎಂದು ಬಿಬಿಎಂಪಿ ಗುರುವಾರ ಸ್ಪಷ್ಟಪಡಿಸಿದೆ.

ಬೆಂಗಳೂರು: ಶಿವಾಜಿನಗರ ಕ್ಷೇತ್ರದಲ್ಲಿ ಮತದಾರರ ಪಟ್ಟಿಯಿಂದ ಯಾವುದೇ ಹೆಸರುಗಳನ್ನು ಕೈಬಿಟ್ಟಿಲ್ಲ ಎಂದು ಬಿಬಿಎಂಪಿ ಗುರುವಾರ ಸ್ಪಷ್ಟಪಡಿಸಿದೆ.

ಪಟ್ಟಿಯಲ್ಲಿ ಮತದಾರರ ಹೆಸರನ್ನು ಕೈ ಬಿಡಲಾಗಿದೆ ಎಂದು ಶಿವಾಜಿನಗರ ಕ್ಷೇತ್ರದ ಶಾಸಕರು ಹೇಳಿರುವುದು ಕೆಲ ಮಾಧ್ಯಮದಲ್ಲಿ ಪ್ರಕಟವಾಗಿದೆ. ಕ್ಷೇತ್ರದಲ್ಲಿ 91 ಮತಗಟ್ಟೆಗಳ ವ್ಯಾಪ್ತಿಯಲ್ಲಿ ವಾಸವಿಲ್ಲದ, ಮರಣ ಹೊಂದಿರುವ ಹೆಸರನ್ನು ಮತದಾರರ ಪಟ್ಟಿಯಲ್ಲಿ ಇರುವ ಬಗ್ಗೆ ದೂರು ಬಂದಿತ್ತು. ಈ ಹಿನ್ನೆಲೆಯಲ್ಲಿ ಮತಗಟ್ಟೆ ಅಧಿಕಾರಿಗಳು, ಮನೆಗೆ ಭೇಟಿ ನೀಡಿ ಸ್ಥಳಾಂತರಗೊಂಡ ಮತದಾರರ ಪಟ್ಟಿಯನ್ನು ತಯಾರಿಸಿದ್ದಾರೆ.

ಇಂಥ ಪ್ರಕರಣದಲ್ಲಿ ಕೇಂದ್ರ ಚುನಾವಣಾ ಆಯೋಗದ ನಿರ್ದೇಶನದಂತೆ ಪ್ರತ್ಯೇಕ ಪ್ರಮಾಣಿತ ಕಾರ್ಯಾಚರಣೆಯ ವಿಧಾನ(ಎಸ್‌ಒಪಿ) ಪಾಲಿಸಬೇಕಿದೆ. ಅದರಂತೆ, 9,195 ಸ್ಥಳಾಂತರಗೊಂಡ ಮತದಾರರಿಗೆ ನೋಟಿಸ್ ನೀಡಲಾಗಿತ್ತು. ಚುನಾವಣಾ ವರ್ಷದ 6 ತಿಂಗಳ ಪೂರ್ವದಲ್ಲಿ ಮತದಾರರ ಪಟ್ಟಿಯಲ್ಲಿ ಯಾವುದೇ ಡಿಲೀಟ್ ಹೆಸರುಗಳನ್ನು ಸ್ವಯಂಪ್ರೇರಿತವಾಗಿ ಸೇರಿಸಲು ಅಧಿಕಾರಿಗಳಿಗೆ ಅವಕಾಶ ಇಲ್ಲ. ಹಾಗಾಗಿ. ಮುಂದಿನ ಕ್ರಮಕ್ಕಾಗಿ ಚುನಾವಣಾ ಆಯೋಗದ ನಿರ್ದೇಶನಕ್ಕೆ ಸಲ್ಲಿಸಲಾಗಿದೆ ಎಂದು ಬಿಬಿಎಂಪಿ ಹೇಳಿದೆ.

ಅಲ್ಲದೆ, ಈ ವಿಚಾರ ಕುರಿತು ದೂರುದಾರರೊಬ್ಬರ ಹೈಕೋರ್ಟ್‌ಗೆ ರಿಟ್ ಅರ್ಜಿ ಸಲ್ಲಿಸಿದ್ದಾರೆ. ಆಕ್ಷೇಪಣೆ ಸಲ್ಲಿಸಿದ 22 ಮತದಾರರ ಕುರಿತು ಪರಿಶೀಲಿಸಲಾಗಿದೆ. ಈ ವೇಳೆ ಮತದಾರರ ಸಾಮಾನ್ಯ ನಿವಾಸಿಗಳು ಎಂಬುದನ್ನು ಖಚಿತ ಪಡಿಸಿಕೊಂಡು ನೀಡಿರುವ ನೋಟೀಸ್‌ಗೆ ಮುಂದಿನ ಪ್ರಕ್ರಿಯೆ ಕೈ ಬಿಡಲಾಗಿದೆ ಎಂದು ನ್ಯಾಯಾಲಯದಲ್ಲಿ ಹೇಳಿಕೆ ಸಲ್ಲಿಸಲಾಗಿದೆ. ಆದ್ದರಿಂದ, ದೂರಿಗೆ ಸಂಬಂಧ ಈ ಕ್ಷೇತ್ರದ ಮತದಾರರ ಪಟ್ಟಿಯಿಂದ ಯಾವುದೇ ಹೆಸರನ್ನು ಕೈಬಿಟ್ಟಿಲ್ಲ ಎಂದು ತಿಳಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel