ಇಂಡಿಗೋ ವಿಮಾನ 
ರಾಜ್ಯ

ಕೋಲ್ಕತ್ತಾ-ಬೆಂಗಳೂರು ಇಂಡಿಗೋ ವಿಮಾನದ ವಾಶ್ ರೂಂನಲ್ಲಿ ಧೂಮಪಾನ ಮಾಡುತ್ತಿದ್ದ 20 ವರ್ಷದ ಪ್ರಯಾಣಿಕನ ಬಂಧನ

ಶುಕ್ರವಾರ ಕೋಲ್ಕತ್ತಾದಿಂದ ಬೆಂಗಳೂರಿಗೆ ಬರುತ್ತಿದ್ದ ಇಂಡಿಗೋ ವಿಮಾನದ ವಾಶ್ ರೂಂನಲ್ಲಿ ಧೂಮಪಾನ ಮಾಡುತ್ತಿದ್ದ 20 ವರ್ಷದ ಪ್ರಯಾಣಿಕರನ್ನು ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಪೊಲೀಸರು ಬಂಧಿಸಿದ್ದಾರೆ.

ಬೆಂಗಳೂರು: ಶುಕ್ರವಾರ ಕೋಲ್ಕತ್ತಾದಿಂದ ಬೆಂಗಳೂರಿಗೆ ಬರುತ್ತಿದ್ದ ಇಂಡಿಗೋ ವಿಮಾನದ ವಾಶ್ ರೂಂನಲ್ಲಿ ಧೂಮಪಾನ ಮಾಡುತ್ತಿದ್ದ 20 ವರ್ಷದ ಪ್ರಯಾಣಿಕರನ್ನು ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಪೊಲೀಸರು ಬಂಧಿಸಿದ್ದಾರೆ. ಹದಿನೈದು ದಿನಗಳ ಅವಧಿಯಲ್ಲಿ ಇಂಡಿಗೋ ವಿಮಾನದ ಅದೇ ಮಾರ್ಗದಲ್ಲಿ ದಾಖಲಾದ ಎರಡನೇ ಪ್ರಕರಣ ಇದಾಗಿದೆ.

ಮಾರ್ಚ್ 17 ರಂದು ಮುಂಜಾನೆ 1.45ಕ್ಕೆ ವಿಮಾನ ಸಂಖ್ಯೆ 6E 716 ನಲ್ಲಿ ಈ ಘಟನೆ ಸಂಭವಿಸಿದೆ. ಪೊಲೀಸ್ ಮೂಲಗಳ ಪ್ರಕಾರ, ಅಸ್ಸಾಂ ಮೂಲದ ಸೆಹೆರಿ ಚೌಧುರಿ ವಾಶ್‌ರೂಮ್‌ನೊಳಗೆ ಸಿಗರೇಟ್ ಸೇದುತ್ತಿದ್ದರು.

ಪ್ರಯಾಣಿಕರು ವಾಸನೆ ಮತ್ತು ಹೊಗೆಯನ್ನು ಕಂಡು ಕ್ಯಾಬಿನ್ ಸಿಬ್ಬಂದಿಗೆ ತಿಳಿಸಿದ್ದಾರೆ. ವಿಮಾನ ಲ್ಯಾಂಡ್ ಆದ ನಂತರ, ಫ್ಲೈಟ್ ಕ್ಯಾಪ್ಟನ್ ವಿಮಾನ ನಿಲ್ದಾಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು, 'ಈ ಹಿಂದೆ ಬೆಂಗಳೂರಿನ ಮಾಲ್‌ನಲ್ಲಿ ಮಾರಾಟಗಾರನಾಗಿ ಕೆಲಸ ಮಾಡುತ್ತಿದ್ದ ವ್ಯಕ್ತಿ ಕೆಲಸ ಬಿಟ್ಟು ಊರಿಗೆ ಹೋಗಿದ್ದನು. ಮತ್ತೆ ಕೆಲಸ ಹುಡುಕಲು ಆತ ಬೆಂಗಳೂರಿಗೆ ಹಿಂತಿರುಗುತ್ತಿದ್ದನು' ಎಂದು ತಿಳಿಸಿದ್ದಾರೆ.

ಚೌಧರಿ ಅವರನ್ನು ಬಂಧಿಸಲಾಗಿದೆ ಮತ್ತು ನಾಗರಿಕ ವಿಮಾನಯಾನ ಕಾಯ್ದೆ 1982ರ ಸೆಕ್ಷನ್ 336 ಐಪಿಸಿ ಮತ್ತು 3 (1) (ಸಿ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಅವರನ್ನು ನ್ಯಾಯಾಂಗ ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸಲಾಗಿದೆ ಮತ್ತು ಜೈಲಿಗೆ ಕಳುಹಿಸಲಾಗಿದೆ ಎಂದು ಅವರು ಹೇಳಿದರು.

ಮಾರ್ಚ್ 5 ರಂದು, 6E 716 ವಿಮಾನದಲ್ಲಿದ್ದ ಮಹಿಳೆಯೊಬ್ಬರು ವಾಶ್‌ರೂಮ್‌ನಲ್ಲಿ ಧೂಮಪಾನ ಮಾಡಿದ್ದಕ್ಕಾಗಿ ಬಂಧಿಸಲಾಯಿತು.

ವಿಮಾನದಲ್ಲಿ ಧೂಮಪಾನದ ಪರಿಣಾಮಗಳ ಬಗ್ಗೆ ಕೇಳಿದಾಗ ಉನ್ನತ ಭದ್ರತಾ ಅಧಿಕಾರಿಯೊಬ್ಬರು ಮಾತನಾಡಿ, 'ಇಂತಹ ಕೃತ್ಯವು ವಿಮಾನದ ಸುರಕ್ಷತೆಯನ್ನು ಅಪಾಯಕ್ಕೆ ತಳ್ಳುತ್ತದೆ. ವಿಮಾನವು ಹವಾನಿಯಂತ್ರಿತ ಪರಿಸರವನ್ನು ಹೊಂದಿದೆ ಮತ್ತು ಅದರ ಒಳಗೆ ಮತ್ತು ಹೊರಗೆ ತಾಪಮಾನ ವ್ಯತ್ಯಾಸವು ದೊಡ್ಡದಾಗಿರುತ್ತದೆ. ಸ್ಮೋಕ್ ಡಿಟೆಕ್ಷನ್ ಸಿಸ್ಟಂಗಳಿದ್ದು, ಆಕ್ಟಿವೇಟ್ ಮಾಡಿದರೆ ಅಲಾರಾಂ ಸೃಷ್ಟಿಸುತ್ತದೆ ಮತ್ತು ದೊಡ್ಡ ಭೀತಿಯನ್ನು ಸೃಷ್ಟಿಸುತ್ತದೆ' ಎಂದರು.

ಈ ಸಂಬಂಧದ ಪ್ರಶ್ನೆಗೆ ಇಂಡಿಗೋ ಇನ್ನೂ ಪ್ರತಿಕ್ರಿಯಿಸಿಲ್ಲ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಲಾಲ್ ಬಾಗ್ ಅಭಿವೃದ್ಧಿಗೆ 10 ಕೋಟಿ ರೂ; ಸುರಂಗ ರಸ್ತೆ ಯೋಜನೆಯಿಂದ ಸಸ್ಯೋದ್ಯಾನದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ: ಡಿ.ಕೆ ಶಿವಕುಮಾರ್; Video

ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ: ಒಂದಾದ ಜಾರಕಿಹೊಳಿ ಬ್ರದರ್ಸ್‌ಗೆ ಜಾಕ್‌ಪಾಟ್; ರಮೇಶ್ ಕತ್ತಿ ಬಣಕ್ಕೆ ಶಾಕ್!

ನೊಬೆಲ್ ಶಾಂತಿ ಪ್ರಶಸ್ತಿ ಘೋಷಣೆಯಾಗುತ್ತಿದ್ದಂತೆಯೇ Maria Corina Machado ವಿವಾದಕ್ಕೆ ಗುರಿ; ಭುಗಿಲೆದ್ದ ಅಶಾಂತಿ!

Shocking: ಹೆಣ್ಣಿನ ಶವ ಎಳೆದೊಯ್ದು ಶವಾಗಾರದಲ್ಲೇ ಅತ್ಯಾಚಾರ, 25ರ ಯುವಕನಿಂದ ಪೈಶಾಚಿಕ ಕೃತ್ಯ, CCTV Video

Belagavi: ಲವರ್ ಜೊತೆ ಮಗಳು ಪರಾರಿ; ಇಡೀ ಊರಿಗೆ 'ತಿಥಿ' ಊಟ ಹಾಕಿಸಿದ ತಂದೆ!

SCROLL FOR NEXT