ಮಂಡ್ಯದಲ್ಲಿ ಪ್ರಧಾನಿ ನರೇಂದ್ರ ಮೋದಿ ರೋಡ್ ಶೋ 
ರಾಜ್ಯ

ಮೈಸೂರಿಗೆ ವಿಶೇಷ ವಿಮಾನ ಮೂಲಕ ಬಂದಿಳಿದು ಮಂಡ್ಯದತ್ತ ಪ್ರಧಾನಿ ಮೋದಿ ಪಯಣ, ರೋಡ್ ಶೋ, ರಸ್ತೆಯುದ್ದಕ್ಕೂ ಹೂಮಳೆ

ಮೈಸೂರಿನ ಮಂಡಕಳ್ಳಿ ಏರ್‌ಪೋರ್ಟ್‌ಗೆ ಬಂದಿಳಿದ ಪ್ರಧಾನಿ ನರೇಂದ್ರ ಮೋದಿಯವರನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ರಾಜ್ಯದ ನಾಯಕರು ಅವರನ್ನು ಸ್ವಾಗತಿಸಿದ್ದಾರೆ. 

ಮಂಡ್ಯ/ಮೈಸೂರು: ಮೈಸೂರಿನ ಮಂಡಕಳ್ಳಿ ಏರ್‌ಪೋರ್ಟ್‌ಗೆ ಬಂದಿಳಿದ ಪ್ರಧಾನಿ ನರೇಂದ್ರ ಮೋದಿಯವರನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ರಾಜ್ಯದ ನಾಯಕರು ಅವರನ್ನು ಸ್ವಾಗತಿಸಿದ್ದಾರೆ. 

ಮೋದಿ ಮೈಸೂರು ಏರ್‌ಪೋರ್ಟ್‌ಗೆ ಬಂದಿದ್ದು, ಸಿಎಂ ಬೊಮ್ಮಾಯಿ ಸ್ವಾಗತಿಸಿದ್ದಾರೆ. ಮೈಸೂರು ವಿಮಾನ ನಿಲ್ದಾಣಕ್ಕೆ ವಿಶೇಷ ವಿಮಾನದಲ್ಲಿ ಆಗಮಿಸಿದ್ದಾರೆ. ಅಲ್ಲಿಂದ ಸೇನಾ ಹೆಲಿಕಾಪ್ಟರ್ ಮೂಲಕ ಮಂಡ್ಯದ ಪಿಇಎಸ್ ಕಾಲೇಜು ಆವರಣಕ್ಕೆ ಪ್ರಧಾನ ಮಂತ್ರಿಗಳು ಆಗಮಿಸಲಿದ್ದಾರೆ. ಸಕ್ಕರೆ ನಾಡು ಮಂಡ್ಯ ಅಕ್ಕರೆಯ ಸ್ವಾಗತಕ್ಕೆ ಸಜ್ಜಾಗಿದೆ. ಶಿಕ್ಷಣ ಕಾಶಿ ಧಾರವಾಡದಲ್ಲೂ ನಮೋಗೆ ಸ್ಪೆಷಲ್ ವೆಲ್ಕಮ್ ಮಾಡಲಿದ್ದಾರೆ.

ಕೆಲವೇ ಕ್ಷಣಗಳಲ್ಲಿ ಪ್ರವಾಸಿಮಂದಿರ ವೃತ್ತದಿಂದ ಮೋದಿ ರೋಡ್‌ಶೋ ಆರಂಭವಾಗಿ ನಂದ ಸರ್ಕಲ್‌ವರೆಗೆ 1.8 ಕಿಲೋ ಮೀಟರ್ ರೋಡ್‌ಶೋ ನಡೆಸುತ್ತಿದ್ದಾರೆ.

ಇಕ್ಕೆಲಗಳಲ್ಲಿ ಜನರು ಕಿಕ್ಕಿರಿದು ಸೇರಿದ್ದು ಮೋದಿ ಮೋದಿ ಎಂದು ಘೋಷಣೆ ಕೂಗುತ್ತಾ ಮೋದಿಯವರ ಕಾರಿನತ್ತ ಹೂವಿನ ಮಳೆಯನ್ನೇ ಹರಿಸುತ್ತಿದ್ದಾರೆ. ಖುಷಿಯಿಂದ ಮೋದಿಯವರು ಕೈಬೀಸುತ್ತಾ ತಮ್ಮ ಕಾರಿನ ಮೇಲೆ ಬಿದ್ದ ಹಳದಿ ಹೂವಿನ ದಳಗಳನ್ನು ಜನರತ್ತ ಎಸೆಯುತ್ತಿದ್ದಾರೆ. 

