ಸಾಂದರ್ಭಿಕ ಚಿತ್ರ 
ರಾಜ್ಯ

ಬೆಳಗಾವಿ: ಲಿಕ್ಕರ್ ಬಾಕ್ಸ್ ನಾಪತ್ತೆ, ಐವರು ಅಬಕಾರಿ ಸಿಬ್ಬಂದಿ ಅಮಾನತು!

ಇದೇ ತಿಂಗಳ ಆರಂಭದಲ್ಲಿ ಕಾರ್ಯಾಚರಣೆ ವೇಳೆಯಲ್ಲಿ ವಶಕ್ಕೆ ಪಡೆಯಲಾದ ಮದ್ಯದ ಬಾಟಲಿಗಳನ್ನು ನಿಗೂಢವಾಗಿ ಸಾಗಿಸಿರುವುದು ಇಲಾಖಾ ತನಿಖೆ ವೇಳೆ ತಿಳಿದುಬಂದ ನಂತರ ಮೂವರು ಶ್ರೇಣಿ ಅಧಿಕಾರಿಗಳು ಸೇರಿದಂತೆ ಐವರು ಅಬಕಾರಿ ಸಿಬ್ಬಂದಿಯನ್ನು ಶನಿವಾರ ಅಮಾನುತು ಮಾಡಲಾಗಿದೆ. 

ಬೆಳಗಾವಿ: ಇದೇ ತಿಂಗಳ ಆರಂಭದಲ್ಲಿ ಕಾರ್ಯಾಚರಣೆ ವೇಳೆಯಲ್ಲಿ ವಶಕ್ಕೆ ಪಡೆಯಲಾದ ಮದ್ಯದ ಬಾಟಲಿಗಳನ್ನು ನಿಗೂಢವಾಗಿ ಸಾಗಿಸಿರುವುದು ಇಲಾಖಾ ತನಿಖೆ ವೇಳೆ ತಿಳಿದುಬಂದ ನಂತರ ಮೂವರು ಶ್ರೇಣಿ ಅಧಿಕಾರಿಗಳು ಸೇರಿದಂತೆ ಐವರು ಅಬಕಾರಿ ಸಿಬ್ಬಂದಿಯನ್ನು ಶನಿವಾರ ಅಮಾನುತು ಮಾಡಲಾಗಿದೆ. 

ರಾಜ್ಯ ವಿಧಾನಸಭಾ ಚುನಾವಣೆ ಸನ್ನಿಹದಲ್ಲಿರುವಂತೆಯೇ ಅಕ್ರಮ ಹಣ ಹಾಗೂ ಮಧ್ಯ ಸಾಗಾಟವನ್ನು ತಡೆಯಲು ಗೋವಾ ಮತ್ತು ಮಹಾರಾಷ್ಟ್ರ ಗಡಿಯಲ್ಲಿ ಅಬಕಾರಿ ಮತ್ತು ಪೊಲೀಸ್ ಇಲಾಖೆ ನಿಗಾ ವಹಿಸಿದೆ. ಮಾರ್ಚ್ 7 ರ ಸಂಜೆ  ಖಾನಪುರ ತಾಲೂಕಿನ ಮೊಡೆಕೊಪ್ಪ ಬಳಿ ಸುಮಾರು 47 ಲಕ್ಷ ರೂ. ಮೊತ್ತದ 753 ವಿದೇಶಿ ಮದ್ಯದ ಪೆಟ್ಟಿಗೆ ಸಾಗಿಸುತ್ತಿದ್ದ ವಾಹನವೊಂದನ್ನು ಅಬಕಾರಿ ಇಲಾಖೆ ವಿಚಕ್ಷಣಾ ದಳ ವಶಕ್ಕೆ ಪಡೆದಿತ್ತು.

ಆದರೆ, ಮಾರನೆ ದಿನ 301 ಲಿಕ್ಕರ್ ಬಾಕ್ಸ್ ನಾಪತ್ತೆಯಾಗಿತ್ತು. ಈ ಸಂಬಂಧ ತನಿಖೆಗೆ ಹಿರಿಯ ಅಧಿಕಾರಿಗಳು ಆದೇಶಿಸಿದ್ದರು. ಮದ್ಯ ಕಳವು ಪ್ರಕರಣದಲ್ಲಿ ಇಲಾಖೆ ಅಧಿಕಾರಿಗಳು ಮತ್ತು ಸಿಬ್ಬಂದಿ ಶಾಮೀಲಾಗಿರುವುದು ತನಿಖೆ ವೇಳೆ ತಿಳಿದುಬಂದಿತ್ತು.

ಅಬಕಾರಿ ಇನ್ಸ್ ಪೆಕ್ಟರ್ ದವಾಲ್ ಸಾಬಾ ಸಿಂದೊಗಿ ಮತ್ತು ಸದಾಶಿವ ಕೊರ್ತಿ, ಅಬಕಾರಿ ಡೆಫ್ಯೂಟಿ ಇನ್ಸ್ ಪೆಕ್ಟರ್ ಪುಷ್ಪಾ ಗಡಾದಿ ಅವರ ಅಮಾನತಿಗೆ ಆದೇಶಿಸಲಾಗಿದ್ದು, ಅವರ ವಿರುದ್ಧ ಎಫ್ಐಆರ್ ಕೂಡಾ ದಾಖಲಿಸಲಾಗಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

ಭಾರತದ ಮೇಲೆ ಸುಂಕಾಸ್ತ್ರ ಜಾರಿ: ಮತ್ತೆ ಇಂಡೋ-ಪಾಕ್ ಯುದ್ಧ ನಿಲ್ಲಿಸಿದ್ದು ನಾನೇ ಎಂದು ಪುನರುಚ್ಛರಿಸಿದ ಡೊನಾಲ್ಡ್ ಟ್ರಂಪ್

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

SCROLL FOR NEXT