ಸಾಗರ ಪರಿಕ್ರಮ-4 ಕಾರ್ಯಕ್ರಮದಲ್ಲಿ ಕೇಂದ್ರ ಸಚಿವರಾದ ಪುರುಷೋತ್ತಮ ರೂಪಾಲಾ, ಮುರುಗನ್ 
ರಾಜ್ಯ

ಸಾಗರ ಪರಿಕ್ರಮ 4: ಉತ್ತರ ಕನ್ನಡ ಜಿಲ್ಲೆ ಮಾಜಾಳಿ ಕಡಲತೀರಕ್ಕೆ ಕೇಂದ್ರ ಸಚಿವರಾದ ರೂಪಾಲಾ, ಮುರುಗನ್‌ ಭೇಟಿ; ಸಂವಾದ

ಮೀನುಗಾರಿಕೆ, ಮೀನುಗಾರಿಕೆ ಮಾರುಕಟ್ಟೆ ಹಾಗೂ ಮೀನುಗಾರರ ಸರ್ವತೋಮುಖ ಅಭಿವೃದ್ಧಿಗಾಗಿ ಕೇಂದ್ರ ಸರ್ಕಾರವು  ಪ್ರಾಥಮಿಕ ಹಂತದಿಂದಲೇ ಕ್ರಮವಹಿಸಿದೆ ಎಂದು ಕೇಂದ್ರ ಮೀನುಗಾರಿಕೆ ಪಶುಸಂಗೋಪನೆ ಮತ್ತು ಹೈನುಗಾರಿಕೆ ಸಚಿವ ಪರಷೋತ್ತಮ ರುಪಾಲಾ ಹೇಳಿದ್ದಾರೆ. 

ಕಾರವಾರ: ಮೀನುಗಾರಿಕೆ, ಮೀನುಗಾರಿಕೆ ಮಾರುಕಟ್ಟೆ ಹಾಗೂ ಮೀನುಗಾರರ ಸರ್ವತೋಮುಖ ಅಭಿವೃದ್ಧಿಗಾಗಿ ಕೇಂದ್ರ ಸರ್ಕಾರವು  ಪ್ರಾಥಮಿಕ ಹಂತದಿಂದಲೇ ಕ್ರಮವಹಿಸಿದೆ ಎಂದು ಕೇಂದ್ರ ಮೀನುಗಾರಿಕೆ ಪಶುಸಂಗೋಪನೆ ಮತ್ತು ಹೈನುಗಾರಿಕೆ ಸಚಿವ ಪರಷೋತ್ತಮ ರುಪಾಲಾ ಹೇಳಿದ್ದಾರೆ. 

ಉತ್ತರಕನ್ನಡ ಜಿಲ್ಲೆಯ ಕಾರವಾರದಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರದ ಸಹಯೋಗದಲ್ಲಿ ಆಯೋಜಿಸಲಾಗಿದ್ದ, ಸಾಗರ ಪರಿಕ್ರಮ  2023 ನಾಲ್ಕನೇ ಹಂತ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಮೀನುಗಾರಿಕೆಯನ್ನು ಅಭಿವೃದ್ಧಿಪಡಿಸಿ ಮೀನುಗಾರರ ಬದುಕು ಆರ್ಥಿಕವಾಗಿ ಉತ್ತಮಗೊಳಿಸುವುದು ಕೇಂದ್ರ ಸರ್ಕಾರದ ಮುಖ್ಯ ಧ್ಯೇಯವಾಗಿದೆ.  ಇದಕ್ಕಾಗಿಯೇ ಸರ್ಕಾರವು ನೀಲಿ ಕ್ರಾಂತಿಯನ್ನು ಜಾರಿಗೊಳಿಸಿ 6 ಸಾವಿರ ಕೋಟಿ ಅನುದಾನ ಘೋಷಣೆ ಮಾಡಿದೆ ಎಂದರು.

ಮೀನುಗಾರರಿಗೆ ಇನ್ನಷ್ಟು ಸೌಲಭ್ಯ ನೀಡುವ ನಿಟ್ಟಿನಲ್ಲಿ ಮತ್ಸ್ಯ ಸಂಪದ ಯೋಜನೆಯನ್ನು ಜಾರಿಗೊಳಿಸಿದೆ. ಹಾಗೆಯೇ  ಕೇವಲ ಕೃಷಿಕರಿಗೆ ಮಾತ್ರ ನೀಡಲಾಗುತ್ತಿದ್ದ ಕಿಸಾನ್ ಕ್ರೆಡಿಟ್ ಕಾರ್ಡ್ ಯೋಜನೆಯನ್ನು ಇಂದು  ಮೀನುಗಾರರಿಗೂ ವಿಸ್ತರಿಸಲಾಗಿದೆ. ಈ ಯೋಜನೆಯಿಂದ ಮೀನುಗಾರರು  ಒಂದು ಲಕ್ಷ  ದಿಂದ 1.5 ಲಕ್ಷದವರೆಗೆ  ಯಾವುದೇ ಭದ್ರತೆ ಇಲ್ಲದೆ  ಬ್ಯಾಂಕುಗಳಿಂದ ಸಾಲವನ್ನು ಪಡೆಯಬಹುದಾಗಿದೆ ಎಂದರು.  ವಿಶೇಷವಾಗಿ ಕರ್ನಾಟಕವು  ಮೀನುಗಾರಿಕೆಗೆ ತನಗೆ ಆದ ಕೊಡುಗೆ ನೀಡಿದೆ ಎಂದು ತಿಳಿಸಿದರು. 

ಕೇಂದ್ರ ಮೀನುಗಾರಿಕೆ,  ಪಶುಸಂಗೋಪನೆ, ಹೈನುಗಾರಿಕೆ ಹಾಗೂ ಮಾಹಿತಿ ಹಾಗೂ ಪ್ರಸಾರ ರಾಜ್ಯ ಸಚಿವ ಡಾ. ಎಲ್‌. ಮುರುಗನ್ ಮಾತನಾಡಿ, ಸಾಗರ ಪರಿಕ್ರಮ ಕೇಂದ್ರ ಸಚಿವರು ನೇರವಾಗಿ ಮೀನುಗಾರರನ್ನು ಭೇಟಿ ಮಾಡಿ ಅವರ ಸಮಸ್ಯೆಗಳನ್ನು ಆಲಿಸಿ, ಅವರಿಗೋಸ್ಕರ ಸರ್ಕಾರ ಜಾರಿಗೆ ತಂದಿರುವ ಯೋಜನೆಗಳನ್ನು ಮನವರಿಕೆ ಮಾಡಿಕೊಡುವ ಕಾರ್ಯಕ್ರಮವಾಗಿದೆ. ಸರ್ಕಾರವು ದೇಶದ ನಾನಾ ಭಾಗಗಳಲ್ಲಿ ಆಧುನಿಕ ಮೀನುಗಾರಿಕೆ ಮಾರುಕಟ್ಟೆ, ಕೋಲ್ಡ್ ಸ್ಟೋರೇಜ್ ಹಾಗೂ ಬಂದರುಗಳನ್ನು ನಿರ್ಮಾಣ ಮಾಡಲು ಹೊರಟಿದೆ  ಎಂದರು.

ಇದೇ ಸಂದರ್ಭದಲ್ಲಿ  ಮತ್ಸ್ಯ ಸಂಪದ ಯೋಜನೆಯ ಫಲಾನುಭವಿಗಳಿಗೆ ಸೌಲಭ್ಯಗಳನ್ನು ಹಾಗೂ ಕಿಸಾನ್‌ ಕ್ರೆಡಿಟ್‌ ಕಾರ್ಡಗಳನ್ನು ಸಚಿವರು ವಿತರಿಸಿದರು. ರಾಜ್ಯ ಮೀನುಗಾರಿಕೆ ಸಚಿವ  ಅಂಗಾರ,  ಶಾಸಕಿ  ರೂಪಾಲಿ ನಾಯ್ಕ ಮತ್ತಿತರರು ಪಾಲ್ಗೊಂಡರು. 
 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮೈಸೂರಿನಲ್ಲಿ ರಾಹುಲ್ ಗಾಂಧಿ ಜತೆ ಸಿದ್ದರಾಮಯ್ಯ, ಡಿಕೆಸಿ ಮಹತ್ವದ ಚರ್ಚೆ; ಬಳಿಕ ಸಿಎಂ ಹೇಳಿದ್ದೇನು? Video

'Ground Ops ಗಾಗಿ ಭಾರತೀಯ ಸೇನೆ ಸಂಪೂರ್ಣ ಸಜ್ಜು: ಪಾಕ್ ಗೆ ವಾರ್ನಿಂಗ್ ನೀಡಿದ ಸೇನಾ ಮುಖ್ಯಸ್ಥ ದ್ವಿವೇದಿ!

ಬ್ಲಿಂಕಿಟ್, ಸ್ವಿಗ್ಗಿ, ಜೆಪ್ಟೊಗೆ 10 ನಿಮಿಷಗಳ ಡೆಲಿವರಿ ಸೇವೆ ನಿಲ್ಲಿಸುವಂತೆ ಸರ್ಕಾರ ಸೂಚನೆ; ಯಾಕೆ ಗೊತ್ತಾ?

'ಹಾವು ಕಚ್ಚಿದೆ ಬೇಗ ಚಿಕಿತ್ಸೆ ಕೊಡಿ'; ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂದ ಆಟೋ ಚಾಲಕ, Video

ಜಮ್ಮು-ಕಾಶ್ಮೀರ: ಇದೇ ಮೊದಲು, ಮಸೀದಿಯ ಇಮಾಮ್ ಸೇರಿದಂತೆ ಎಲ್ಲರ ವೈಯಕ್ತಿಕ ಮಾಹಿತಿ ಕಲೆ ಹಾಕುತ್ತಿರುವ ಪೊಲೀಸರು! ಕಾರಣವೇನು ಗೊತ್ತಾ?

SCROLL FOR NEXT