ಸಂಗ್ರಹ ಚಿತ್ರ 
ರಾಜ್ಯ

ಹವಾಮಾನ ವೈಪರೀತ್ಯ: ಕೆಐಎಯಲ್ಲಿ ವಿಮಾನ ಹಾರಾಟದಲ್ಲಿ ವ್ಯತ್ಯಯ, ಕೆಲಕಾಲ ಪ್ರಯಾಣಿಕರು ತಬ್ಬಿಬ್ಬು!

ಹವಾಮಾನ ವೈಪರೀತ್ಯದಿಂದಾಗಿ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ವಿಮಾನ ಹಾರಾಟದಲ್ಲಿ ವ್ಯತ್ಯಯಗಳು ಕಂಡು ಬಂದ ಹಿನ್ನೆಲೆಯಲ್ಲಿ ಕೆಲಕಾಲ ಪ್ರಯಾಣಿಕರು ತಬ್ಬಿಬ್ಬಾಗಿದ್ದರು.

ಬೆಂಗಳೂರು: ಹವಾಮಾನ ವೈಪರೀತ್ಯದಿಂದಾಗಿ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ವಿಮಾನ ಹಾರಾಟದಲ್ಲಿ ವ್ಯತ್ಯಯಗಳು ಕಂಡು ಬಂದ ಹಿನ್ನೆಲೆಯಲ್ಲಿ ಕೆಲಕಾಲ ಪ್ರಯಾಣಿಕರು ತಬ್ಬಿಬ್ಬಾಗಿದ್ದರು.

ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ಹಲವು ವಿಮಾನಗಳ ನಿರ್ಗಮನದಲ್ಲಿ ಒಂದು ಗಂಟೆಗೂ ಹೆಚ್ಚು ಕಾಲ ವಿಳಂಬ ಕಂಡು ಬಂದಿತ್ತು. ಈ ನಡುವೆ ಕೋಲ್ಕತ್ತಾದಿಂದ ಬೆಂಗಳೂರಿಗೆ ಬರುತ್ತಿದ್ದ ಇಂಡಿಗೋ ವಿಮಾನವನ್ನು ಕೊಯಮತ್ತೂರು ವಿಮಾನ ನಿಲ್ದಾಣದಲ್ಲಿ ಲ್ಯಾಂಡ್ ಮಾಡಲಾಗಿತ್ತು.

ಬೆಳಿಗ್ಗೆ 6.40 ರಿಂದ 8.15 ರ ನಡುವೆ ವಿಮಾನಗಳ ನಿರ್ಗಮನದಲ್ಲಿ ವಿಳಂಬ ಕಂಡು ಬಂದಿತ್ತು ಎಂದು ವಿಮಾನ ನಿಲ್ದಾಣದ ವೆಬ್‌ಸೈಟ್‌ನಲ್ಲಿ ತಿಳಿಸಲಾಗಿದೆ.

ದೆಹಲಿ, ಅಲಹಾಬಾದ್, ಚೆನ್ನೈ, ವಿಜಯವಾಡ, ಹೈದರಾಬಾದ್, ರಾಯ್‌ಪುರಕ್ಕೆ ತೆರಳುವ ವಿಮಾನಗಳಲ್ಲಿ ವಿಳಂಬಗಳು ಕಂಡು ಬಂದಿತ್ತು.

ಇಂಡಿಗೋ ವಿಮಾನವು ತನ್ನ ಪ್ರಯಾಣವನ್ನು ಪೂರ್ಣಗೊಳಿಸಲು 5 ಗಂಟೆ 11 ನಿಮಿಷಗಳನ್ನು ತೆಗೆದುಕೊಂಡಿತು, ಇದು ನಿಗದಿತ ಸಮಯಕ್ಕಿಂತ ಎರಡು ಪಟ್ಟು ಹೆಚ್ಚಾಗಿತ್ತು ಎಂದು ತಿಳಿದುಬಂದಿದೆ.

ನಿಗದಿತ ಸಮಯಕ್ಕಿಂತ 16 ನಿಮಿಷ ಮುಂಚಿತವಾಗಿ ಕೋಲ್ಕತ್ತಾ ವಿಮಾನ ನಿಲ್ದಾಣದಿಂದ ವಿಮಾನ ಹೊರಟಿದ್ದು, ಆದಾಗ್ಯೂ, ಹವಾಮಾನ ವೈಪರೀತ್ಯದಿಂದಾಗಿ ವಿಮಾನವು ಕೊಯಮತ್ತೂರು ವಿಮಾನ ನಿಲ್ದಾಣದಲ್ಲಿ  ಲ್ಯಾಂಡ್ ಆಗುವಂತಾಯಿತು ಎಂದು ವೆಬ್ ಸೈಟ್ ನಲ್ಲಿ ತಿಳಿಸಲಾಗಿದೆ.

ಇಂಡಿಗೋ ವಿಮಾನ ವಿಳಂಬವಾಗಿರುವುದನ್ನು ಬೆಂಗಳೂರು ವಿಮಾನ ನಿಲ್ದಾಣದ ಮೂಲಗಳು ಖಚಿತಪಡಿಸಿವೆ.

“ಬೆಂಗಳೂರಿನಲ್ಲಿ ಹವಾಮಾನ ವೈಪರೀತ್ಯ ಕಂಡು ಬಂದ ಹಿನ್ನೆಲೆಯಲ್ಲಿ ವಿಮಾನವನ್ನು ಕೊಯಿಮತ್ತೂರಿನಲ್ಲಿ ಲ್ಯಾಂಡ್ ಮಾಡಬೇಕಾಯಿತು. ನಂತರ ವಿಮಾನವು ಬೆಳಗ್ಗೆ 9.03ಕ್ಕೆ ಬೆಂಗಳೂರಿಗೆ ಬಂದಿಳಿತು ಎಂದು ಮೂಲಗಳು ತಿಳಿಸಿವೆ. ಈ ಸಂಬಂಧ ಇಂಡಿಗೋ ಯಾವುದೇ ಪ್ರತಿಕ್ರಿಯೆಯನ್ನು ನೀಡಿಲ್ಲ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

ಸಮಸ್ತ ಜನರಿಗೆ ಸುಗಮ ಆಡಳಿತ, ಶುದ್ಧ ನೀರಿನ ಪೂರೈಕೆ: ಸ್ವಚ್ಚತೆ- ಸಂಚಾರ ವ್ಯವಸ್ಥೆಗೆ ಸಿಎಂ ಸಿದ್ದರಾಮಯ್ಯ ಕಟ್ಟಪ್ಪಣೆ

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

ವೀರೇಂದ್ರ ಪಪ್ಪಿ ಕರ್ಮಕಾಂಡ ನೋಡುತ್ತಿದ್ದರೆ CM- DCM ಇನ್ಯಾವ ಪರಿ ಲೂಟಿ ಮಾಡಿ ಹೈಕಮಾಂಡ್ ಗೆ ಕಪ್ಪ ನೀಡುತ್ತಿರಬೇಡಾ?

ಈ ಬಾರಿ ನಾನು ಸಚಿವನಾಗುವ ಭರವಸೆ ಇದೆ: ಸಂಪುಟ ವಿಸ್ತರಣೆಯೇ ನವೆಂಬರ್ ಕ್ರಾಂತಿಯಿರಬಹುದು; ಸಲೀಂ ಅಹ್ಮದ್

SCROLL FOR NEXT