ಸಿಎಂ ಬೊಮ್ಮಾಯಿ 
ರಾಜ್ಯ

ಬಂಡವಾಳಶಾಹಿ-ಕಮ್ಯುನಿಸಂಗೆ ಸಹಕಾರಿ ರಂಗ ಪರ್ಯಾಯ ಶಕ್ತಿಯಾಗಬಲ್ಲದು: ಸಿಎಂ ಬೊಮ್ಮಾಯಿ

ಕರ್ನಾಟಕದಲ್ಲಿ ಸಹಕಾರಿ ಕ್ಷೇತ್ರ ಪ್ರಗತಿಯಲ್ಲಿದ್ದು, ಬಂಡವಾಳಶಾಹಿ ಮತ್ತು ಕಮ್ಯುನಿಸಂಗೆ ಸಹಕಾರಿ ರಂಗ ಪರ್ಯಾಯ ಶಕ್ತಿಯಾಗಬಲ್ಲದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಬುಧವಾರ ಹೇಳಿದರು.

ಬೆಳಗಾವಿ: ಕರ್ನಾಟಕದಲ್ಲಿ ಸಹಕಾರಿ ಕ್ಷೇತ್ರ ಪ್ರಗತಿಯಲ್ಲಿದ್ದು, ಬಂಡವಾಳಶಾಹಿ ಮತ್ತು ಕಮ್ಯುನಿಸಂಗೆ ಸಹಕಾರಿ ರಂಗ ಪರ್ಯಾಯ ಶಕ್ತಿಯಾಗಬಲ್ಲದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಬುಧವಾರ ಹೇಳಿದರು.

ಡಾ. ಜೀರಗೆ ಸಭಾಂಗಣ, ಜೆಎನ್‍ಎಂಸಿ, ಮೆಡಿಕಲ್ ಕಾಲೇಜು ಅವರಣದಲ್ಲಿ ಶ್ರೀ ಮಹಾಂತೇಶ ಕವಟಗಿಮಠ ಸೌಹಾರ್ದ ಸಹಕಾರಿ ನೂತನ ಕಟ್ಟಡ ಮತ್ತು ಸಂಸ್ಥೆಯ ಉದ್ಘಾಟನೆ ನೆರವೇರಿಸಿ ಮುಖ್ಯಮಂತ್ರಿಗಳು ಮಾತನಾಡಿದರು.

ಸಹಕಾರಿ ರಂಗ ಬಂಡವಾಳಶಾಹಿ ಮತ್ತು ಕಮ್ಯುನಿಸಂಗೆ ಪರ್ಯಾಯವಾಗಿರುವ ಪ್ರಬಲ ಶಕ್ತಿಯಾಗಿದೆ. ಇದು ಜನರನ್ನು ಒಳಗೊಳ್ಳುತ್ತದೆ ಮತ್ತು ವ್ಯವಸ್ಥೆಯನ್ನು ನಿಯಂತ್ರಿಸಲು ನಾಯಕನಿಗೆ ದಾರಿ ಮಾಡಿಕೊಡದೆ ಅವರಿಗಾಗಿ ಕೆಲಸ ಮಾಡುತ್ತದೆ ಎಂದು ಹೇಳಿದರು.

ರಾಜ್ಯದ ಕೆಲವು ಭಾಗಗಳಲ್ಲಿ ವಿಶೇಷವಾಗಿ ಬೆಳಗಾವಿಯಲ್ಲಿ ಸಹಕಾರಿ ಕ್ಷೇತ್ರವು ದೊಡ್ಡ ಮಟ್ಟದಲ್ಲಿ ಬೆಳೆದಿದೆ. ಜಿಲ್ಲೆಯು ಹಲವಾರು ವರ್ಷಗಳಿಂದ ಸಹಕಾರಿ ಹೋರಾಟಗಳಲ್ಲಿ ಮುಂಚೂಣಿಯಲ್ಲಿದೆ. ಸಹಕಾರಿ ರಂಗಕ್ಕೆ ಗಣನೀಯ ಕೊಡುಗೆ ಕೊಟ್ಟಿರುವ ಜಿಲ್ಲೆ ಬೆಳಗಾವಿ. ಸಹಕಾರಿ ಸಂಸ್ಕೃತಿ ಬೆಳಗಾವಿಯಲ್ಲಿದೆ. ಬೆಳಗಾವಿಯ ಸಹಕಾರಿ ರಂಗದಲ್ಲಿ ಹೆಚ್ಚಿನ ಬಂಡವಾಳವಿದ್ದು, ಹೆಚ್ಚಿನ ಸಾಲಸೌಲಭ್ಯವನ್ನೂ ತನ್ನ ಗ್ರಾಹಕರಿಗೆ ನೀಡಲಾಗುತ್ತಿದೆ.

