ಗೋಮೂತ್ರ ಸಿಂಪಡಿಸುತ್ತಿರುವುದು. 
ರಾಜ್ಯ

ಆಜಾನ್ ವಿವಾದ: ಡಿಸಿ ಕಚೇರಿಗೆ ಬಜರಂಗದಳ, ವಿಎಚ್‌ಪಿ ಕಾರ್ಯಕರ್ತರಿಂದ ಗೋಮೂತ್ರ ಸಿಂಪಡಣೆ

ಜಿಲ್ಲಾಧಿಕಾರಿ ಕಚೇರಿ ಮೆಟ್ಟಿಲ ಮೇಲೆ ಆಜಾನ್ ಕೂಗಿದ್ದ ಸ್ಥಳವನ್ನು ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಮತ್ತು ಬಜರಂಗ ದಳದ ಕಾರ್ಯಕರ್ತರು ಸೋಮವಾರ ಗೋಮೂತ್ರ ಸಿಂಪಡಿಸಿ ಶುದ್ಧೀಕರಣ ಮಾಡಿದರು.

ಶಿವಮೊಗ್ಗ: ಜಿಲ್ಲಾಧಿಕಾರಿ ಕಚೇರಿ ಮೆಟ್ಟಿಲ ಮೇಲೆ ಆಜಾನ್ ಕೂಗಿದ್ದ ಸ್ಥಳವನ್ನು ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಮತ್ತು ಬಜರಂಗ ದಳದ ಕಾರ್ಯಕರ್ತರು ಸೋಮವಾರ ಗೋಮೂತ್ರ ಸಿಂಪಡಿಸಿ ಶುದ್ಧೀಕರಣ ಮಾಡಿದರು.

ಪೊಲೀಸರ ಪ್ರತಿರೋಧದ ನಡುವೆಯೂ ಗೋಮೂತ್ರ ಸಿಂಪಡಣೆ ಮಾಡಲಾಯಿತು. ಇದರಿಂದ ಡಿಸಿ ಕಚೇರಿ ಆವರಣದಲ್ಲಿ ಕೆಲಕಾಲ ಗೊಂದಲದ ವಾತಾವರಣ ನಿರ್ಮಾಣವಾಗಿತ್ತು.

ಜಿಲ್ಲಾಧಿಕಾರಿ ಕಚೇರಿ ಮೆಟ್ಟಿಲ ಮೇಲೆ ಆಜಾನ್ ಕೂಗಿದ್ದನ್ನು ವಿರೋಧಿಸಿ ವಿಶ್ವ ಹಿಂದೂ ಪರಿಷತ್ತು ಮತ್ತು ಬಜರಂಗದಳದ ಕಾರ್ಯಕರ್ತರು ಸೋಮವಾರ ಪ್ರತಿಭಟನೆ ನಡೆಸಿದರು. ಈ ವೇಳೆ ಹಿಂೂ ಸಂಘಟನೆಯ ಕಾರ್ಯಕರ್ತರು ಆಜಾನ್ ಕೂಗಿದ್ದ ಸ್ಥಳದಲ್ಲಿ ಗೋಮೂತ್ರ ಸಿಂಪಡಿಸಿದರು. ಕೂಡಲೇ ಸ್ಥಳಕ್ಕೆ ದೌಡಾಯಿಸಿದ ಪೊಲೀಸರು ಗೋಮೂತ್ರ ಸಿಂಪಡಣೆ ಮಾಡದಂತೆ ತಡೆಯಲು ಮುಂದಾದರು. ಆದರೂ, ಹಿಂದೂ ಸಂಘಟನೆಗಳ ಕಾರ್ಯಕರ್ತರು ಗೋ ಮೂತ್ರ ಸಿಂಪಡಿಸಿ ಘೋಷಣೆಗಳನ್ನು ಕೂಗಿದರು.

ಶಾಂತಿ ಕದಡಲು ಕೋಮುವಾದಿಗಳು ಆಜಾನ್ ಪಠಿಸಿದ್ದಾರೆ. ಇದರ ಹಿಂದಿರುವವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು. ಶಾಂತಿ ಕದಡಲು ಕೋಮುವಾದಿಗಳು ಆಜಾನ್ ಪಠಿಸಿದ್ದಾರೆಂದು ಹೇಳಿದರು.

