ಮಾಡಾಳ್ ವಿರೂಪಾಕ್ಷಪ್ಪ 
ರಾಜ್ಯ

ಲಂಚ ಪ್ರಕರಣ: ಮಾಡಾಳ್ ವಿರೂಪಾಕ್ಷಪ್ಪ ವಿರುದ್ಧ ಮತ್ತೊಂದು ಪ್ರಕರಣ ದಾಖಲಿಸಲು ಲೋಕಾಯುಕ್ತ ಸಿದ್ಧತೆ

ಲಂಚ ಪ್ರಕರಣಕ್ಕೆ ಸಂಬಂಧಿಸಿದಂತೆ ಚನ್ನಗಿರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಕೆ. ಮಾಡಾಳ್ ವಿರೂಪಾಕ್ಷಪ್ಪ ವಿರುದ್ಧ ಮತ್ತೊಂದು ಪ್ರಕರಣ ದಾಖಲಿಸಲು ಕರ್ನಾಟಕ ಲೋಕಾಯುಕ್ತ ಅಧಿಕಾರಿಗಳು ಸಿದ್ಧತೆ ನಡೆಸಿದ್ದಾರೆ ಎಂದು ಮೂಲಗಳು ಗುರುವಾರ ತಿಳಿಸಿವೆ.

ಬೆಂಗಳೂರು: ಲಂಚ ಪ್ರಕರಣಕ್ಕೆ ಸಂಬಂಧಿಸಿದಂತೆ ಚನ್ನಗಿರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಕೆ. ಮಾಡಾಳ್ ವಿರೂಪಾಕ್ಷಪ್ಪ ವಿರುದ್ಧ ಮತ್ತೊಂದು ಪ್ರಕರಣ ದಾಖಲಿಸಲು ಕರ್ನಾಟಕ ಲೋಕಾಯುಕ್ತ ಅಧಿಕಾರಿಗಳು ಸಿದ್ಧತೆ ನಡೆಸಿದ್ದಾರೆ ಎಂದು ಮೂಲಗಳು ಗುರುವಾರ ತಿಳಿಸಿವೆ.

ಪ್ರಕರಣದ ಎರಡನೇ ಆರೋಪಿಯಾಗಿರುವ ಪುತ್ರ ಪ್ರಶಾಂತ್ ಮಾಡಾಳ್ ಜೈಲು ಪಾಲಾಗಿದ್ದಾರೆ, ಆದರೆ, ಪ್ರಕರಣದ ಪ್ರಮುಖ ಆರೋಪಿ ಮಾಡಾಳ್ ವಿರೂಪಾಕ್ಷಪ್ಪ ಜಾಮೀನು ಪಡೆದಿರುವುದಕ್ಕೆ ಲೋಕಾಯುಕ್ತ ಅಧಿಕಾರಿಗಳು ಅಸಮಾಧಾನಗೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಬಿಜೆಪಿ ಶಾಸಕನಿಗೆ ಜಾಮೀನು ನೀಡಿರುವುದನ್ನು ಪ್ರಶ್ನಿಸಿ ಲೋಕಾಯುಕ್ತ ಈಗಾಗಲೇ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದೆ. ಮತ್ತೊಂದೆಡೆ ಮೊದಲಿಗೆ ಸುಪ್ರೀಂ ಕೋರ್ಟ್ ಅರ್ಜಿಯ ವಿಚಾರಣೆಗೆ ನಿರಾಕರಿಸಿತ್ತು. 

ಲಂಚ ಪ್ರಕರಣದ ಪ್ರಮುಖ ಆರೋಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರ ನಿರೀಕ್ಷಣಾ ಜಾಮೀನು ಅರ್ಜಿಯನ್ನು ದಿನಬೆಳಗಾಗುವುದರೊಳಗೆ ವಿಚಾರಣೆ ನಡೆಸಿ ಮಾನ್ಯ ಮಾಡಿರುವ ನ್ಯಾಯಾಂಗ ಪ್ರಕ್ರಿಯೆಗೆ ಬೆಂಗಳೂರು ವಕೀಲರ ಸಂಘ ತೀವ್ರ ಆಘಾತ ವ್ಯಕ್ತಪಡಿಸಿದೆ. 

