ಸಂಗ್ರಹ ಚಿತ್ರ 
ರಾಜ್ಯ

ಇನ್‌ಫ್ಲುಯೆಂಜಾ ಆತಂಕ: ಅಗತ್ಯ ಔಷಧಿಗಳ ಪಟ್ಟಿಗೆ 'ಒಸೆಲ್ಟಾಮಿವಿರ್' ಸೇರ್ಪಡೆ

ರಾಜ್ಯದಲ್ಲಿ ಅಡೆನೊವೈರಸ್, ಇನ್‌ಫ್ಲುಯೆಂಜಾ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಅಗತ್ಯ ಔಷಧಿಗಳ ಪಟ್ಟಿಗೆ ಒಸೆಲ್ಟಾಮಿವಿರ್'ನ್ನು ಸರ್ಕಾರ ಸೇರ್ಪಡೆಗೊಳಿಸಿದೆ.

ಬೆಂಗಳೂರು: ರಾಜ್ಯದಲ್ಲಿ ಅಡೆನೊವೈರಸ್, ಇನ್‌ಫ್ಲುಯೆಂಜಾ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಅಗತ್ಯ ಔಷಧಿಗಳ ಪಟ್ಟಿಗೆ ಒಸೆಲ್ಟಾಮಿವಿರ್'ನ್ನು ಸರ್ಕಾರ ಸೇರ್ಪಡೆಗೊಳಿಸಿದೆ.

ಸೋಂಕು ಉಲ್ಭಣಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಆರೋಗ್ಯ ಇಲಾಖೆ ಅಗತ್ಯ ಔಷಧಿಗಳ ಪಟ್ಟಿಗೆ ಒಸೆಲ್ಟಾಮಿವಿರ್'ನ್ನು ಸೇರ್ಪಡೆಗೊಳಿಸಿದೆ. ಈ ಔಷಧಿ ರಾಜ್ಯದ ಎಲ್ಲಾ ಆರೋಗ್ಯ ಕೇಂದ್ರಗಳಲ್ಲಿ ಲಭ್ಯವಾಗಲಿದೆ.

ಇನ್ಫ್ಲುಯೆಂಜಾ ಮತ್ತು ಕೋವಿಡ್ ಪ್ರಕರಣಗಳ ಹೆಚ್ಚಳವನ್ನು ತಡೆಯಲು ಕ್ರಮ ಕೈಗೊಳ್ಳುವಂತೆ ಕೇಂದ್ರ ಆರೋಗ್ಯ ಸಚಿವಾಲಯವು ಈ ಹಿಂದೆ ಕರ್ನಾಟಕ ಸೇರಿ ದೇಶದ ಆರು ರಾಜ್ಯಗಳಿಗೆ ಪತ್ರ ಬರೆದಿತ್ತು.

ಇನ್ಫ್ಲುಯೆಂಜಾ ವೈರಸ್ ನಿಂದ ಗುಣಮುಖವಾಗಲು ಸಾಮಾನ್ಯವಾಗಿ 5-7 ದಿನಗಳು ಬೇಕಾಗಲಿದ್ದು, ಮರಣ ಪ್ರಮಾಣ ಕಡಿಮೆ ಇರುತ್ತದೆ. ಆದರೆ, ನವಜಾತ ಶಿಶುಗಳು, ಗರ್ಭಿಣಿ ಮಹಿಳೆಯರು ಹಾಗೂ ವಯಸ್ಸಾದವರ ಮೇಲೆ ಹೆಚ್ಚು ಪರಿಣಾಮ ಬೀರಲಿದ್ದು, ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕಿದೆ. ಹೆಚ್ಚೆಚ್ಚು ಜನರಿರುವ ಪ್ರದೇಶಗಳಲ್ಲಿ ಹೋಗುವುದನ್ನು ಜನರು ನಿಯಂತ್ರಿಸಬೇಕು, ಶುಚಿತ್ವ ಕಾಪಡಬೇಕು ಹಾಗೂ ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕೆಂದು ಪತ್ರದಲ್ಲಿ ತಿಳಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?