ಸಂಗ್ರಹ ಚಿತ್ರ 
ರಾಜ್ಯ

ವಿಧಾನಸಭಾ ಚುನಾವಣೆ: ಮತ ಹಾಕುವಂತೆ ಸೀರೆಗಳ ಉಡುಗೊರೆ ನೀಡಿದ ಜನಪ್ರತಿನಿಧಿಗಳು, ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ ಜನತೆ

ಚುನಾವಣೆಗೆ ಸ್ಪರ್ಧಿಸುವ ಆಕಾಂಕ್ಷಿಗಳು ಉಡುಗೊರೆಯಾಗಿ ನೀಡಿದ್ದ ಸೀರೆಗಳನ್ನು ಸುಟ್ಟು ಹಾಕಿರುವ ಘಟನೆ ಚಿಕ್ಕಮಗಳೂರಿನ ಭಕ್ತರಹಳ್ಳಿ ಮತ್ತು ಮಲ್ಲೇನಹಳ್ಳಿ ಗ್ರಾಮದಲ್ಲಿ ಮಂಗಳವಾರ ನಡೆದಿದೆ. ಸೀರೆ ಹಂಚುತ್ತಿದ್ದ ಬಿಜೆಪಿ ಕಾರ್ಯಕರ್ತರ ಸಮ್ಮುಖದಲ್ಲಿ ಈ ಘಟನೆ ನಡೆದಿದೆ.

ಚಿಕ್ಕಮಗಳೂರು: ಚುನಾವಣೆಗೆ ಸ್ಪರ್ಧಿಸುವಆಕಾಂಕ್ಷಿಗಳು ಉಡುಗೊರೆಯಾಗಿ ನೀಡಿದ್ದ ಸೀರೆಗಳನ್ನು ಸುಟ್ಟು ಹಾಕಿರುವ ಘಟನೆ ಚಿಕ್ಕಮಗಳೂರಿನ ಭಕ್ತರಹಳ್ಳಿ ಮತ್ತು ಮಲ್ಲೇನಹಳ್ಳಿ ಗ್ರಾಮದಲ್ಲಿ ಮಂಗಳವಾರ ನಡೆದಿದೆ. ಸೀರೆ ಹಂಚುತ್ತಿದ್ದ ಬಿಜೆಪಿ ಕಾರ್ಯಕರ್ತರ ಸಮ್ಮುಖದಲ್ಲಿ ಈ ಘಟನೆ ನಡೆದಿದೆ.

ಕಳೆದ ಐದು ವರ್ಷಗಳಿಂದ ತಮ್ಮ ಸಮಸ್ಯೆಗಳಿಗೆ ಕಿವಿಕೊಡದೆ ಕಣ್ಣು ಮುಚ್ಚಿ ಕುಳಿತು, ಚುನಾವಣೆ ಬಂದ ಕೂಡಲೇ ಉಡುಗೊರೆ ನೀಡಲು ಮುಂದಾದ ಜನಪ್ರತಿನಿಧಿಗಳ ವಿರುದ್ಧ ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸೀರೆಗಳಿಗೆ ಬೆಂಕಿ ಹಚ್ಚಿದ ಯುವಕ, ಸ್ಥಳೀಯ ಶಾಸಕರು ತಮ್ಮ ಕ್ಷೇತ್ರದ ಜನರು ಎದುರಿಸುತ್ತಿರುವ ಸಮಸ್ಯೆಗಳನ್ನು ಪರಿಹರಿಸಲು ತಲೆಕೆಡಿಸಿಕೊಳ್ಳದೆ ಈಗ ಉಡುಗೊರೆಗಳನ್ನು ನೀಡಿ ಆಮಿಷ ಒಡ್ಡುತ್ತಿದ್ದಾರೆ ಎಂದು ಆರೋಪಿಸಿದರು.

