ಸಿಎಂ ಬೊಮ್ಮಾಯಿ 
ರಾಜ್ಯ

ಸಾರಿಗೆ ನೌಕರರ ವೇತನ ಶೇ.15ರಷ್ಟು ಹೆಚ್ಚಳಕ್ಕೆ ನಿರ್ಧಾರ, ಇಂದೇ ಆದೇಶ: ಸಿಎಂ ಬೊಮ್ಮಾಯಿ

ಕೆಪಿಟಿಸಿಎಲ್ ಮತ್ತು ಸಾರಿಗೆ ನೌಕರರ ವೇತನ ಹೆಚ್ಚಳಕ್ಕೆ ನಿರ್ಧಾರ ಕೈಗೊಳ್ಳಲಾಗಿದ್ದು, ಇಂದೇ ಅಧಿಕೃತ ಆದೇಶ ಹೊರಡಿಸುತ್ತೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಗುರುವಾರ ಹೇಳಿದ್ದಾರೆ.

ಬೆಂಗಳೂರು: ಕೆಪಿಟಿಸಿಎಲ್ ಮತ್ತು ಸಾರಿಗೆ ನೌಕರರ ವೇತನ ಹೆಚ್ಚಳಕ್ಕೆ ನಿರ್ಧಾರ ಕೈಗೊಳ್ಳಲಾಗಿದ್ದು, ಇಂದೇ ಅಧಿಕೃತ ಆದೇಶ ಹೊರಡಿಸುತ್ತೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಗುರುವಾರ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆಪಿಟಿಸಿಎಲ್ ನೌಕರರ ಶೇ.20 ರಷ್ಟು ವೇತನ ಮತ್ತು ಸಾರಿಗೆ ನೌಕರರ ಶೇ.15 ರಷ್ಟು ವೇತನ ಹೆಚ್ಚಳ ಮಾಡಲು ನಿರ್ಧರಿಸಲಾಗಿದ್ದು, ಈ ಕುರಿತು ಇಂದೇ ಅಧಿಕೃತ ಆದೇಶ ಹೊರಡಿಸುತ್ತೇವೆ ಎಂದು ಹೇಳಿದರು.

ವೇತನ ಹೆಚ್ಚಳ ಮಾಡುವಂತೆ ಆಗ್ರಹಿಸಿ ಸಾರಿಗೆ ನೌಕರರು ಮುಷ್ಕರಕ್ಕೆ ಮುಂದಾಗಿದ್ದು. ನೌಕರರ ಸಂಘದ ಜೊತೆಗೆ ಸರ್ಕಾರ ಸರಣಿ ಮಾತುಕತೆಗಳನ್ನು ನಡೆಸುತ್ತಲೇ ಇದೆ.

ನೌಕರರ ಬೇಡಿಕೆ ಹಿನ್ನೆಲೆಯಲ್ಲಿ ಶೇ. 10 ರಷ್ಟು ವೇತನ ಹೆಚ್ಚಳಕ್ಕೆ ಕ್ರಮ ಕೈಗೊಳ್ಳುವುದಾಗಿ ಸಾರಿಗೆ ಸಚಿವ ಶ್ರೀರಾಮುಲು ಭರವಸೆ ಕೊಟ್ಟಿದ್ದರು. ಆದರೆ. ಇದಕ್ಕೆ ಸಾರಿಗೆ ನೌಕರರು ಒಪ್ಪಿಗೆ ನೀಡಿರಲಿಲ್ಲ. ಈ ಹಿನ್ನೆಲೆಯಲ್ಲಿ ಶೇ.15 ರಷ್ಟು ಏರಿಕೆ ಮಾಡಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ಮುಂದಿನ 24 ಗಂಟೆಯಲ್ಲಿ ಕರ್ನಾಟಕದಲ್ಲಿ ತೀವ್ರ ಶೀತಗಾಳಿ?; IMD ಎಚ್ಚರಿಕೆ

ಬೆಳಗಾವಿ ಚಳಿಗಾಲದ ಅಧಿವೇಶನಕ್ಕೆ 28 ಕೋಟಿ ರೂ. ಖರ್ಚು, ಯಾವುದಕ್ಕೆ ಎಷ್ಟು ಖರ್ಚು? ಇಲ್ಲಿದೆ ಮಾಹಿತಿ

ಒಡಿಶಾದ ರೂರ್ಕೆಲಾ ಬಳಿ ಸಣ್ಣ ವಿಮಾನ ಪತನ; ಪೈಲಟ್ ಸೇರಿ ಆರು ಜನರಿಗೆ ಗಂಭೀರ ಗಾಯ

ಬಾಂಬ್ ದಾಳಿ ಆತಂಕ: ಮಣಿಪುರ ಕಣಿವೆಯಲ್ಲಿ ಪೆಟ್ರೋಲ್ ಪಂಪ್‌ಗಳು ಅನಿರ್ದಿಷ್ಟಾವಧಿಗೆ ಬಂದ್!

MGNREGA ಕುರಿತು ಚರ್ಚಿಸಲು ವಿಶೇಷ ಅಧಿವೇಶನ; ಜ. 26 ರಿಂದ ಕಾಂಗ್ರೆಸ್​​ನಿಂದ 'ಮನ್ರೇಗಾ ಉಳಿಸಿ' ಪಾದಯಾತ್ರೆ

SCROLL FOR NEXT