ಪ್ರಾತಿನಿಧಿಕ ಚಿತ್ರ 
ರಾಜ್ಯ

4ನೇ ಮಹಡಿಯಿಂದ ಬಿದ್ದು 28 ವರ್ಷದ ಫ್ಲೈಟ್ ಅಟೆಂಡೆಂಟ್ ಸಾವು, ಪ್ರಿಯಕರನ ಬಂಧನ

ಶುಕ್ರವಾರ ರಾತ್ರಿ ಕೋರಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಂತಾರಾಷ್ಟ್ರೀಯ ವಿಮಾನಯಾನ ಸಂಸ್ಥೆಯೊಂದರ 28 ವರ್ಷದ ಕ್ಯಾಬಿನ್ ಸಿಬ್ಬಂದಿ ನಿಗೂಢವಾಗಿ ಸಾವಿಗೀಡಾಗಿದ್ದಾರೆ. ಅಪಾರ್ಟ್‌ಮೆಂಟ್‌ನ ನಾಲ್ಕನೇ ಮಹಡಿಯಿಂದ ಬಿದ್ದಿರುವ ಶಂಕೆ ವ್ಯಕ್ತವಾಗಿದೆ.

ಬೆಂಗಳೂರು: ಶುಕ್ರವಾರ ರಾತ್ರಿ ಕೋರಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಂತಾರಾಷ್ಟ್ರೀಯ ವಿಮಾನಯಾನ ಸಂಸ್ಥೆಯೊಂದರ 28 ವರ್ಷದ ಕ್ಯಾಬಿನ್ ಸಿಬ್ಬಂದಿ ನಿಗೂಢವಾಗಿ ಸಾವಿಗೀಡಾಗಿದ್ದಾರೆ. ಅಪಾರ್ಟ್‌ಮೆಂಟ್‌ನ ನಾಲ್ಕನೇ ಮಹಡಿಯಿಂದ ಬಿದ್ದಿರುವ ಶಂಕೆ ವ್ಯಕ್ತವಾಗಿದೆ.

ಬಲಿಯಾದ ಅರ್ಚನಾ ಧಿಮಾನ್ ಹಿಮಾಚಲ ಪ್ರದೇಶದ ಮೂಲದವರು. ಕೋರಮಂಗಲದ 8ನೇ ಬ್ಲಾಕ್‌ನಲ್ಲಿರುವ ರೇಣುಕಾ ರೆಸಿಡೆನ್ಸಿ ಅಪಾರ್ಟ್‌ಮೆಂಟ್‌ನಲ್ಲಿ ನೆಲೆಸಿರುವ ಮಂಗಳೂರಿನ ತನ್ನ ಗೆಳೆಯ ಆದೇಶ್ ಎಂಬಾತನನ್ನು ಭೇಟಿಯಾಗಲು ದುಬೈನಿಂದ ಬಂದಿದ್ದಳು.
ಶುಕ್ರವಾರ ಸಂಜೆ ಕೋರಮಂಗಲದ ಮಾಲ್‌ಗೆ ಸಿನಿಮಾ ನೋಡಲು ಹೋಗಿದ್ದರು. ಅವರು ಫ್ಲಾಟ್‌ಗೆ ಹಿಂದಿರುಗುವ ಮೊದಲು ಜಗಳವಾಡಿಕೊಂಡಿದ್ದರು. ಅಲ್ಲಿ ಅವರ ನಡುವೆ ವಾದ ವಿವಾದ ನಡೆಯಿತು ಎಂದು ತಿಳಿದುಬಂದಿದೆ.

ಸಾಫ್ಟ್‌ವೇರ್ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿರುವ ಆದೇಶ್ ಕೂಡಲೇ ಆಕೆಯನ್ನು ಸಮೀಪದ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಶನಿವಾರ ಮುಂಜಾನೆ ಆಕೆಯನ್ನು ಮತ್ತೊಂದು ಆಸ್ಪತ್ರೆಗೆ ಸ್ಥಳಾಂತರಿಸಲಾಯಿತು. ತೀವ್ರವಾಗಿ ಗಾಯಗೊಂಡಿದ್ದ ಆಕೆ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ. ಆರು ತಿಂಗಳ ಹಿಂದೆ ಆದೇಶ್ ಮತ್ತು ಅರ್ಚನಾ ಡೇಟಿಂಗ್ ಆಪ್‌ ಮೂಲಕ ಪರಿಚಯವಾಗಿದ್ದರು.

ಕೋರಮಂಗಲ ಪೊಲೀಸರು ಆದೇಶ್‌ನನ್ನು ವಶಕ್ಕೆ ತೆಗೆದುಕೊಂಡಿದ್ದಾರೆ. ಆದರೆ, ಸಂತ್ರಸ್ತೆಯ ಪೋಷಕರು ದೂರು ದಾಖಲಿಸಲು ಕಾಯುತ್ತಿದ್ದಾರೆ. ಅರ್ಚನಾ ನಾಲ್ಕನೇ ಮಹಡಿಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆಯೇ ಎಂಬುದು ಪೊಲೀಸರಿಗೆ ಇನ್ನೂ ಖಚಿತವಾಗಿಲ್ಲ. ಅವರು ಎಲ್ಲಾ ಕೋನಗಳಿಂದಲೂ ತನಿಖೆ ನಡೆಸುತ್ತಿದ್ದಾರೆ. ಆಕೆ ಮದ್ಯದ ಅಮಲಿನಲ್ಲಿದ್ದಳೇ ಎಂದು ತಿಳಿಯಲು ಪೊಲೀಸರು ಮರಣೋತ್ತರ ಪರೀಕ್ಷೆಯ ವರದಿಗಾಗಿ ಕಾಯುತ್ತಿದ್ದಾರೆ.

ಸಂತ್ರಸ್ತೆ ನಾಲ್ಕು ದಿನಗಳ ಹಿಂದೆ ಆದೇಶ್‌ನನ್ನು ಭೇಟಿಯಾಗಲು ಬೆಂಗಳೂರಿಗೆ ಬಂದಿದ್ದರು. ಅವರ ನಡುವೆ ಜಗಳ ನಡೆದಿದೆ ಎಂದು ಶಂಕಿಸಲಾಗಿದೆ. ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದ ಆದೇಶ್‌ನನ್ನು ನಾವು ವಿಚಾರಣೆ ನಡೆಸುತ್ತಿದ್ದೇವೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟದ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

Theaterisation: 'ಥಿಯೇಟರ್ ಕಮಾಂಡ್‌' ರಚನೆ: ಪ್ರಯತ್ನದಲ್ಲಿ ಪ್ರಗತಿ ಸಾಧಿಸಲಾಗುತ್ತಿದೆಯೇ? ಆಡ್ಮಿರಲ್ ಡಿಕೆ ತ್ರಿಪಾಠಿ ಹೇಳಿದ್ದು ಹೀಗೆ...

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

'ಧಮ್ ಇದ್ರೆ.. ಸನಾತನಧರ್ಮ, ಬಿಹಾರಿಗಳ ಕುರಿತ ಹೇಳಿಕೆ ಮತ್ತೆ ಹೇಳ್ತೀರಾ?': MK Stalin ಗೆ ಬಿಜೆಪಿ-ಜೆಡಿಯು ಸವಾಲು!

SCROLL FOR NEXT