ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ 
ರಾಜ್ಯ

ದೇಶೀಯ ಆಗಮನದ ಗೇಟ್‌ನಲ್ಲಿ ಇಳಿದ 30 ಅಂತರರಾಷ್ಟ್ರೀಯ ಪ್ರಯಾಣಿಕರು; ಕೆಐಎನಲ್ಲಿ ಕೆಲಕಾಲ ಗೊಂದಲ ನಿರ್ಮಾಣ

ಶುಕ್ರವಾರ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಶ್ರೀಲಂಕಾ ಏರ್‌ಲೈನ್ಸ್ ವಿಮಾನದ 30 ಪ್ರಯಾಣಿಕರನ್ನು ಅಂತರರಾಷ್ಟ್ರೀಯ ವಿಮಾನಗಳ ಆಗಮನದ ಗೇಟ್ ಬದಲಿಗೆ ದೇಶೀಯ ವಿಮಾನ ಆಗಮನದ ಗೇಟ್‌ನಲ್ಲಿ ಇಳಿಸಲಾಯಿತು. ಇದರಿಂದ ಅಂತರರಾಷ್ಟ್ರೀಯ ಆಗಮನ ಗೇಟ್‌ನಲ್ಲಿ ಕೆಲಕಾಲ ಗೊಂದಲದ ವಾತಾವರಣ ನಿರ್ಮಾಣವಾಯಿತು.

ಬೆಂಗಳೂರು: ಶುಕ್ರವಾರ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಶ್ರೀಲಂಕಾ ಏರ್‌ಲೈನ್ಸ್ ವಿಮಾನದ 30 ಪ್ರಯಾಣಿಕರನ್ನು ಅಂತರರಾಷ್ಟ್ರೀಯ ವಿಮಾನಗಳ ಆಗಮನದ ಗೇಟ್ ಬದಲಿಗೆ ದೇಶೀಯ ವಿಮಾನ ಪ್ರಯಾಣಿಕರ ಆಗಮನದ ಗೇಟ್‌ನಲ್ಲಿ ಇಳಿಸಲಾಯಿತು. ಇದರಿಂದ ವಿದೇಶದಿಂದ ಬಂದ ಪ್ರಯಾಣಿಕರು ವಲಸೆ ತಪಾಸಣೆಗೆ ಒಳಪಡಬೇಕಾಗಿದ್ದರಿಂದ ಅಂತರರಾಷ್ಟ್ರೀಯ ಆಗಮನ ಗೇಟ್‌ನಲ್ಲಿ ಕೆಲಕಾಲ ಗೊಂದಲದ ವಾತಾವರಣ ನಿರ್ಮಾಣವಾಯಿತು.

ಕೊಲಂಬೊದಿಂದ UL 173 ವಿಮಾನವು ಕೆಐಎನಲ್ಲಿ 2.22ಕ್ಕೆ ಇಳಿಯಿತು. ಈ ವೇಳೆ ಪ್ರಯಾಣಿಕರನ್ನು ತಪ್ಪಾಗಿ ದೇಶೀಯ ಆಗಮನದ ಬಸ್ ಗೇಟ್‌ಗೆ ಕರೆದೊಯ್ಯಲಾಯಿತು. 'ಪ್ರಯಾಣಿಕರು ತಮ್ಮ ಸಾಮಾನುಗಳನ್ನು ಸಂಗ್ರಹಿಸಲು ದೇಶೀಯ ಲಗೇಜ್ ಸಂಗ್ರಹಿಸುವ ಪ್ರದೇಶವನ್ನು ಪ್ರವೇಶಿಸಿದರು. ಟರ್ಮಿನಲ್‌ನಲ್ಲಿನ ಕಾರ್ಯಾಚರಣೆ ತಂಡವು ಸ್ಥಳಕ್ಕೆ ಧಾವಿಸಿ ಸಿಐಎಸ್‌ಎಫ್ ಮತ್ತು ವಲಸೆ ಅಧಿಕಾರಿಗಳಿಗೆ ವಿಷಯವನ್ನು ವರದಿ ಮಾಡಿದೆ' ಎಂದು ಕೆಐಎ ಮೂಲಗಳು ತಿಳಿಸಿವೆ.

ಏರ್‌ಲೈನ್ ಅಧಿಕಾರಿಗಳು ಮತ್ತು ಗ್ರೌಂಡ್ ಹ್ಯಾಂಡ್ಲಿಂಗ್ ಏಜೆಂಟ್‌ಗೆ ಕಠಿಣ ಎಚ್ಚರಿಕೆ ನೀಡಲಾಗಿದೆ ಎಂದು ಮೂಲಗಳು ತಿಳಿಸಿವೆ.

'ಪ್ರಯಾಣಿಕರನ್ನು ತಕ್ಷಣವೇ ವಲಸೆ ಅಧಿಕಾರಿಗಳು ತಪಾಸಣೆಗಾಗಿ ಅಂತರರಾಷ್ಟ್ರೀಯ ಆಗಮನದ ಗೇಟ್‌ಗೆ ಸ್ಥಳಾಂತರಿಸಲಾಯಿತು. ನಂತರ ಅವರು ಅಂತಾರಾಷ್ಟ್ರೀಯ ಬ್ಯಾಗೇಜ್ ಕ್ಲೈಮ್ ವಿಭಾಗಕ್ಕೆ ತೆರಳಿದರು' ಎಂದು ಅವರು ಹೇಳಿದರು.

ಬಿಐಎಎಲ್ ವಕ್ತಾರರು ಘಟನೆಯನ್ನು ಖಚಿತಪಡಿಸಿದ್ದಾರೆ. 'ಇದು ಗೊಂದಲಕ್ಕೆ ಕಾರಣವಾದ ದೋಷ ಮತ್ತು ಭವಿಷ್ಯದಲ್ಲಿ ಇಂತಹ ಘಟನೆಗಳನ್ನು ತಡೆಯಲು ಕ್ರಮಗಳನ್ನು ತೆಗೆದುಕೊಳ್ಳಲಾಗುವುದು' ಎಂದು ವಕ್ತಾರರು ತಿಳಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT