ಜಿಲ್ಲಾಧಿಕಾರಿ ನಿತೇಶ್ ಪಾಟೀಲ್ 
ರಾಜ್ಯ

ವಿಧಾನಸಭಾ ಚುನಾವಣೆ: ದಕ್ಷತೆಯಿಂದ ಕೆಲಸ ಮಾಡಿ; ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ

ರಾಜ್ಯ ವಿಧಾನಸಭಾ ಚುನಾವಣೆ ಹತ್ತಿರ ಬರುತ್ತಿರುವ ಹಿನ್ನೆಲೆಯಲ್ಲಿ ಈಗಾಗಲೇ ರಚಿಸಿರುವ ತಂಡಗಳು ದಕ್ಷತೆಯಿಂದ ಕೆಲಸ ಮಾಡಬೇಕು ಎಂದು ಜಿಲ್ಲಾ ಚುನಾವಣಾಧಿಕಾರಿಯೂ ಆದ ಜಿಲ್ಲಾಧಿಕಾರಿ ನಿತೇಶ್ ಪಾಟೀಲ್ ಅವರು ಮಂಗಳವಾರ ಸೂಚನೆ ನೀಡಿದರು.

ಬೆಳಗಾವಿ: ರಾಜ್ಯ ವಿಧಾನಸಭಾ ಚುನಾವಣೆ ಹತ್ತಿರ ಬರುತ್ತಿರುವ ಹಿನ್ನೆಲೆಯಲ್ಲಿ ಈಗಾಗಲೇ ರಚಿಸಿರುವ ತಂಡಗಳು ದಕ್ಷತೆಯಿಂದ ಕೆಲಸ ಮಾಡಬೇಕು ಎಂದು ಜಿಲ್ಲಾ ಚುನಾವಣಾಧಿಕಾರಿಯೂ ಆದ ಜಿಲ್ಲಾಧಿಕಾರಿ ನಿತೇಶ್ ಪಾಟೀಲ್ ಅವರು ಮಂಗಳವಾರ ಸೂಚನೆ ನೀಡಿದರು.

ಈಗಾಗಲೇ ಗಡಿಪ್ರದೇಶಗಳ ಚೆಕ್ ಪೋಸ್ಟ್‌ಗಳಲ್ಲಿ ನಿಯೋಜನೆಗೊಂಡಿರುವ ತಂಡಗಳು ಪ್ರತಿಯೊಂದು ವಾಹನಗಳ ಮೇಲೆ ನಿಗಾ ಇಡಬೇಕು. ಪ್ರತಿ ಪೊಲೀಸ್ ಠಾಣೆಯಲ್ಲಿ ದಿನದ 24 ಗಂಟೆಯೂ ಒಂದು ತಂಡ ಕಾರ್ಯನಿರ್ವಹಿಸಬೇಕು. ಗೋದಾಮುಗಳು, ಕಾರ್ಖಾನೆಗಳು, ಕಟ್ಟಡಗಳು ಮತ್ತು ಮನೆಗಳಲ್ಲಿ ಅಕ್ರಮ ದಾಸ್ತಾನು ಕಂಡುಬಂದರೆ, ಸಂಬಂಧಿಸಿದ ಇಲಾಖೆಗಳ ತಂಡಗಳು ಪರಿಶೀಲನೆ ನಡೆಸಬೇಕು ಎಂದು ಹೇಳಿದರು.

ವಿಧಾನಸಭಾ ಕ್ಷೇತ್ರಗಳ ಚುನಾವಣಾಧಿಕಾರಿಗಳು ತಮ್ಮ ವ್ಯಾಪ್ತಿಯ ಮತಗಟ್ಟೆಗಳು, ಚೆಕ್ ಪೋಸ್ಟ್ ಮತ್ತು ಇತರ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲಿಸಬೇಕು. ಚುನಾವಣಾ ಆಯೋಗದ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಸೂಚನೆ ನೀಡಿದರು.

ಈ ವೇಳೆ ಪೊಲೀಸ್ ಆಯುಕ್ತ ಡಾ.ಎಂ.ಬಿ.ಬೋರಲಿಂಗಯ್ಯ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹರ್ಷಲ್ ಬೋಯರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಸಂಜೀವ್ ಪಾಟೀಲ್, ಉಪ ಅರಣ್ಯ ಸಂರಕ್ಷಣಾಧಿಕಾರಿ ಹರ್ಷಭಾನು ಮತ್ತಿತರರು ಉಪಸ್ಥಿತರಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT