ಪ್ರಾತಿನಿಧಿಕ ಚಿತ್ರ 
ರಾಜ್ಯ

ಕರ್ನಾಟಕ ವಿಧಾನಸಭೆ ಚುನಾವಣೆ: ದ್ವೇಷ ರಾಜಕಾರಣದ ವಿರುದ್ಧ ರಾಜ್ಯದಲ್ಲಿ 'ಎದ್ದೇಳು ಕರ್ನಾಟಕ' ಅಭಿಯಾನ ಆರಂಭ

ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವಂತೆಯೇ, ಕೆಲವು ಸಾಮಾಜಿಕ ಚಳುವಳಿಗಳು, ಸಂಘಟನೆಗಳು, ನಾಗರಿಕ ಸಮಾಜದ ಗುಂಪುಗಳು ಮತ್ತು ವ್ಯಕ್ತಿಗಳು 'ಪ್ರಜಾಪ್ರಭುತ್ವವನ್ನು ರಕ್ಷಿಸಲು ಮತ್ತು ಕೋಮು ಮತ್ತು ದ್ವೇಷದ ರಾಜಕೀಯಕ್ಕೆ ಬಲಿಯಾಗದಂತೆ ರಾಜ್ಯವನ್ನು ಉಳಿಸಲು' 'ಎದ್ದೇಳು ಕರ್ನಾಟಕ' ಅಭಿಯಾನವನ್ನು ಪ್ರಾರಂಭಿಸಿದ್ದಾರೆ

ಬೆಂಗಳೂರು: ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವಂತೆಯೇ, ಕೆಲವು ಸಾಮಾಜಿಕ ಚಳುವಳಿಗಳು, ಸಂಘಟನೆಗಳು, ನಾಗರಿಕ ಸಮಾಜದ ಗುಂಪುಗಳು ಮತ್ತು ವ್ಯಕ್ತಿಗಳು 'ಪ್ರಜಾಪ್ರಭುತ್ವವನ್ನು ರಕ್ಷಿಸಲು ಮತ್ತು ಕೋಮು ಮತ್ತು ದ್ವೇಷದ ರಾಜಕೀಯಕ್ಕೆ ಬಲಿಯಾಗದಂತೆ ರಾಜ್ಯವನ್ನು ಉಳಿಸಲು' 'ಎದ್ದೇಳು ಕರ್ನಾಟಕ' ಅಭಿಯಾನವನ್ನು ಪ್ರಾರಂಭಿಸಿದ್ದಾರೆ ಎಂದು 'ಎದ್ದೇಳು ಕರ್ನಾಟಕದ' ಲೇಖಕಿ, ಕಾರ್ಯಕರ್ತೆ ಮತ್ತು ಸ್ವಯಂಸೇವಕಿ ದು ಸರಸ್ವತಿ ಹೇಳಿದರು.

ಯಾವುದೇ ಪಕ್ಷದಿಂದ ಯಾವುದೇ ರೀತಿಯ ದ್ವೇಷವನ್ನು ನಾನು ವಿರೋಧಿಸುತ್ತೇನೆ. ಕರ್ನಾಟಕವು ತನ್ನ ಜಾತ್ಯತೀತ ರಚನೆಗೆ ಹೆಸರುವಾಸಿಯಾಗಿದೆ ಮತ್ತು ಅದನ್ನು ರಕ್ಷಿಸಬೇಕು ಎಂದು ಅವರು ಹೇಳಿದರು. 

