ರಾಜ್ಯ

ಭಾರತ ಆಯ್ದ ಎರಡು-ಮೂರು ಮಂದಿಗೆ ಸೇರಿದ್ದಲ್ಲ, ಎಲ್ಲರಿಗೂ ಸೇರಿದ್ದು: ಬೆಳಗಾವಿಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ

ಈ ದೇಶ ಎಲ್ಲರಿಗೂ ಸೇರಿದ್ದು, ಯಾರೋ 2ರಿಂದ 3 ಮಂದಿಗೆ ಸೇರಿದ್ದಲ್ಲ ಅಥವಾ ಅದಾನಿಯವರದ್ದಲ್ಲ. ಬಿಜೆಪಿಯ ಮಿತ್ರರಾದ ಆಯ್ದ ಜನರಿಗೆ ಎಲ್ಲಾ ಲಾಭಗಳು ಸಿಗುತ್ತಿವೆ. ಇದುವೇ ಭ್ರಷ್ಟಾಚಾರಕ್ಕೆ ಕಾರಣ. ಕರ್ನಾಟಕದ ಸರ್ಕಾರವು ದೇಶದಲ್ಲೇ ಅತ್ಯಂತ ಭ್ರಷ್ಟ ಸರ್ಕಾರ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. 

ಬೆಳಗಾವಿ: ಈ ದೇಶ ಎಲ್ಲರಿಗೂ ಸೇರಿದ್ದು, ಯಾರೋ 2ರಿಂದ 3 ಮಂದಿಗೆ ಸೇರಿದ್ದಲ್ಲ ಅಥವಾ ಅದಾನಿಯವರದ್ದಲ್ಲ. ಬಿಜೆಪಿಯ ಮಿತ್ರರಾದ ಆಯ್ದ ಜನರಿಗೆ ಎಲ್ಲಾ ಲಾಭಗಳು ಸಿಗುತ್ತಿವೆ. ಇದುವೇ ಭ್ರಷ್ಟಾಚಾರಕ್ಕೆ ಕಾರಣ. ಕರ್ನಾಟಕದ ಸರ್ಕಾರವು ದೇಶದಲ್ಲೇ ಅತ್ಯಂತ ಭ್ರಷ್ಟ ಸರ್ಕಾರ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕೇಂದ್ರ ಮತ್ತು ರಾಜ್ಯ ಬಿಜೆಪಿ ಸರ್ಕಾರಗಳ ವಿರುದ್ಧ ವಾಗ್ದಾಳಿ ನಡೆಸಿದರು. 

ಬೆಳಗಾವಿಯ ಸಿಪಿಎಡ್​ ಮೈದಾನದಲ್ಲಿ ನಡೆದ 'ಯುವ ಕ್ರಾಂತಿ' ಸಮಾವೇಶದಲ್ಲಿ ಮಾತನಾಡಿದ ಅವರು, 'ಭಾರತ ಅದಾನಿಯವರದ್ದಲ್ಲ. ಬದಲಿಗೆ ರೈತರ, ಯುವಕರ ಭಾರತ. ದೇಶದಲ್ಲಿಂದು ದ್ವೇಷವನ್ನು ಬಿತ್ತಲಾಗುತ್ತಿದೆ. ರಾಜ್ಯ ಸರ್ಕಾರ ಯುವಕರಿಗೆ ಉದ್ಯೋಗ ನೀಡುತ್ತಿಲ್ಲ. ರಾಜ್ಯದಲ್ಲಿ ಗುತ್ತಿಗೆದಾರರ ಬಳಿ ಶೇ 40ರಷ್ಟು ಕಮಿಷನ್ ಪಡೆಯುತ್ತಿದ್ದಾರೆ. ಈ ಬಗ್ಗೆ ಪ್ರಧಾನಿ ನರೇಂದ್ರ ಕ್ರಮಕೈಗೊಂಡಿಲ್ಲ ಎಂದರು.

ಪದವೀಧರರಿಗೆ 3000 ರೂ., ಡಿಪ್ಲೊಮಾ ಹೊಂದಿರುವವರಿಗೆ 2 ವರ್ಷಕ್ಕೆ 1500 ರೂ. ಮಾಸಿಕ ನಿರುದ್ಯೋಗ ಭತ್ಯೆ ನೀಡಲಿದ್ದೇವೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮಾತ್ರ ಇದು ಸಾಧ್ಯ. ಕಾಂಗ್ರೆಸ್ ಅಧಿಕಾರಕ್ಕೆ ಬಂದ ಮೇಲೆ ಕರ್ನಾಟಕದಲ್ಲಿ ಖಾಲಿ ಇರುವ ಎಲ್ಲಾ ಹುದ್ದೆಗಳನ್ನು ಭರ್ತಿ ಮಾಡಲಿದೆ ಎಂದು ರಾಹುಲ್ ಹೇಳಿದರು.

ಭಾರತ್ ಜೋಡೋ ಯಾತ್ರೆಯ ವೇಳೆ ಇಲ್ಲಿನ ಯುವಕರು ಇಲ್ಲಿ ಉದ್ಯೋಗ ಸಿಗುತ್ತಿಲ್ಲ ಎಂದು ಹೇಳಿದ್ದಾರೆ. ಈ ಸರ್ಕಾರ ಶೇ 40 ಕಮಿಷನ್ ಸರ್ಕಾರ ಎಂದು ಜನರು ದೂರಿದ್ದಾರೆ. ಎಲ್ಲಾ ಕಾಂಗ್ರೆಸ್ ನಾಯಕರು ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಒಗ್ಗಟ್ಟಿನಿಂದ ಹೋರಾಡಲಿದ್ದಾರೆ. ಈ ಚುನಾವಣೆಯಲ್ಲಿ ಪಕ್ಷವು ಜಯಭೇರಿ ಬಾರಿಸಲಿದೆ ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ವಿವರ ಇಲ್ಲಿದೆ...

ವಿದೇಶಿ ಮಹಿಳೆಗೆ ಪತ್ರ ಬರೆದು ಅಂಬೇಡ್ಕರ್ ಸೋಲನ್ನು ನೆಹರು ಸಂಭ್ರಮಿಸಿದ್ದು ನಿಜವಲ್ಲವೇ? 'ಗೂಗಲ್ ಬೇಬಿ'ಯಂತೆ ವರ್ತಿಸಬೇಡಿ!

ಪ್ರಧಾನಿ ನರೇಂದ್ರ ಮೋದಿ ಮತ್ತೊಂದು ದಾಖಲೆ: Instagramನಲ್ಲಿ 100 ಮಿ. ಫಾಲೋವರ್ಸ್ ದಾಟಿದ ಮೊದಲ ವಿಶ್ವ ನಾಯಕ

SCROLL FOR NEXT