ಗಗನಸಖಿ ಅರ್ಚನಾ 
ರಾಜ್ಯ

ಬೆಂಗಳೂರು: 4ನೇ ಮಹಡಿಯಿಂದ ಜಿಗಿದು ಗಗನಸಖಿ ಆತ್ಮಹತ್ಯೆ

ಪ್ರಿಯಕರನನ್ನು ಭೇಟಿ ಮಾಡಲು ಬೆಂಗಳೂರಿಗೆ ಬಂದಿದ್ದ ಗಗನಸಖಿಯೊಬ್ಬರು ಅಪಾರ್ಟ್ ಮೆಂಟ್‍ನ 4ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೋರಮಂಗಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮಧ್ಯರಾತ್ರಿ ನಡೆದಿದೆ.

ಬೆಂಗಳೂರು: ಪ್ರಿಯಕರನನ್ನು ಭೇಟಿ ಮಾಡಲು ಬೆಂಗಳೂರಿಗೆ ಬಂದಿದ್ದ ಗಗನಸಖಿಯೊಬ್ಬರು ಅಪಾರ್ಟ್ ಮೆಂಟ್‍ನ 4ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೋರಮಂಗಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮಧ್ಯರಾತ್ರಿ ನಡೆದಿದೆ.

ಹಿಮಾಚಲ ಪ್ರದೇಶದ 28 ವರ್ಷದ ಅರ್ಚನಾ ಆತ್ಮಹತ್ಯೆ ಮಾಡಿಕೊಂಡಿರುವ ಗಗನಸಖಿ ಎಂದು ತಿಳಿದುಬಂದಿದೆ. ಅರ್ಚನಾ ಸಾಫ್ಟ್ ವೇರ್ ಎಂಜಿನಿಯರ್ ಕೇರಳ ಮೂಲದ ಆದೇಶ್ ಎಂಬಾತನನ್ನು ಪ್ರೀತಿಸುತ್ತಿದ್ದು ಅದನ್ನು ಭೇಟಿಯಾಗಲು ನಿನ್ನೆಯಷ್ಟೆ ಬೆಂಗಳೂರಿಗೆ ಬಂದಿದ್ದು ತಡರಾತ್ರಿ 12 ಗಂಟೆ ಸುಮಾರಿನಲ್ಲಿ ಅರ್ಚನಾ ಅಪಾರ್ಟ್ ಮೆಂಟ್‍ನ 4ನೇ ಮಹಡಿಗೆ ಹೋಗಿ ಅಲ್ಲಿಂದ ಕೆಳಗೆ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

ಸುದ್ದಿ ತಿಳಿದ ಕೂಡಲೇ ಘಟನಾ ಸ್ಥಳಕ್ಕೆ ಕೋರಮಂಗಲ ಠಾಣೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದರು. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮೃತದೇಹವನ್ನು ಸೇಂಟ್‍ಜಾನ್ ಆಸ್ಪತ್ರೆಗೆ ರವಾನಿಸಿ ಮುಂದಿನ ತನಿಖೆ ಕೈಗೊಂಡಿದ್ದಾರೆ.

ಪ್ರಕರಣ ಸಂಬಂಧ ಆದೇಶ್ ನನ್ನು ವಶಕ್ಕೆ ಪಡೆದಿರುವ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT