ದರ್ಶನ್ ಪುಟ್ಟಣ್ಣಯ್ಯ 
ರಾಜ್ಯ

ನವಿಲು ಗರಿ ಹಾರ ತಂದ ಸಂಕಷ್ಟ: ರೈತ ಮುಖಂಡ ದರ್ಶನ್ ಪುಟ್ಟಣ್ಣಯ್ಯಗೆ ಬಂಧನ ಭೀತಿ

ಚುನಾವಣಾ ಪ್ರಚಾರದ ವೇಳೆ ನವಿಲುಗರಿಗಳ ಹಾರ ಹಾಕಿಕೊಂಡಿದ್ದ ಮೇಲುಕೋಟೆ ವಿಧಾನಸಭಾ ಕ್ಷೇತ್ರದ ರೈತ ಸಂಘದ ಅಭ್ಯರ್ಥಿ ದರ್ಶನ್ ಪುಟ್ಟಣ್ಣಯ್ಯ ಅವರ ವಿರುದ್ಧ ಸೋಮವಾರ ದೂರು ದಾಖಲಾಗಿದೆ.

ಮೈಸೂರು: ಚುನಾವಣಾ ಪ್ರಚಾರದ ವೇಳೆ ನವಿಲುಗರಿಗಳ ಹಾರ ಹಾಕಿಕೊಂಡಿದ್ದ ಮೇಲುಕೋಟೆ ವಿಧಾನಸಭಾ ಕ್ಷೇತ್ರದ ರೈತ ಸಂಘದ ಅಭ್ಯರ್ಥಿ ದರ್ಶನ್ ಪುಟ್ಟಣ್ಣಯ್ಯ ಅವರ ವಿರುದ್ಧ ಸೋಮವಾರ ದೂರು ದಾಖಲಾಗಿದೆ.

ಕ್ಷೇತ್ರದಾದ್ಯಂತ ಪಾದಯಾತ್ರೆ ಮಾಡುತ್ತಿರುವ ದರ್ಶನ್ ಪುಟ್ಟಣ್ಣಯ್ಯ ಅವರಿಗೆ ಪಾಂಡವಪುರದ ವಿಶ್ವೇಶ್ವರಯ್ಯ ಬಡಾವಣೆಯಲ್ಲಿ ಅವರ ಅಭಿಮಾನಿಯೊಬ್ಬರು ಬೃಹತ್ ನವಿಲುಗರಿಯ ಹಾರವನ್ನು ಹಾಕಿ, ಸನ್ಮಾನಿಸಿದರು. ಈ ಹಾರವೇ ಇದೀಗ ಪುಟ್ಟಣ್ಣಯ್ಯ ಅವರಿಗೆ ಸಂಕಷ್ಟವನ್ನು ಎದುರು ಮಾಡಿದೆ.

ದರ್ಶನ್ ಅವರು ನವಿಲುಗರಿಗಳ ಹಾರ ಧರಿಸಿರುವ ವಿಡಿಯೋ ಮತ್ತು ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಇದಕ್ಕೆ ಆಕ್ರೋಶ ವ್ಯಕ್ತಪಡಿಸಿದ ವನ್ಯಜೀವಿ ಕಾರ್ಯಕರ್ತರು, ಪುಟ್ಟಣ್ಣಯ್ಯ ಹಾಗೂ ಅವರ ಬೆಂಬಲಿಕರ ವಿರುದ್ಧ ದೂರು ದಾಖಲಿಸಿದ್ದಾರೆ. ವನ್ಯಜೀವಿ ಸಂರಕ್ಷಣಾ ಕಾಯ್ದೆ, 1972 ಅನ್ನು ಉಲ್ಲಂಘಿಸಿದ್ದಾರೆ ಎಂದು ಆರೋಪಿಸಿ ದೂರು ದಾಖಲಿಸಿದ್ದಾರೆ. ಈ ಸಂಬಂಧ ಅರಣ್ಯ ಅಧಿಕಾರಿಗಳು ತನಿಖೆ ಆರಂಭಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಎಸ್ ಜಾನಕಿ ಇನ್ನಿಲ್ಲ: ದಕ್ಷಿಣ ಭಾರತದ ಗಾನ ಕೋಗಿಲೆ ಮೈಸೂರಿನಲ್ಲಿ ನಿಧನ!

17 ಭಾಷೆಗಳಲ್ಲಿ 48 ಸಾವಿರ ಹಾಡುಗಳಿಗೆ ಧ್ವನಿ: 2013ರಲ್ಲಿ ಪದ್ಮಭೂಷಣ ತಿರಸ್ಕರಿಸಿದ್ದ ದಿಟ್ಟ ಗಾಯಕಿ ಎಸ್ ಜಾನಕಿ!

ಖಿನ್ನತೆಗೆ ಜಾರಿದ್ದೆ, ಗುಣಪಡಿಸಲು ಮಗು ಮಾಡಿಕೊಳ್ಳಿ ಎಂದು ವೈದ್ಯರು ಹೇಳಿದ್ರು; ಹುಡುಗನ ಎಲ್ಲಿ ಹುಡುಕಲಿ?: Endometriosis ಭಯಾನಕತೆ ಬಿಚ್ಚಿಟ್ಟ ಶಮಿತಾ ಶೆಟ್ಟಿ

ಪುಣೆಯಲ್ಲಿ ತ್ಯಾಜ್ಯದ ಗುಡ್ಡ ಬಿದ್ದು ಕಟ್ಟಡ ಕುಸಿತ: 8 ಮಂದಿ ಸಾವು; 14 ಜನರ ರಕ್ಷಣೆ, ಒಬ್ಬರು ಇನ್ನೂ ನಾಪತ್ತೆ!

ಜುಲೈ ಕಂಟಕ: ಕಳೆದ ವರ್ಷ ಹಠಾತ್ ಬಿರುಗಾಳಿಯಿಂದ ದೋಣಿ ಮಗುಚಿ 39 ಮಂದಿ ಸಾವು; ಈ ವರ್ಷ 15 ಮಂದಿ ದುರ್ಮರಣ!