ಬಜರಂಗದಳದ ಮುಖಂಡ ರಾಜೇಶ್‌ಗೌಡ ಮಾತನಾಡಿ, ಪ್ರತಿಭಟಿಸುವ ಹಕ್ಕು ಎಲ್ಲರಿಗೂ ಇದೆ. ಆದರೆ ಜಿಲ್ಲಾಧಿಕಾರಿ ಕಚೇರಿ ಎದುರು ಆಜಾನ್‌ ಹೇಳುವ ಮೂಲಕ ಕೋಮುವಾದ ಪ್ರದರ್ಶಿಸಲಾಗಿದೆ. ಇದು ಆಜಾನ್‌ ಹೇಳುವ ಸ್ಥಳವಲ್ಲ, ಹೀಗಾಗಿ ಸ್ಥಳವನ್ನು ಶುದ್ಧೀಕರಿಸಿದ್ದೇವೆಂದು ಹೇಳಿದರು.

ಕಳೆದ ಬಿಜೆಪಿ ಶಾಸಕ ಈಶ್ವರಪ್ಪ ಅವರು ಆಜಾನ್ ಕುರಿತು ಹೇಳಿಕೆಯೊಂದನ್ನು ನೀಡಿದ್ದರು. ಈ ಹೇಳಿಕೆ ವಿವಾದಕ್ಕೆ ಎಡೆಮಾಡಿಕೊಟ್ಟಿದೆ. ಹೇಳಿಕೆ ವಿರೋಧಿಸಿದ್ದ ಕೆಲ ಮುಸ್ಲಿಂ ಯುವಕರು ಜಿಲ್ಲಾಧಿಕಾರಿ ಕಚೇರಿ ಬಳಿ ಆಜಾನ್ ಪಠಿಸಿದ್ದರು. ಬಳಿಕ ಯುವಕನನ್ನು ಬಂಧಿಸಿದ್ದ ಪೊಲೀಸರು ಎಚ್ಚರಿಕೆ ನೀಡಿ ಬಿಡುಗಡೆ ಮಾಡಿದ್ದರು. ಯುವಕ ಆಜಾನ್ ಕೂಗಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ವಿಡಿಯೋ ವೈರಲ್ ಆಗಿದೆ. ಇದಕ್ಕೆ ಹಿಂದೂಪರ ಸಂಘಟನೆಗಳ ಕಾರ್ಯಕರ್ತರು ತೀವ್ರ ವಿರೋಧ ವ್ಯಕ್ತಪಡಿಸುತ್ತಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇರಾನ್‌ ಸರ್ಕಾರ ವಿರುದ್ಧ ಪ್ರತಿಭಟನೆ: ಹಿಂಸಾಚಾರದಲ್ಲಿ ಮೃತಪಟ್ಟವರ ಸಂಖ್ಯೆ 116 ಕ್ಕೆ ಏರಿಕೆ

ಕರ್ನಾಟಕದ ಮುಕುಟಕ್ಕೆ ಮತ್ತೊಂದು ಗರಿ: ಬೆಂಗಳೂರು ಮೂಲದ ಮೇಜರ್ Swathi ShanthaKumarಗೆ ವಿಶ್ವಸಂಸ್ಥೆ ಸೆಕ್ರೆಟರಿ ಜನರಲ್ ಪ್ರಶಸ್ತಿ!

ಕೇಂದ್ರ ಬಜೆಟ್ 2026-27: ರಾಜ್ಯದ ಹಣಕಾಸು ಸಮತೋಲನ ಪುನಃಸ್ಥಾಪಿಸಲು ಹೆಚ್ಚಿನ ಅನುದಾನ ಒದಗಿಸಿ; ಕೇಂದ್ರಕ್ಕೆ ರಾಜ್ಯ ಸರ್ಕಾರ ಆಗ್ರಹ

Grok ಅಶ್ಲೀಲ ಕಂಟೆಂಟ್ ವಿವಾದ: ಕೇಂದ್ರ ಸರ್ಕಾರಕ್ಕೆ ಕೊನೆಗೂ ಮಣಿದ X, 600 ಖಾತೆಗಳ ಡಿಲೀಟ್!

ಕೌಟುಂಬಿಕ ಹಿಂಸಾಚಾರ ಸಂತ್ರಸ್ಥರಿಗೆ ಬೆಂಗಳೂರಿನಲ್ಲಿ ಅಣಬೆ ಕೃಷಿ ತರಬೇತಿ

SCROLL FOR NEXT