‘ಎದ್ದೇಳು ಕರ್ನಾಟಕ’ದ ಮತ್ತೊಬ್ಬ ಸ್ವಯಂಸೇವಕಿ ಮಲ್ಲಿಗೆ ಮಾತನಾಡಿ, ‘ಎದ್ದೇಳು ಕರ್ನಾಟಕ’ ಅಭಿಯಾನಕ್ಕೆ ಚಾಲನೆ ನೀಡಲಾಗಿದ್ದು, ಸಾಮರಸ್ಯ ಕರ್ನಾಟಕದ ಕಲ್ಪನೆಯೊಂದಿಗೆ ಸ್ವಯಂಸೇವಕರು ತಳಮಟ್ಟದ ಜನರನ್ನು ತಲುಪಲಿದ್ದಾರೆ. ಸಂವಿಧಾನದ ಆಶಯಗಳನ್ನು ಕಾಪಾಡುವುದು ಅಭಿಯಾನದ ಮುಖ್ಯ ಗುರಿಗಳಲ್ಲಿ ಒಂದಾಗಿದೆ ಎಂದು ಹೇಳಿದರು.

'ಪಕ್ಷ, ಸಂಘಟನೆ, ಜಾತಿ ಮತ್ತು ಧರ್ಮದ ಎಲ್ಲೆಗಳನ್ನು ಬಿಟ್ಟು, ರಾಜ್ಯವನ್ನು ಉಳಿಸುವ ಈ ಅಭಿಯಾನವು ಭರವಸೆಯ ಕಿರಣವಾಗಿದೆ' ಎಂದು ಮತ್ತೋರ್ವ ಸ್ವಯಂಸೇವಕ ಹೇಳಿದರು.

'ಎದ್ದೇಳು ಕರ್ನಾಟಕ'ವನ್ನು 'ಭಾರತ್ ಜೋಡೋ ಅಭಿಯಾನ' ಸದಸ್ಯರಾದ ವಿಜಯ್ ಮಹಾಜನ್, ಯೋಗೇಂದ್ರ ಯಾದವ್ ಮತ್ತು ಇತರರು ಬೆಂಬಲಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ನೆಲದಲ್ಲೇ ಸ್ತ್ರೀದ್ವೇಷ ಪ್ರದರ್ಶಿಸಿದ ತಾಲೀಬಾನ್ ವಿದೇಶಾಂಗ ಸಚಿವ!; ಸುದ್ದಿಗೋಷ್ಠಿಗೆ ಮಹಿಳೆಯರಿಗಿಲ್ಲ ಪ್ರವೇಶ; ಭುಗಿಲೆದ್ದ ಅಸಮಾಧಾನ!

ಮೈಸೂರು ಪೊಲೀಸರಿಗೆ CM ಪುತ್ರನ ಕಾಟ: ಯಾವುದೇ ವರ್ಗಾವಣೆಯಾಗಬೇಕಾದರೂ ಯತೀಂದ್ರಗೆ ಟ್ಯಾಕ್ಸ್ ಕಟ್ಟಬೇಕು; ಪ್ರತಾಪ್ ಸಿಂಹ

BDA ಯೋಜನಾ ಪ್ರಾಧಿಕಾರದ ಜವಾಬ್ದಾರಿ ಹಸ್ತಾಂತರ: GBA ವಿರೋಧಿಸುವವರು ಪಾಲಿಕೆ ಚುನಾವಣೆ ಬಹಿಷ್ಕರಿಸಲಿ; ಡಿಕೆಶಿ ಸವಾಲು

ಬಾಂಬೆ ಮಾದರಿಯಲ್ಲಿ ಕೊಳಗೇರಿ ಪುನಶ್ಚೇತನಕ್ಕೆ ಸಮಿತಿ ರಚನೆ: GBA ವ್ಯಾಪ್ತಿಗೆ ಆನೇಕಲ್ ಸೇರಿಸುವುದು ಕಷ್ಟ; ಡಿಕೆ ಶಿವಕುಮಾರ್

'ನನ್ನ ಪ್ರಶಸ್ತಿ ಟ್ರಂಪ್‌ಗೆ ಸಮರ್ಪಿತ...' Noble ಶಾಂತಿ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಮಾರಿಯಾ ಶಾಕಿಂಗ್ ಹೇಳಿಕೆ!

SCROLL FOR NEXT