ನಂದಿನಿ ಹಾಲು 
ರಾಜ್ಯ

ಬೆಂಗಳೂರು ಸೇರಿದಂತೆ ರಾಜ್ಯದಾದ್ಯಂತ ಹಾಲಿನ ಬೇಡಿಕೆ ಹೆಚ್ಚಳ; ಆದರೆ ಪೂರೈಕೆ ಕಡಿಮೆ: ಕೆಎಂಎಫ್

ರಾಜ್ಯದಾದ್ಯಂತ ಹಾಲಿನ ಬೇಡಿಕೆಯಲ್ಲಿ ಹೆಚ್ಚಳ ಕಾಣುತ್ತಿದೆ. ಆದರೆ, ಪೂರೈಕೆಯಲ್ಲಿ ಕೊರತೆ ಉಂಟಾಗುತ್ತಿದೆ ಎಂದು ಕರ್ನಾಟಕ ಹಾಲು ಒಕ್ಕೂಟ (ಕೆಎಂಎಫ್) ಹೇಳಿದೆ.

ಬೆಂಗಳೂರು: ರಾಜ್ಯದಾದ್ಯಂತ ಹಾಲಿನ ಬೇಡಿಕೆಯಲ್ಲಿ ಹೆಚ್ಚಳ ಕಾಣುತ್ತಿದೆ. ಆದರೆ, ಪೂರೈಕೆಯಲ್ಲಿ ಕೊರತೆ ಉಂಟಾಗುತ್ತಿದೆ ಎಂದು ಕರ್ನಾಟಕ ಹಾಲು ಒಕ್ಕೂಟ (ಕೆಎಂಎಫ್) ಹೇಳಿದೆ.

ಬೇಸಿಗೆ ಆರಂಭವಾಗುತ್ತಿದ್ದಂತೆ ಹಾಲಿನ ಬೇಡಿಕೆ ರಾಜ್ಯದಾದ್ಯಂತ ಶೇ 15-20ರಷ್ಟು ಹಾಗೂ ಬೆಂಗಳೂರಿನಲ್ಲಿ ಶೇ.17ರಷ್ಟು ಹೆಚ್ಚಿದೆ. ಆದರೆ, ರೈತರು ಬೆಳೆ ಕಟಾವಿನತ್ತ ಗಮನಹರಿಸುತ್ತಿರುವುದರಿಂದ ಪೂರೈಕೆ ಕಡಿಮೆಯಾಗಿದೆ. ಕೆಎಂಎಪ್ ಈಗ ರೈತರಿಂದ ನಿರಂತರ ಪೂರೈಕೆಯನ್ನು ಖಚಿತಪಡಿಸಿಕೊಳ್ಳಲು ಪ್ರೋತ್ಸಾಹ ಮತ್ತು ಯೋಜನೆಗಳನ್ನು ಘೋಷಿಸುತ್ತಿದೆ ಎಂದು ಕೆಎಂಎಫ್ ಅಧಿಕಾರಿಗಳು ತಿಳಿಸಿದ್ದಾರೆ.

'ಜನರು ಹಾಲಿನ ಉತ್ಪನ್ನಗಳಿಗಿಂತ ಹೆಚ್ಚಿನ ಹಾಲನ್ನು ಬಯಸುತ್ತಿದ್ದಾರೆ. ಆದರೆ, ಇದು ಖಾಸಗಿ ಪೂರೈಕೆದಾರರು ಇದಕ್ಕೆ ವಿರುದ್ಧವಾಗಿದ್ದಾರೆ. ಖಾಸಗಿ ಪೂರೈಕೆದಾರರು ಹಾಲಿನ ಪೂರೈಕೆಯನ್ನು ಕಡಿಮೆ ಮಾಡಿದ್ದು, ಸೀಸನ್ ಆಧಾರಿತ ಹಾಲಿನ ಉತ್ಪನ್ನಗಳನ್ನು ಮಾರಾಟ ಮಾಡಲು ಮುಂದಾಗಿದ್ದಾರೆ. ಇದರೊಂದಿಗೆ ಅವರ ಗ್ರಾಹಕರೂ ನಂದಿನಿ ಹಾಲಿನತ್ತ ತೆರಳಿದ್ದಾರೆ’ ಎಂದು ಅಧಿಕಾರಿಗಳು ತಿಳಿಸಿದರು.

ಬೇಡಿಕೆಯಲ್ಲಿ ಶೇ 4ರಷ್ಟು ಹೆಚ್ಚಳವಾಗಿದೆ. ಆದರೆ, ಶೇ 1ರಷ್ಟು ಕೊರತೆಯಿದ್ದು, ರಾಷ್ಟ್ರೀಯ ಕೊರತೆ ಶೇ 5 ರಷ್ಟಿದೆ ಎಂದು ಅಧಿಕಾರಿಗಳು ಹೇಳಿದರು.

ಪ್ಯಾಕೆಟ್‌ಗಳಲ್ಲಿ ಹಾಲಿನ ಪ್ರಮಾಣ ಕಡಿಮೆಯಾಗಿದೆ ಎಂದು ಗ್ರಾಹಕರು ದೂರುತ್ತಿದ್ದಾರೆ. ಮುದ್ರಿತ ಒಂದು ಲೀಟರ್ ಬದಲಿಗೆ 900 ಎಂಎಲ್ ಮಾತ್ರ ತುಂಬಿದೆ. ಅದೇ ರೀತಿ 500 ಎಂಎಲ್ ಬದಲಿಗೆ 400 ಎಂಎಲ್ ಇದೆ. ಹಾಲಿನ ಪೂರೈಕೆ ಕೊರತೆಯಿದ್ದರೆ ಕೆಎಂಎಫ್ ಪ್ರಮಾಣವನ್ನು ಕಡಿಮೆ ಮಾಡಬೇಕು ಮತ್ತು ಪ್ರಕಟಿಸಬೇಕು ಎನ್ನುತ್ತಾರೆ ಬೆಂಗಳೂರಿನ ಪ್ರಕಾಶ್ ಎಸ್.

ಆದರೆ, ಕೆಎಂಎಫ್ ಅಧಿಕಾರಿಗಳು, 'ಪ್ಯಾಕೆಟ್‌ನಲ್ಲಿ ಏನು ಘೋಷಿಸಲಾಗಿದೆಯೋ ಅದನ್ನು ಸರಬರಾಜು ಮಾಡಲಾಗುತ್ತಿದೆ. ಹೆಚ್ಚಿನ ಕೊಬ್ಬಿನ ಅಂಶವನ್ನು ಹೊಂದಿರುವ ಪೂರ್ಣ ಕೆನೆ ಹಾಲಿನ ಸಂದರ್ಭದಲ್ಲಿ ಮಾತ್ರ ನಾವು ಪ್ರಮಾಣವನ್ನು ಕಡಿಮೆ ಮಾಡಿದ್ದೇವೆ. ಆದರೆ, ಅದನ್ನು ಘೋಷಿಸಲಾಗಿದೆ ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

ಶಿಬು ಸೊರೇನ್ 'ರಾಜ್ಯದ ಪಿತಾಮಹ' ಎಂದು ಘೋಷಿಸುವಂತೆ ಜೆಎಂಎಂ ಆಗ್ರಹ

Indian Stock Market: ಸತತ ಕುಸಿತ, ಬರೊಬ್ಬರಿ ಶೇ.1ರಷ್ಟು ಕುಸಿದ Sensex, Nifty 50, ರೂಪಾಯಿ ಮೌಲ್ಯ ಇಳಿಕೆ!

SCROLL FOR NEXT