ಬಜರಂಗದಳ ಆಕ್ಷೇಪ ವ್ಯಕ್ತಪಡಿಸಿದ ನಂತರ ಹೋಟೆಲ್‌ನಿಂದ ಹೊರ ಬಂದ ಮಹಿಳೆಯರು 
ರಾಜ್ಯ

ಶಿವಮೊಗ್ಗ: ತಡರಾತ್ರಿ ಮಹಿಳೆಯರ ಪಾರ್ಟಿ ತಡೆದ ಭಜರಂಗದಳ ಕಾರ್ಯಕರ್ತರು

ಶಿವಮೊಗ್ಗ ನಗರದಲ್ಲಿ ಶುಕ್ರವಾರ ಸಂಜೆ ಹೋಟೆಲ್‌ನಲ್ಲಿ ಆಯೋಜಿಸಲಾಗಿದ್ದ ‘ಲೇಟ್ ನೈಟ್ ಲೇಡಿಸ್ ಪಾರ್ಟಿ’ಯನ್ನು ಬಜರಂಗದಳದ ಕಾರ್ಯಕರ್ತರು ತಡೆದ ಘಟನೆ ಶುಕ್ರವಾರ ನಡೆದಿದೆ.

ಶಿವಮೊಗ್ಗ: ಶಿವಮೊಗ್ಗ ನಗರದಲ್ಲಿ ಶುಕ್ರವಾರ ಸಂಜೆ ಹೋಟೆಲ್‌ನಲ್ಲಿ ಆಯೋಜಿಸಲಾಗಿದ್ದ ‘ಲೇಟ್ ನೈಟ್ ಲೇಡಿಸ್ ಪಾರ್ಟಿ’ಯನ್ನು ಬಜರಂಗದಳದ ಕಾರ್ಯಕರ್ತರು ತಡೆದ ಘಟನೆ ಶುಕ್ರವಾರ ನಡೆದಿದೆ.

ಕುವೆಂಪು ರಸ್ತೆಯಲ್ಲಿರುವ ಹೋಟೆಲ್‌ನಲ್ಲಿ ಈ ಪಾರ್ಟಿ ಆಯೋಜಿಸಲಾಗಿತ್ತು. ಭಜರಂಗದಳ ಕಾರ್ಯಕರ್ತರು ಲೇಟ್ ನೈಟ್ ಪಾರ್ಟಿಗೆ ತೀವ್ರ ವಿರೋಧ ವ್ಯಕ್ತಪಡಿಸಿದರು. ಯಾವುದೇ ಅಹಿತಕರ ಘಟನೆ ನಡೆಯದಂತೆ ತಡೆಯಲು ಪೊಲೀಸರು ಕೂಡ ಸ್ಥಳಕ್ಕೆ ಬಂದಿದ್ದರು.

ಬಜರಂಗದಳದ ಕಾರ್ಯಕರ್ತರು ಪಾರ್ಟಿಗೆ ಆಕ್ಷೇಪ ವ್ಯಕ್ತಪಡಿಸಿದ ನಂತರ ಮಹಿಳೆಯರು, ಪುರುಷರು ಮತ್ತು ಕೆಲವು ಮಕ್ಕಳು ಸೇರಿದಂತೆ ಹಲವರು ಹೋಟೆಲ್‌ನಿಂದ ಹೊರಗೆ ಬರುತ್ತಿರುವುದು ಕಂಡುಬಂದಿತು. 
ತಡರಾತ್ರಿ ಪಾರ್ಟಿ ಆಯೋಜಿಸಲಾಗಿದೆ ಎಂದು ಬಜರಂಗದಳದ ಮುಖಂಡ ರಾಜೇಶ್ ಗೌಡ ಸುದ್ದಿಗಾರರಿಗೆ ತಿಳಿಸಿದ್ದಾರೆ.

''ಮಹಿಳೆಯರ ಲೇಟ್ ನೈಟ್ ಪಾರ್ಟಿ ನಡೆಯಲಿರುವ ಬಗ್ಗೆ ವಾರದ ಹಿಂದೆಯೇ ಪೊಲೀಸರ ಗಮನಕ್ಕೆ ತಂದಿದ್ದೆವು. ಮಲೆನಾಡು ಭಾಗದಲ್ಲಿ ಇಂತಹ ಪಾರ್ಟಿಗಳನ್ನು ಆಯೋಜಿಸಬಾರದು. ಆದರೆ, ಆಕ್ಷೇಪದ ನಡುವೆಯೂ ಪಾರ್ಟಿ ಆಯೋಜಿಸಲಾಗಿತ್ತು. ನಾವು ಪೊಲೀಸರೊಂದಿಗೆ ಹೋಗಿ ಪಾರ್ಟಿಯನ್ನು ನಿಲ್ಲಿಸಿದೆವು. ಅಲ್ಲಿ ಪಬ್‌ನಂತಹ ವಾತಾವರಣ ಇತ್ತು ” ಎಂದು ರಾಜೇಶ್ ಗೌಡ ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

ಶಿಬು ಸೊರೇನ್ 'ರಾಜ್ಯದ ಪಿತಾಮಹ' ಎಂದು ಘೋಷಿಸುವಂತೆ ಜೆಎಂಎಂ ಆಗ್ರಹ

SCROLL FOR NEXT