ಈ ಕುರಿತಂತೆ ತುರ್ತು ಸಭೆ ನಡೆಸಿದ ಸಂಘದ ಅಧ್ಯಕ್ಷ ವಿವೇಕ್‌ ರೆಡ್ಡಿ, ಪ್ರಧಾನ ಕಾರ್ಯದರ್ಶಿ ಟಿ.ಜಿ. ರವಿ ಮತ್ತು ಖಜಾಂಚಿ ಎಂ.ಟಿ.ಹರೀಶ್ ಸುಪ್ರೀಂ ಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್‌ ಅವರಿಗೆ ಪತ್ರವೊಂದನ್ನು ಬರೆದಿದ್ದು, ಸಾಮಾನ್ಯ ವ್ಯಕ್ತಿ ಮತ್ತು ವಿಐಪಿಗೆ ಒಂದೇ ರೀತಿಯ ನ್ಯಾಯ ನೀಡಬೇಕು ಎಂದು ಕೋರಿದೆ.

ದಾವಣಗೆರೆ ಜಿಲ್ಲೆಯ ಚನ್ನಗಿರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಕೆ. ಮಾಡಾಳ್ ವಿರೂಪಾಕ್ಷಪ್ಪ ಅವರ ರಾಜ್ಯ ಮತ್ತು ದೇಶದ ಇತರ ಭಾಗಗಳಲ್ಲಿನ ಆಸ್ತಿಗಳ ಕುರಿತು ಲೋಕಾಯುಕ್ತ ಅಧಿಕಾರಿಗಳು ಮಾಹಿತಿ ಸಂಗ್ರಹಿಸಲು ಆರಂಭಿಸಿದ್ದಾರೆ ಎಂದು ಮೂಲಗಳು ವಿವರಿಸಿವೆ. ಅಕ್ರಮ ಸಂಪತ್ತಿನ ಬಗ್ಗೆ ಪುರಾವೆಗಳನ್ನು ಪಡೆದ ನಂತರ, ಅವರ ವಿರುದ್ಧ ಮತ್ತೊಂದು ದೂರು ದಾಖಲಿಸುತ್ತಾರೆ ಎಂದು ಮೂಲಗಳು ಖಚಿತಪಡಿಸಿವೆ.

ಪ್ರಶಾಂತ್ ಮಾಡಾಳ್ ತನ್ನ ತಂದೆಯ ಪರವಾಗಿ ಪ್ರಸಿದ್ಧ 'ಮೈಸೂರು ಸ್ಯಾಂಡಲ್ ಸೋಪ್' ತಯಾರಿಸುವ ಸಾರ್ವಜನಿಕ ವಲಯದ ಕಂಪನಿಯಾದ ಕೆಎಸ್‌ಡಿಎಲ್‌ಗೆ ಕಚ್ಚಾ ಸಾಮಗ್ರಿಗಳನ್ನು ಖರೀದಿಸಲು ಟೆಂಡರ್ ಮಂಜೂರು ಮಾಡಲು 40 ಲಕ್ಷ ರೂಪಾಯಿ ನಗದು ಸ್ವೀಕರಿಸುವಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ. 

ಕೆಎಸ್‌ಡಿಎಲ್‌ನ ಅಧ್ಯಕ್ಷರಾಗಿದ್ದ ಶಾಸಕ ವಿರೂಪಾಕ್ಷಪ್ಪ ಅವರು ಘಟನೆಯ ನಂತರ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಆರೋಪಿ ಬಿಜೆಪಿ ಶಾಸಕರಾದ ಮಾಡಾಳ್ ವಿರೂಪಾಕ್ಷಪ್ಪ ಮತ್ತು ಪ್ರಶಾಂತ್ ಮಾಡಾಳ್ ಅವರ ನಿವಾಸದಲ್ಲಿ ಅಧಿಕಾರಿಗಳು 8.12 ಕೋಟಿ ರೂಪಾಯಿ ಮತ್ತು 1.6 ಕೆಜಿ ಚಿನ್ನವನ್ನು ವಶಪಡಿಸಿಕೊಂಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

SCROLL FOR NEXT