ಸಾಂದರ್ಭಿಕ ಚಿತ್ರ 
ರಾಜ್ಯ

ರಾಜ್ಯದಲ್ಲಿ ಅಕ್ರಮ ಗಣಿಗಾರಿಕೆ: 5.21 ಕೋಟಿ ರೂ. ಮೊತ್ತದ ಆಸ್ತಿ ಇಡಿ ವಶಕ್ಕೆ

ಅಕ್ರಮ ಗಣಿಗಾರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹಣ ವರ್ಗಾವಣೆ ತಡೆ ಕಾಯ್ದೆಯಡಿ ಆರೋಪಿತ ವ್ಯಕ್ತಿಯ ಮಾಲೀಕತ್ವದ ರೂ. 5.21 ಕೋಟಿ ಮೊತ್ತದ ಆರು ಸ್ಥಿರಾಸ್ತಿಯನ್ನು ಇಡಿ ಬೆಂಗಳೂರು ವಲಯ ಅಧಿಕಾರಿ ವಶಕ್ಕೆ ಪಡೆದಿದ್ದಾರೆ.

ಬೆಂಗಳೂರು: ಅಕ್ರಮ ಗಣಿಗಾರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹಣ ವರ್ಗಾವಣೆ ತಡೆ ಕಾಯ್ದೆಯಡಿ ಆರೋಪಿತ ವ್ಯಕ್ತಿಯ ಮಾಲೀಕತ್ವದ ರೂ. 5.21 ಕೋಟಿ ಮೊತ್ತದ ಆರು ಸ್ಥಿರಾಸ್ತಿಯನ್ನು ಇಡಿ ಬೆಂಗಳೂರು ವಲಯ ಅಧಿಕಾರಿ ವಶಕ್ಕೆ ಪಡೆದಿದ್ದಾರೆ.

ವಿವಿಧ ವ್ಯಾಪಾರಿಗಳು ಅಕ್ರಮವಾಗಿ ನಡೆಸಿದ ಕಬ್ಬಿಣದ ಅದಿರು ವಹಿವಾಟಿಗೆ ಸಂಬಂಧಿಸಿದ ಪ್ರಕರಣ ಇದಾಗಿದೆ. ಸುಪ್ರೀಂಕೋರ್ಟ್ ನಿರ್ದೇಶನ, ಗಣಿ ಮತ್ತು ಖನಿಜಗಳ ಅಭಿವೃದ್ಧಿ ನಿಯಂತ್ರಣ ಕಾಯ್ಜೆ, 1957 ಮತ್ತು 1988ರ ಭ್ರಷ್ಟಾಚಾರ ತಡೆ ಕಾಯ್ದೆಯ ವಿವಿಧ ಸೆಕ್ಷನ್ ಗಳ ಅಡಿಯಲ್ಲಿ  ಮಿನರಲ್ ಎಂಟರ್‌ಪ್ರೈಸಸ್ ಲಿಮಿಟೆಡ್, ಅಪರಿಚಿತ ಸರ್ಕಾರಿ ನೌಕರರು ಮತ್ತು ಇತರ ಅಪರಿಚಿತ ವ್ಯಕ್ತಿಗಳ ವಿರುದ್ಧ ಲೋಕಾಯುಕ್ತದ ವಿಶೇಷ ತನಿಖಾ ತಂಡ ದಾಖಲಿಸಿದ ಎಫ್‌ಐಆರ್ ಆಧರಿಸಿ ಇಡಿ ಪಿಎಂಎಲ್‌ಎ ಅಡಿಯಲ್ಲಿ ತನಿಖೆಯನ್ನು ಪ್ರಾರಂಭಿಸಿತ್ತು.

ತನಿಖೆಯ ಸಮಯದಲ್ಲಿ, ಕಾನೂನುಬಾಹಿರವಾಗಿ ಗಣಿಗಾರಿಕೆ, ಕಬ್ಬಿಣ ಅದಿರಿನ ಸಾಗಣೆ ಮತ್ತು ಮಾನ್ಯ ಪರವಾನಗಿಗಳಿಲ್ಲದೆ ವ್ಯವಾಹರ ಮಾಡಿರುವುದು ಗಮನಕ್ಕೆ ಬಂದಿದೆ, ಇದು ಬೊಕ್ಕಸಕ್ಕೆ ನಷ್ಟವನ್ನು ಉಂಟುಮಾಡಿದೆ. ಅಂತಹ ಅಕ್ರಮ ಕಬ್ಬಿಣದ ಅದಿರಿನ ಮೂಲವು  ಬಿಪಿ ಆನಂದ್ ಕುಮಾರ್, ಪಾಂಡುರಂಗ ಸಿಂಗ್ ಮತ್ತು ಗೋಪಾಲ್ ಸಿಂಗ್ ಪಾಲುದಾರಿಕೆ ಹೊಂದಿರುವ ಎಸ್‌ಬಿ ಮಿನರಲ್ಸ್ ಒಡೆತನದ ಗಣಿ, ಶಾಂತಲಕ್ಷ್ಮಿ ಮತ್ತು ಜೆ ಮಿಥಿಲೇಶ್ವರ್ ಒಡೆತನದ  ಗಣಿ ಮತ್ತು BMM ಇಸ್ಪಾಟ್ ಲಿಮಿಟೆಡ್ ಮತ್ತು ದಿನೇಶ್ ಕುಮಾರ್ ಸಿಂಘಿ ಪಾಲುದಾರಿಕೆ ಹೊಂದಿರುವ ಭಾರತ್ ಮೈನ್ಸ್  ಮಿನರಲ್ಸ್  ಎಂಬುದು ಅಧಿಕೃತ ಹೇಳಿಕೆಯಿಂದ ತಿಳಿದುಬಂದಿದೆ. 

