ಸಂಗ್ರಹ ಚಿತ್ರ 
ರಾಜ್ಯ

ಸರ್ಕಾರದ ಭರವಸೆ ತಿರಸ್ಕರಿಸಿದ ಸಾರಿಗೆ ನೌಕರರು: ಮಾರ್ಚ್.21ರಿಂದ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ನಿರ್ಧಾರ

ಶೇ.15ರಷ್ಟು ವೇತನ ಹೆಚ್ಚಳ ಮಾಡುವ ಸರ್ಕಾರದ ಭರವಸೆಯನ್ನು ಸಾರಿಗೆ ನೌಕರರು ತಿರಸ್ಕರಿಸಿದ್ದು, ಈ ಹಿಂದೆ ನಿರ್ಧರಿಸಿದಂತೆಯೇ ಮಾರ್ಚ್ 21ರಿಂದ ಅನಿರ್ದಿಷ್ಟಾವಧಿ ಮುಷ್ಕರ ನಡೆಸಲು ನಿರ್ಧರಿಸಿದ್ದಾರೆ.

ಬೆಂಗಳೂರು: ಶೇ.15ರಷ್ಟು ವೇತನ ಹೆಚ್ಚಳ ಮಾಡುವ ಸರ್ಕಾರದ ಭರವಸೆಯನ್ನು ಸಾರಿಗೆ ನೌಕರರು ತಿರಸ್ಕರಿಸಿದ್ದು, ಈ ಹಿಂದೆ ನಿರ್ಧರಿಸಿದಂತೆಯೇ ಮಾರ್ಚ್ 21ರಿಂದ ಅನಿರ್ದಿಷ್ಟಾವಧಿ ಮುಷ್ಕರ ನಡೆಸಲು ನಿರ್ಧರಿಸಿದ್ದಾರೆ.

ಮುಖ್ಯಮಂತ್ರಿಗಳ ಹೇಳಿಕೆಯಲ್ಲಿ ಸ್ಪಷ್ಟತೆ ಇಲ್ಲ. ವೇತನ ಹೆಚ್ಚಳ ಸಂಬಂಧ ಅಧಿಕೃತ ಆದೇಶಗಳು ಬಂದಿಲ್ಲ. ಈ ಕುರಿತ ವಿವರಗಳೂ ನಮಗೆ ಸಿಕ್ಕಿಲ್ಲ. ಶೇ.20ಕ್ಕಿಂತ ಕಡಿಮೆ ವೇತನ ಆದೇಶವನ್ನು ನಾವು ಸ್ವೀಕರಿಸುವುದಿಲ್ಲ. ಸರಕಾರ ಏಕಪಕ್ಷೀಯವಾಗಿ ಶೇ.15ರಷ್ಟು ವೇತನ ಹೆಚ್ಚಳ ಮಾಡಲು ನಿರ್ಧರಿಸಿದ್ದು, ಇದು ನ್ಯಾಯಸಮ್ಮತವಲ್ಲ. ಹೀಗಾಗಿ ಈ ಹಿಂದೆ ಘೋಷಿಸಿದಂತೆ ಮಾರ್ಚ್ 21 ರಿಂದು ಅನಿರ್ದಿಷ್ಟಾವಧಿ ಮುಷ್ಕರ ನಡೆಸಲಾಗುವುದು ಎಂದು ಕೆಎಸ್‌ಆರ್‌ಟಿಸಿ ಜಂಟಿ ಕ್ರಿಯಾ ಸಮಿತಿ (ಜೆಎಸಿ) ಪ್ರಕಟಣೆಯಲ್ಲಿ ತಿಳಿಸಿದೆ.

ಎಸ್ಕಾಂ ಸಿಬ್ಬಂದಿಗೆ ಶೇ.20ರಷ್ಟು ವೇತನ ಹೆಚ್ಚಳ
2023ರ ಏಪ್ರಿಲ್ 22ರಿಂದ ಅನ್ವಯವಾಗುವಂತೆ ಕೆಪಿಟಿಸಿಎಲ್ ಮತ್ತು ಎಸ್ಕಾಂ ನೌಕರರ ವೇತನವನ್ನು ಶೇ.20ರಷ್ಟು ಹೆಚ್ಚಿಸಲಾಗುವುದು ಎಂದು ಇಂಧನ ಸಚಿವ ವಿ.ಸುನೀಲ್ ಕುಮಾರ್ ಗುರುವಾರ ಹೇಳಿದ್ದಾರೆ.

ವೇತನ ಹೆಚ್ಚಳ ಮಾಡುವಂತೆ ನೌಕರರು ಹಲವು ಬಾರಿ ಮನವಿ ಮಾಡಿದ್ದು, ಅದಕ್ಕೆ ಸಿಎಂ ಒಪ್ಪಿಗೆ ಸೂಚಿಸಿದ್ದಾರೆಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇರಾನ್‌ ಸರ್ಕಾರ ವಿರುದ್ಧ ಪ್ರತಿಭಟನೆ: ಹಿಂಸಾಚಾರದಲ್ಲಿ ಮೃತಪಟ್ಟವರ ಸಂಖ್ಯೆ 116 ಕ್ಕೆ ಏರಿಕೆ

ಕರ್ನಾಟಕದ ಮುಕುಟಕ್ಕೆ ಮತ್ತೊಂದು ಗರಿ: ಬೆಂಗಳೂರು ಮೂಲದ ಮೇಜರ್ Swathi ShanthaKumarಗೆ ವಿಶ್ವಸಂಸ್ಥೆ ಸೆಕ್ರೆಟರಿ ಜನರಲ್ ಪ್ರಶಸ್ತಿ!

ಕೇಂದ್ರ ಬಜೆಟ್ 2026-27: ರಾಜ್ಯದ ಹಣಕಾಸು ಸಮತೋಲನ ಪುನಃಸ್ಥಾಪಿಸಲು ಹೆಚ್ಚಿನ ಅನುದಾನ ಒದಗಿಸಿ; ಕೇಂದ್ರಕ್ಕೆ ರಾಜ್ಯ ಸರ್ಕಾರ ಆಗ್ರಹ

Grok ಅಶ್ಲೀಲ ಕಂಟೆಂಟ್ ವಿವಾದ: ಕೇಂದ್ರ ಸರ್ಕಾರಕ್ಕೆ ಕೊನೆಗೂ ಮಣಿದ X, 600 ಖಾತೆಗಳ ಡಿಲೀಟ್!

ಕೌಟುಂಬಿಕ ಹಿಂಸಾಚಾರ ಸಂತ್ರಸ್ಥರಿಗೆ ಬೆಂಗಳೂರಿನಲ್ಲಿ ಅಣಬೆ ಕೃಷಿ ತರಬೇತಿ

SCROLL FOR NEXT