ಸಂಗ್ರಹ ಚಿತ್ರ 
ರಾಜ್ಯ

ಇನ್‌ಫ್ಲುಯೆಂಜಾ ಆತಂಕ: ಅಗತ್ಯ ಔಷಧಿಗಳ ಪಟ್ಟಿಗೆ 'ಒಸೆಲ್ಟಾಮಿವಿರ್' ಸೇರ್ಪಡೆ

ರಾಜ್ಯದಲ್ಲಿ ಅಡೆನೊವೈರಸ್, ಇನ್‌ಫ್ಲುಯೆಂಜಾ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಅಗತ್ಯ ಔಷಧಿಗಳ ಪಟ್ಟಿಗೆ ಒಸೆಲ್ಟಾಮಿವಿರ್'ನ್ನು ಸರ್ಕಾರ ಸೇರ್ಪಡೆಗೊಳಿಸಿದೆ.

ಬೆಂಗಳೂರು: ರಾಜ್ಯದಲ್ಲಿ ಅಡೆನೊವೈರಸ್, ಇನ್‌ಫ್ಲುಯೆಂಜಾ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಅಗತ್ಯ ಔಷಧಿಗಳ ಪಟ್ಟಿಗೆ ಒಸೆಲ್ಟಾಮಿವಿರ್'ನ್ನು ಸರ್ಕಾರ ಸೇರ್ಪಡೆಗೊಳಿಸಿದೆ.

ಸೋಂಕು ಉಲ್ಭಣಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಆರೋಗ್ಯ ಇಲಾಖೆ ಅಗತ್ಯ ಔಷಧಿಗಳ ಪಟ್ಟಿಗೆ ಒಸೆಲ್ಟಾಮಿವಿರ್'ನ್ನು ಸೇರ್ಪಡೆಗೊಳಿಸಿದೆ. ಈ ಔಷಧಿ ರಾಜ್ಯದ ಎಲ್ಲಾ ಆರೋಗ್ಯ ಕೇಂದ್ರಗಳಲ್ಲಿ ಲಭ್ಯವಾಗಲಿದೆ.

ಇನ್ಫ್ಲುಯೆಂಜಾ ಮತ್ತು ಕೋವಿಡ್ ಪ್ರಕರಣಗಳ ಹೆಚ್ಚಳವನ್ನು ತಡೆಯಲು ಕ್ರಮ ಕೈಗೊಳ್ಳುವಂತೆ ಕೇಂದ್ರ ಆರೋಗ್ಯ ಸಚಿವಾಲಯವು ಈ ಹಿಂದೆ ಕರ್ನಾಟಕ ಸೇರಿ ದೇಶದ ಆರು ರಾಜ್ಯಗಳಿಗೆ ಪತ್ರ ಬರೆದಿತ್ತು.

ಇನ್ಫ್ಲುಯೆಂಜಾ ವೈರಸ್ ನಿಂದ ಗುಣಮುಖವಾಗಲು ಸಾಮಾನ್ಯವಾಗಿ 5-7 ದಿನಗಳು ಬೇಕಾಗಲಿದ್ದು, ಮರಣ ಪ್ರಮಾಣ ಕಡಿಮೆ ಇರುತ್ತದೆ. ಆದರೆ, ನವಜಾತ ಶಿಶುಗಳು, ಗರ್ಭಿಣಿ ಮಹಿಳೆಯರು ಹಾಗೂ ವಯಸ್ಸಾದವರ ಮೇಲೆ ಹೆಚ್ಚು ಪರಿಣಾಮ ಬೀರಲಿದ್ದು, ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕಿದೆ. ಹೆಚ್ಚೆಚ್ಚು ಜನರಿರುವ ಪ್ರದೇಶಗಳಲ್ಲಿ ಹೋಗುವುದನ್ನು ಜನರು ನಿಯಂತ್ರಿಸಬೇಕು, ಶುಚಿತ್ವ ಕಾಪಡಬೇಕು ಹಾಗೂ ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕೆಂದು ಪತ್ರದಲ್ಲಿ ತಿಳಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

SCROLL FOR NEXT