ನೆರೆಯ ರಾಜ್ಯ ಮಹಾರಾಷ್ಟ್ರ ಹಾಗೂ ಗುಜರಾತ್ ಗಳಲ್ಲಿ ಸಹಕಾರ ಕ್ಷೇತ್ರ ಸರ್ಕಾರವನ್ನಾಳುತ್ತದೆ. ಸಹಕಾರಿ ರಂಗವನ್ನು ಕಾನೂನುಬದ್ಧವಾಗಿ, ನೈತಿಕವಾಗಿ ಬೆಳೆಸಿದರೆ ಅದು ದೊಡ್ಡ ಮಟ್ಟದಲ್ಲಿ ಅಭಿವೃದ್ಧಿಯಾಗುತ್ತದೆ. ಬಂಡವಾಳಶಾಹಿಗಳು ಮತ್ತು ಕಮ್ಯುನಿಸಂಗೆ ಸಹಕಾರಿ ರಂಗ ಪರ್ಯಾಯ ಶಕ್ತಿಯಾಗಬಲ್ಲದು. ಪ್ರಜಾಪ್ರಭುತ್ವದ ತಳಹದಿಯ ಮೇಲೆ ನಿಂತಿರುವ, ಒಬ್ಬ ವ್ಯಕ್ತಿಗೆ ಸೀಮಿತವಾಗದಿರುವ ಸಹಕಾರಿ ರಂಗ ಮತ್ತಷ್ಟು ಬೆಳೆಯಬೇಕು ಎಂದು ತಿಳಿಸಿದರು.

ಆದರೆ, ಗುಜರಾತ್ ಮತ್ತು ಮಹಾರಾಷ್ಟ್ರ ರಾಜ್ಯಗಳಲ್ಲಿ ಸಹಕಾರಿ ಕ್ಷೇತ್ರದಲ್ಲಿ ಹೊಸ ಎತ್ತರಕ್ಕೆ ಏರಿವೆ. ಕರ್ನಾಟಕದ ಕೆಲವು ಭಾಗಗಳಲ್ಲಿ ಈ ಕ್ಷೇತ್ರವು ಅಗಾಧವಾದ ಪ್ರಗತಿಯನ್ನು ಸಾಧಿಸಿರಬಹುದು. ಆದರೆ, ಗುಜರಾತ್ ಮತ್ತು ಮಹಾರಾಷ್ಟ್ರಕ್ಕೆ ಸಮಾನವಾಗಿ ರಾಜ್ಯವು ಇನ್ನೂ ಅಭಿವೃದ್ಧಿ ಹೊಂದಿಲ್ಲ, ಈ ಎರಡೂ ರಾಜ್ಯಗಳಲ್ಲಿ ಸಹಕಾರಿ ಕ್ಷೇತ್ರವು ಎಷ್ಟು ಪ್ರಬಲವಾಗಿದೆ ಮತ್ತು ಶಕ್ತಿಯುತವಾಗಿದೆಯೆಂದರೆ ಅಲ್ಲಿ ಸಹಕಾರಿ ಸಂಸ್ಥೆಗಳು ಸರ್ಕಾರವನ್ನು ಆಳುತ್ತಿವೆ. ನಮ್ಮ  ಕರ್ನಾಟಕದಲ್ಲಿ ಸರ್ಕಾರವು ಸಹಕಾರಿ ಸಂಘಗಳನ್ನು ಆಳುತ್ತದೆ.

ಸಹಕಾರಿ ಕ್ಷೇತ್ರದಲ್ಲಿ ತೊಡಗಿಸಿಕೊಂಡಿರುವ ಜನರು ತಮ್ಮ ವ್ಯವಹಾರವನ್ನು ನಿರ್ಮಿಸುವ ಮತ್ತು ವಿಸ್ತರಿಸುವ ಅವಶ್ಯಕತೆಯಿದೆ, ಇತರ ಎಲ್ಲ ಅಂಶಗಳಿಗಿಂತ ನೈತಿಕ ಮೌಲ್ಯಗಳಿಗೆ ಹೆಚ್ಚಿನ ಗಮನವನ್ನು ನೀಡಬೇಕಿದೆ. ಪ್ರಧಾನಿ ಮೋದಿಯವರು ಸಹಕಾರ ಕ್ಷೇತ್ರದಲ್ಲಿ ಅಮೂಲಾಗ್ರ ಬದಲಾವಣೆಯನ್ನು ತರುತ್ತಿದ್ದಾರೆ. ಈ ರಂಗದಲ್ಲಿನ ಆರ್ಥಿಕತೆಯನ್ನು ವೃದ್ಧಿಸಿ, ವಿವಿಧ ಹಣಕಾಸಿನ ಸಂಸ್ಥೆಗಳನ್ನು ಈ ವ್ಯವಸ್ಥೆಯಲ್ಲಿ ಜೋಡಿಸಬೇಕು. ಕೃಷಿ ಪತ್ತಿನ ಸಹಕಾರ ರಂಗ ಸಂಪೂರ್ಣವಾಗಿ ಒಂದೇ ವ್ಯವಸ್ಥೆಯಡಿ ಬರಬೇಕೆನ್ನುವ ಉದ್ದೇಶದಿಂದ ಕೇಂದ್ರ ಸರ್ಕಾರ ಸಹಕಾರ ಇಲಾಖೆ ಸ್ಥಾಪಿಸಲಾಗಿದೆ ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT