ಸಂಗ್ರಹ ಚಿತ್ರ 
ರಾಜ್ಯ

ಅನುಮತಿ ಪಡೆಯದೆ ಅಧಿಕಾರಿಗಳ ವರ್ಗಾವಣೆ: ಸರ್ಕಾರದ ನಡೆಗೆ ಚುನಾವಣಾ ಆಯೋಗ ಕೆಂಡಾಮಂಡಲ!

ವಿಧಾನಸಭೆ ಚುನಾವಣೆ ಹತ್ತಿರ ಬರುತ್ತಿದ್ದು, ಈ ನಡುವಲ್ಲೇ ಅನುಮತಿ ಇಲ್ಲದೆ ಚುನಾವಣಾ ಸಂಬಂಧಿತ ಕಾರ್ಯಗಳಲ್ಲಿ ನಿರತರಾಗಿರುವ ಅಧಿಕಾರಿಗಳನ್ನು ವರ್ಗಾವಣೆ ಮಾಡುತ್ತಿರುವ ಸರ್ಕಾರದ ವಿರುದ್ಧ ಚುನಾವಣಾ ಆಯೋಗ ತೀವ್ರ ಅಸಮಾಧಾನ ಹೊರಹಾಕಿದೆ.

ಬೆಂಗಳೂರು: ವಿಧಾನಸಭೆ ಚುನಾವಣೆ ಹತ್ತಿರ ಬರುತ್ತಿದ್ದು, ಈ ನಡುವಲ್ಲೇ ಅನುಮತಿ ಇಲ್ಲದೆ ಚುನಾವಣಾ ಸಂಬಂಧಿತ ಕಾರ್ಯಗಳಲ್ಲಿ ನಿರತರಾಗಿರುವ ಅಧಿಕಾರಿಗಳನ್ನು ವರ್ಗಾವಣೆ ಮಾಡುತ್ತಿರುವ ಸರ್ಕಾರದ ವಿರುದ್ಧ ಚುನಾವಣಾ ಆಯೋಗ ತೀವ್ರ ಅಸಮಾಧಾನ ಹೊರಹಾಕಿದೆ.

ಈ ಸಂಬಂಧ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾಗೆ ಮುಖ್ಯ ಚುನಾವನಾ ಆಯುಕ್ತ  ಮನೋಜ್ ಕುಮಾರ್ ಮೀನಾ ಅವರು ಪತ್ರ ಬರೆದಿದ್ದು, ಆಯೋಗ ಅನುಮತಿ ಇಲ್ಲದೆ ಅಧಿಕಾರಿಗಳನ್ನು ವರ್ಗಾವಣೆ ಮಾಡದಂತೆ ಸೂಚಿಸಿದ್ದಾರೆ.

ರಾಜ್ಯದಲ್ಲಿ ಯಾವಾಗ ಬೇಕಾದರೂ ಚುನಾವಣೆ ಘೋಷಣೆಯಾಗಬಹುದು. ಚುನಾವಣಾ ಆಯೋಗ ಚುನಾವಣಾ ದಿನಾಂಕ ಘೋಷಣೆಯಾಗುತ್ತಿದ್ದಂತೆಯೇ ಚುನಾವಣಾ ನೀತಿ ಸಂಹಿತೆ ಜಾರಿಯಾಗಲಿದೆ. ಪರಿಸ್ಥಿತಿ ಹೀಗಿರುವಾಗ ಈ ಸಂದರ್ಭದಲ್ಲಿ ಚುನಾವಣಾ ಕರ್ತವ್ಯದಲ್ಲಿದ್ದ ಹಲವು ಸರ್ಕಾರಿ ಅಧಿಕಾರಿಗಳು ಮತ್ತು ಸಿಬ್ಬಂದಿಯನ್ನು ಮುಖ್ಯ ಚುನಾವಣಾಧಿಕಾರಿಗಳ ಅನುಮತಿ ಪಡೆಯದೆ ವರ್ಗಾವಣೆ ಮಾಡಲಾಗಿದೆ. ಹೀಗಾಗಿ ಆಯೋಗದ ಅನುಮತಿ ಪಡೆಯದೆಯೇ ಅಧಿಕಾರಿಗಳನ್ನು ವರ್ಗಾವಣೆ ಮಾಡಬಾರದು ಎಂದು ಸೂಚಿಸಿರುವುದು ಪತ್ರದಲ್ಲಿ ತಿಳಿದುಬಂದಿದೆ.