ಗ್ರಾಮದಲ್ಲಿ ಮೂಲ ಸೌಕರ್ಯಗಳನ್ನು ಒದಗಿಸಿಲ್ಲ. ನಮ್ಮ ಕುಂದುಕೊರತೆಗಳನ್ನು ನಿವಾರಿಸಲು ಯಾವುದೇ ಪ್ರಯತ್ನ ಮಾಡಿಲ್ಲ. ಈಗ ಸೀರೆ ಹಂಚುವ ಮೂಲಕ ನಮ್ಮ ಮಹಿಳೆಯರಿಗೆ ಅವಮಾನ ಮಾಡುತ್ತಿದ್ದಾರೆ. ಸಾಂಕ್ರಾಮಿಕ ರೋಗ ಸಮಯದಲ್ಲಿ ನಮಗೆ ಆಹಾರದ ಅಗತ್ಯವಿತ್ತು. ಅಂದು ಒಂದು ಕೆಜಿ ಅಕ್ಕಿ ಕೂಡ ವ್ಯವಸ್ಥೆ ಮಾಡಲಾಗದವರು ಈಗ ಮತ ಭಿಕ್ಷೆಗೆ ಬಂದಿದ್ದಾರೆ. ಇದು ನಿಜಕ್ಕೂ ನಾಚಿಕೆಗೇಡಿತನ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸೀರೆ ಕೊಳ್ಳಲಾಗದಷ್ಟು ಬಡವರಲ್ಲ ನಾವು. 100 ರೂ.ಗಿಂತ ಕಡಿಮೆ ಬೆಲೆಯ ಸೀರೆಗೆ ನಮ್ಮ ಮತವನ್ನು ಮಾರಬಹುದೇ? ಎಂದು ಗ್ರಾಮಸ್ಥರೊಬ್ಬರು ಪ್ರಶ್ನಿಸಿದ್ದಾರೆ. ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಮಹಾರಾಷ್ಟ್ರ: ಬಿವಂಡಿಯಲ್ಲಿ ಕಟ್ಟಡ ಕುಸಿತ- ಸಾವಿನ ಸಂಖ್ಯೆ ಒಂಬತ್ತಕ್ಕೆ ಏರಿಕೆ; ರಕ್ಷಣಾ ಕಾರ್ಯಾಚರಣೆಯ ವೇಳೆ NDRF ಅಧಿಕಾರಿಗೆ ಗಾಯ

Iranಗೆ ಬೆಂಬಲ ಆರೋಪ: ಭಾರತದ ಕಂಪನಿ ಸೇರಿ 6 ಸಂಸ್ಥೆಗಳ ವಿರುದ್ಧ ಅಮೆರಿಕಾ ಕಠಿಣ ಕ್ರಮ, China-Russia ಸಂಸ್ಥೆಗಳೂ Black listಗೆ..!

ಸಚಿವ ಸಂಪುಟ ವಿಸ್ತರಣೆಗೆ ಹೈಕಮಾಂಡ್ ಗ್ರೀನ್ ಸಿಗ್ನಲ್: ಸೋಮವಾರ ಸಂಜೆ ಪ್ರಮಾಣವಚನ ಸಾಧ್ಯತೆ, 18 ಸಚಿವರ ಸೇರ್ಪಡೆ ನಿರೀಕ್ಷೆ..!

ಪ್ರಶ್ನೆಪತ್ರಿಗೆ ಲೀಕ್ ದಂಧೆಗೆ ಬಿತ್ತು ಬ್ರೇಕ್: 'ಮಕ್ಕಳ ಭವಿಷ್ಯದ ಜೊತೆ ಆಟವಾಡುವವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ': ಸೆಲ್ಫೀ ವಿಡಿಯೋ ಮೂಲಕ ಪ್ರಧಾನಿ ಮೋದಿ ಖಡಕ್ ಎಚ್ಚರಿಕೆ..!

ಅಂತ್ಯದತ್ತ ಸಾಗಿದ ಇಸ್ರೇಲ್-ಹಮಾಸ್ ಯುದ್ಧ: 14 ದಿನಗಳಲ್ಲಿ ಶಸ್ತ್ರಾಸ್ತ್ರ ಹಸ್ತಾಂತರಕ್ಕೆ ಹಮಾಸ್ ಒಪ್ಪಿಗೆ, ಶಾಂತಿ ಒಪ್ಪಂದ ಘೋಷಿಸಿದ ಟ್ರಂಪ್..!