ಕಂದಾಯ ಸಚಿವ ಆರ್.ಅಶೋಕ್ 
ರಾಜ್ಯ

ಉರಿಗೌಡ, ನಂಜೇಗೌಡ ಕುರಿತು ಇತಿಹಾಸ ಮರು ಪರಿಶೀಲನೆ- ಸಚಿವ ಆರ್. ಅಶೋಕ್

ಉರಿಗೌಡ ಹಾಗೂ ನಂಜೇಗೌಡ ಅವರದು ನೈಜ ಇತಿಹಾಸವೇ ಅಥವಾ ಕಾಲ್ಪನಿಕವೇ ಎಂಬುದನ್ನು ಮರು ಪರಿಶೀಲಿಸಲಾಗುವುದು ಎಂದು ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದ್ದಾರೆ.

ಚಿತ್ರದುರ್ಗ: ಇತ್ತೀಚಿಗೆ ಸಾರ್ವಜನಿಕ ಹಾಗೂ ರಾಜಕೀಯವಾಗಿ ಉರಿಗೌಡ- ನಂಜೇಗೌಡ ಕುರಿತು ಚರ್ಚೆ ಜೋರಾಗಿ ನಡೆಯುತ್ತಿದೆ. ಈ ಇಬ್ಬರು ನಾಯಕರು ಟಿಪ್ಪು ಸುಲ್ತಾನ್ ಹತ್ಯೆ ಮಾಡಿದ ಒಕ್ಕಲಿಗ ನಾಯಕರೆಂದು ಆಡಳಿತಾರೂಢ ಬಿಜೆಪಿ ನಾಯಕರು ಬಿಂಬಿಸುತ್ತಿದ್ದರೆ, ಇವರು ಕಾಲ್ಪನಿಕ ವ್ಯಕ್ತಿಗಳು ಎಂಬುದು ಪ್ರತಿಪಕ್ಷ ಕಾಂಗ್ರೆಸ್ ಮತ್ತು ಜೆಡಿಎಸ್ ವಾದವಾಗಿದೆ. ಈ ವಿಚಾರದಲ್ಲಿ ಮೂರು ಪ್ರಮುಖ ರಾಜಕೀಯ ಪಕ್ಷಗಳ ನಡುವೆ ವಾಕ್ ಸಮರ ಮುಂದುವರೆದಿದೆ.

ಈ ಮಧ್ಯೆ ಚಿತ್ರದುರ್ಗ ಜಿಲ್ಲೆ ಚಳ್ಳಕೆರೆಯಲ್ಲಿಂದು ಮಾತನಾಡಿದ ಕಂದಾಯ ಸಚಿವ ಆರ್.ಅಶೋಕ್,  ಉರಿಗೌಡ ಹಾಗೂ ನಂಜೇಗೌಡ ಅವರದು ನೈಜ ಇತಿಹಾಸವೇ ಅಥವಾ ಕಾಲ್ಪನಿಕವೇ ಎಂಬುದನ್ನು ಮರು ಪರಿಶೀಲಿಸಲಾಗುವುದು ಎಂದಿದ್ದಾರೆ.

ಇತಿಹಾಸವನ್ನು ತಿರುಚಲು ಯಾರಿಂದಲೂ ಸಾಧ್ಯವಿಲ್ಲ, ಇತಿಹಾಸ ಮತ್ತು ಸತ್ಯವನ್ನು ಎಲ್ಲರೂ ಒಪ್ಪಿಕೊಳ್ಳಬೇಕು. ಯಾವುದೇ ಸಮುದಾಯವನ್ನು ಅವಹೇಳನ ಮಾಡುವ ಉದ್ದೇಶ ಬಿಜೆಪಿಗೆ ಇಲ್ಲ. ಚುನಾವಣಾ ಸಂದರ್ಭದಲ್ಲಿ ಜಾತಿ ರಾಜಕೀಯ ಮಾಡುವುದನ್ನು ಜೆಡಿಎಸ್ ಬಿಡಬೇಕು. ಉರಿಗೌಡ ಮತ್ತು ನಂಜೇಗೌಡ ವಿಚಾರ ಬಿಟ್ಟು ಅಭಿವೃದ್ಧಿ ಹೆಸರಿನಲ್ಲಿ ಚುನಾವಣೆ ನಡೆಯಲಿ ಎಂದು ಸಲಹೆ ನೀಡಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು: ಫಾರೂಕ್‌ ಅಬ್ದುಲ್ಲಾ ಹತ್ಯೆಗೆ ಯತ್ನ, ಮದುವೆ ಮನೆಯಲ್ಲೇ ಗುಂಡಿನ ದಾಳಿ; ಡಿಸಿಎಂಗೆ ಗಾಯ

ಭಾರತಕ್ಕೆ ಬರುತ್ತಿದ್ದ ಸರಕು ಹಡಗಿನ ಮೇಲೆ ದಾಳಿ- ಹೊಣೆ ಹೊತ್ತ ಇರಾನ್; ಭಾರತದ ಪ್ರತಿಕ್ರಿಯೆ ಏನು?

ತೈಲ ಪೂರೈಕೆಗೆ ರಿಯಾಯಿತಿ ಸ್ಥಗಿತ ಬೆನ್ನಲ್ಲೇ ಎಚ್ಚೆತ್ತ ಭಾರತ; ರಷ್ಯಾ ವಿದೇಶಾಂಗ ಸಚಿವರಿಗೆ ಜೈಶಂಕರ್ ದೂರವಾಣಿ ಕರೆ; ಮಹತ್ವದ ಚರ್ಚೆ!

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು; ಪ್ರತಿಪಕ್ಷಗಳಿಗೆ ಮುಖಭಂಗ

IPL 2026: ಬೆಂಗಳೂರಿನ ಚಿನ್ನಸ್ವಾಮಿಯಲ್ಲಿ ಉದ್ಘಾಟನಾ ಪಂದ್ಯ; ಮಾರ್ಚ್ 28 ರಂದು RCB vs SRH

SCROLL FOR NEXT