ವರ್ಗಾವಣೆಗೆ ಮುಖ್ಯ ಚುನಾವಣಾ ಆಯುಕ್ತರ ಅನುಮತಿ ಪಡೆಯುವಂತೆ ಮಾರ್ಚ್ 8 ರಂದೇ ಪತ್ರ ಬರೆದಿದ್ದವು. ಹೀಗಿದ್ದರೂ ಹಲವು ಇಲಾಖೆಗಳು ಅನುಮತಿ ಇಲ್ಲದೆಯೇ ವರ್ಗಾವಣೆ ಮಾಡಿವೆ. ಅಧಿಕಾರಿಗಳು ಮತ್ತು ಇತರ ನೌಕರರನ್ನು ವರ್ಗಾವಣೆ ಮಾಡುವ ಮೊದಲು ಆಯೋಗದ ಅನುಮತಿ ಪಡೆಯುವಂತೆ ವಿವಿಧ ಇಲಾಖೆಗಳ ಮುಖ್ಯಸ್ಥರು ಮತ್ತು ಅಧಿಕಾರಿಗಳಿಗೆ ನಿರ್ದೇಶನ ನೀಡುವಂತೆ ಮುಖ್ಯ ಕಾರ್ಯದರ್ಶಿಗಳಿಗೆ ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

'ನಿಮ್ಮ ಭಾಷಣ ನಾಚಿಕೆಯಿಲ್ಲದೆ ಸಮರ್ಥನೆ ಮಾಡಿಕೊಂಡಂತೆ ಇತ್ತು': 1947ರ ಐನ್ ಸ್ಟೈನ್ ನೆಹರೂಗೆ ಬರೆದ ಪತ್ರ ಉಲ್ಲೇಖಿಸಿ Modi ಟೀಕಿಸಿದ ಕಾಂಗ್ರೆಸ್

ರಿಯಲ್ ಲೈಫ್‌ನಲ್ಲೂ ಒಂದಾದ ರೀಲ್ ಜೋಡಿ: ತೆಲುಗು ಸಂಪ್ರದಾಯದಂತೆ ರಶ್ಮಿಕಾ–ವಿಜಯ್ ವಿವಾಹ, ಸಂಜೆ ಕೊಡವ ಸಂಪ್ರದಾಯದಲ್ಲಿ ಮತ್ತೊಂದು ಸಮಾರಂಭ

ಅಮ್ಮಾ....ಐ ಲವ್ ಯೂ ಸೋ ಮಚ್: ಕುವೈತ್ ನಲ್ಲಿದ್ದ ತಾಯಿಗೆ ಕೊನೆಯ ಸಂದೇಶ ಕಳಿಸಿ ಯೂಟ್ಯೂಬರ್ ಆತ್ಮಹತ್ಯೆ

ಇನ್ನೂ ನನಸಾಗಿಲ್ಲ ದಶಕಗಳ ಕನಸು: ಹಾಸನ ವಿಮಾನ ನಿಲ್ದಾಣಕ್ಕೆ ಸಿಗದ ರೆಕ್ಕೆ, ಯೋಜನೆಗೆ ಅಡ್ಡಿಯಾಗಿದೆ ಸಂಪನ್ಮೂಲ-ರಾಜಕೀಯ ಇಚ್ಛಾಶಕ್ತಿ ಕೊರತೆ..!

SCROLL FOR NEXT