ಮಂಡ್ಯದಲ್ಲಿ ಟೈಟ್ ಸೆಕ್ಯೂರಿಟಿ: ಸಕ್ಕರೆ ನಾಡು ಮಂಡ್ಯದಲ್ಲಿ ಟೈಟ್ ಸೆಕ್ಯೂರಿಟಿಯಿದೆ. ADGP ಅಲೋಕ್ ಕುಮಾರ್ ನೇತೃತ್ವದಲ್ಲಿ ಭದ್ರತೆ ನಡೆದಿದೆ. ರೋಡ್ ಶೋ ನಡೆಯುವ 1.8 ಕಿಮೀ ರಸ್ತೆ ಮೇಲೆ ಹದ್ದಿನ ಕಣ್ಣು ಇಟ್ಟಿದ್ದಾರೆ. ರಸ್ತೆ ಅಕ್ಕ-ಪಕ್ಕ ರೋಡ್ ಶೋ ಶುರುವಾಗೋವರೆಗೂ ಸಂಚಾರ ನಿರ್ಬಂಧವಾಗಿದೆ. ಪೊಲೀಸರು ಅಡ್ಡ ರಸ್ತೆಗಳನ್ನು ಸಂಪೂರ್ಣ ಮುಚ್ಚಿದ್ದಾರೆ. ಎರಡು ಮೀಟರ್ ದೂರಕ್ಕೆ ಒಬ್ಬ ಪೊಲೀಸ್ ಸಿಬ್ಬಂದಿಯನ್ನು ನಿಯೋಜನೆ ಮಾಡಿದ್ದಾರೆ. ವಿಡಿಯೋ ಚಿತ್ರೀಕರಣಕ್ಕೂ ಅವಕಾಶ ನೀಡದೇ ಭದ್ರತ ಮಾಡಿದ್ದಾರೆ. ಐವರು ಎಸ್ಪಿ ರ್ಯಾಂಕ್ ಅಧಿಕಾರಿಗಳು, 24 DySPಗಳಿಗೆ ಹೊಣೆಯಿದೆ.14 DAR, KSRP ಸೇರಿದಂತೆ 2300ಕ್ಕೂ ಹೆಚ್ಚು ಪೊಲೀಸರ ಬಳಕೆ ಮಾಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

ಮಂಡ್ಯ ಜೈಲಿನ ಕರ್ಮಕಾಂಡ ಬಯಲು: ಆಸ್ಪತ್ರೆ​​ ವಾರ್ಡ್​​​ನಲ್ಲಿ ಮಹಿಳೆ​​ ಜೊತೆ ಸಿಕ್ಕಿಬಿದ್ದ ವಿಚಾರಣಾಧೀನ ಸರ್ಕಾರಿ ಅಧಿಕಾರಿ!

ಕೊಡಗಿನಲ್ಲಿ ಭಾರಿ ಮಳೆ: ಹಾರಂಗಿ ಜಲಾಶಯಕ್ಕೆ ಹೆಚ್ಚಿದ ಒಳಹರಿವು, ತಲಕಾವೇರಿಯಲ್ಲೂ ದಾಖಲೆಯ ವರ್ಷಧಾರೆ!

'ಹನೂರು ಎನ್‌ಕೌಂಟರ್': ತಮಿಳುನಾಡು ವಿಧಾನಸಭೆಯಲ್ಲಿ ಪ್ರಸ್ತಾಪಿಸಿದ ಉದಯನಿಧಿ ಸ್ಟಾಲಿನ್! ಉನ್ನತ ಮಟ್ಟದ ನ್ಯಾಯಾಂಗ ತನಿಖೆಗೆ ಆಗ್ರಹ

SIR ವೇಳೆ 1.08 ಕೋಟಿಗೂ ಅಧಿಕ ಮತದಾರರು ASDDO ಪಟ್ಟಿಗೆ: ಆಕ್ಷೇಪಣೆ ಸಲ್ಲಿಕೆ ಅವಧಿ ವಿಸ್ತರಿಸಬೇಕು- CECಗೆ ಸಿಎಂ ಶಿವಕುಮಾರ್ ಪತ್ರ!