ಈ ಹಿಂದೆ, ಸುಪ್ರೀಂ ಕೋರ್ಟ್ ನೇಮಿಸಿದ ಕೇಂದ್ರೀಯ ಸಬಲೀಕರಣ ಸಮಿತಿಯು (CEC) ರಾಜ್ಯದಲ್ಲಿ ಗಣಿಗಾರಿಕೆ ಗುತ್ತಿಗೆಯ ಸಮೀಕ್ಷೆಯ ಸಮಯದಲ್ಲಿ, ಈ ನಾಲ್ಕು ಗಣಿಗಳಿಗೆ ಸಂಬಂಧಿಸಿದಂತೆ ಸಮಗ್ರ ಅಕ್ರಮ,ಅತಿಕ್ರಮಣವನ್ನು ಕಂಡುಹಿಡಿದಿದ್ದು, ಅವುಗಳನ್ನು ಸಿ ವರ್ಗದಲ್ಲಿ ಇರಿಸಿದೆ ಮತ್ತು ಸಿಇಸಿ, ಶಿಫಾರಸಿನ ಮೇರೆಗೆ ಸುಪ್ರೀಂಕೋರ್ಟ್ ನ್ಯಾಯಾಲಯ ಅವರ ಪರವಾನಗಿಯನ್ನು ರದ್ದುಗೊಳಿಸಿದೆ.  

ಆರೋಪಿಗಳು ಸರ್ಕಾರದ ಬೊಕ್ಕಸಕ್ಕೆ ಅನುಚಿತವಾದ ನಷ್ಟವನ್ನು ಉಂಟುಮಾಡಿದ್ದಾರೆ ಮತ್ತು ಅನುಗುಣವಾದ ಅಕ್ರಮ ಲಾಭವನ್ನು ಹೊಂದಿದ್ದಾರೆ ಎಂದು ಪಿಎಂಎಲ್‌ಎ ಅಡಿಯಲ್ಲಿ ನಡೆಸಿದ ತನಿಖೆ ದೃಢಪಡಿಸಿದೆ. ಹೆಚ್ಚಿನ ತನಿಖೆ ಪ್ರಗತಿಯಲ್ಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

'ನಿಮ್ಮ ಭಾಷಣ ನಾಚಿಕೆಯಿಲ್ಲದೆ ಸಮರ್ಥನೆ ಮಾಡಿಕೊಂಡಂತೆ ಇತ್ತು': 1947ರ ಐನ್ ಸ್ಟೈನ್ ನೆಹರೂಗೆ ಬರೆದ ಪತ್ರ ಉಲ್ಲೇಖಿಸಿ Modi ಟೀಕಿಸಿದ ಕಾಂಗ್ರೆಸ್

Ranji Trophy final: ಔಕಿಬ್ ನಬಿ ಬೌಲಿಂಗ್ ಮ್ಯಾಜಿಕ್‌ಗೆ ಬೆರಗಾದ ಕೆಎಲ್ ರಾಹುಲ್; ಆರಂಭದಲ್ಲೇ ಕರ್ನಾಟಕಕ್ಕೆ ಸಂಕಷ್ಟ!

T20 World cup 2026: 'ಆಕ್ರಮಣಕಾರಿ ಶೈಲಿ ಮುಂದುವರಿಸಿ': ಜಿಂಬಾಬ್ವೆ ವಿರುದ್ಧದ ಪಂದ್ಯಕ್ಕೂ ಮುನ್ನ ಟೀಂ ಇಂಡಿಯಾಗೆ ಅನಿಲ್ ಕುಂಬ್ಳೆ ಎಚ್ಚರಿಕೆ

ರಿಯಲ್ ಲೈಫ್‌ನಲ್ಲೂ ಒಂದಾದ ರೀಲ್ ಜೋಡಿ: ತೆಲುಗು ಸಂಪ್ರದಾಯದಂತೆ ರಶ್ಮಿಕಾ–ವಿಜಯ್ ವಿವಾಹ, ಸಂಜೆ ಕೊಡವ ಸಂಪ್ರದಾಯದಲ್ಲಿ ಮತ್ತೊಂದು ಸಮಾರಂಭ

SCROLL FOR NEXT