ಅಪಘಾಕ್ಕೀಡಾದ ಕಾರು 
ರಾಜ್ಯ

ವಿಜಯಪುರ: ಕಾರು ಅಪಘಾತದಲ್ಲಿ ಕೇಂದ್ರ ಸಚಿವೆ ಸಾಧ್ವಿ ನಿರಂಜನಾ‌ ಜ್ಯೋತಿಗೆ ಗಾಯ

ಕೇಂದ್ರ ಸಚಿವೆ ಸಾಧ್ವಿ ನಿರಂಜನಾ‌ ಜ್ಯೋತಿ ಅವರು ಪ್ರಯಾಣಿಸುತ್ತಿದ್ದ ಕಾರು ಗುರುವಾರ ವಿಜಯಪುರ ನಗರದ ಹೊರವಲಯದ ಜುಮನಾಳ ಗ್ರಾಮದ ಸಮೀಪ ಅಪಘಾತಕ್ಕಿಡಾಗಿದ್ದು,. ಸಚಿವೆ ಹಾಗೂ ಕಾರು ಚಾಲಕ ಗಾಯಗೊಂಡಿದ್ದಾರೆ...

ವಿಜಯಪುರ: ಕೇಂದ್ರ ಸಚಿವೆ ಸಾಧ್ವಿ ನಿರಂಜನಾ‌ ಜ್ಯೋತಿ ಅವರು ಪ್ರಯಾಣಿಸುತ್ತಿದ್ದ ಕಾರು ಗುರುವಾರ ವಿಜಯಪುರ ನಗರದ ಹೊರವಲಯದ ಜುಮನಾಳ ಗ್ರಾಮದ ಸಮೀಪ ಅಪಘಾತಕ್ಕಿಡಾಗಿದ್ದು,. ಸಚಿವೆ ಹಾಗೂ ಕಾರು ಚಾಲಕ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ರಾಷ್ಟ್ರೀಯ ಹೆದ್ದಾರಿ 50ರಲ್ಲಿ ಈ ಅಪಘಾತ ಸಂಭವಿಸಿದ್ದು, ಕೇಂದ್ರ ಸಚಿವರ ಇನ್ನೋವಾ ಕಾರು ಟ್ರಕ್‌ಗೆ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಸಚಿವರು ಮತ್ತು ಅವರ ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಪ್ರಥಮ ಚಿಕಿತ್ಸೆ ನೀಡಲಾಗಿದೆ.

ಟ್ರಕ್ ಚಾಲಕ ಪಾನಮತ್ತನಾಗಿದ್ದ ಎನ್ನಲಾಗಿದ್ದು, ಆತನನ್ನು ಪೊಲೀಸರು ಬಂಧಿಸಿದ್ದಾರೆ.

ಭಾರತೀಯ ಜನತಾ ಪಕ್ಷ(ಬಿಜೆಪಿ) ಇಂದು ವಿಜಯಪುರದಲ್ಲಿ ಆಯೋಜಿಸಿದ್ದ ಮಹಿಳಾ ಮಹಿಳಾ ಸಮಾವೇಶದಲ್ಲಿ ಭಾಗವಹಿಸಲು ಸಾಧ್ವಿ ನಿರಂಜನಾ‌ ಜ್ಯೋತಿ ಅವರು ಆಗಮಿಸಿದ್ದರು.

ಅಪಘಾತದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಜ್ಯೋತಿ ಅವರು, "ದೇವರ ದಯೆಯಿಂದ ನಾನು ಸುರಕ್ಷಿತವಾಗಿದ್ದೇನೆ. ಕಾರು ಚಾಲಕನ ಎಚ್ಚರಿಕೆಯು ಟ್ರಕ್ ಅಡಿಯಲ್ಲಿ ಸಿಲುಕದಂತೆ ನಮ್ಮನ್ನು ರಕ್ಷಿಸಿದೆ. ನಮಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT