ಎನ್ .ಆರ್ ರಮೇಶ್ 
ರಾಜ್ಯ

ಸಿದ್ದರಾಮಯ್ಯ ಅವಧಿಯಲ್ಲಿ ಬಹುಕೋಟಿ ಟಿಡಿಆರ್‌ ಹಗರಣ: ದಾಖಲೆ ಬಿಡುಗಡೆ ಮಾಡಿದ ಎನ್ ಆರ್ ರಮೇಶ್; ಲೋಕಾಯುಕ್ತಕ್ಕೆ ದೂರು!

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆಡಳಿತಾವಧಿಯಲ್ಲಿ ಟಿಡಿಆರ್‌ಗೆ ಸಂಬಂಧಿಸಿದಂತೆ ನಡೆದಿರುವ ಬೃಹತ್‌ ಹಗರಣವನ್ನು ಬಿಜೆಪಿ ಬೆಂಗಳೂರು ದಕ್ಷಿಣ ಜಿಲ್ಲಾ ಅಧ್ಯಕ್ಷ ಎನ್‌.ಆರ್‌.ರಮೇಶ್‌  ಬಯಲಿಗೆಳೆದಿದ್ದು, ದಾಖಲೆ ಬಿಡುಗಡೆ ಮಾಡಿದ್ದಾರೆ.

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆಡಳಿತಾವಧಿಯಲ್ಲಿ ಟಿಡಿಆರ್‌ಗೆ ಸಂಬಂಧಿಸಿದಂತೆ ನಡೆದಿರುವ ಬೃಹತ್‌ ಹಗರಣವನ್ನು ಬಿಜೆಪಿ ಬೆಂಗಳೂರು ದಕ್ಷಿಣ ಜಿಲ್ಲಾ ಅಧ್ಯಕ್ಷ ಎನ್‌.ಆರ್‌.ರಮೇಶ್‌  ಬಯಲಿಗೆಳೆದಿದ್ದು, ದಾಖಲೆ ಬಿಡುಗಡೆ ಮಾಡಿದ್ದಾರೆ.

ಈ ಸಂಬಂಧ ಅವರು ಲೋಕಾಯುಕ್ತ ಸಂಸ್ಥೆಗೆ ದೂರು ನೀಡಿದ್ದಾರೆ. ಬಿಬಿಎಂಪಿ ಇತಿಹಾಸದಲ್ಲಿಯೇ 2500 ಕೋಟಿ ರು. ಮೊತ್ತದ ಅತಿ ದೊಡ್ಡ ಹಗರಣವಾಗಿದ್ದು, ಬಿಬಿಎಂಪಿ ಎಂದು ಬೆಂಗಳೂರು-ಮೈಸೂರು ಮೂಲಸೌಕರ್ಯ ಕಾರಿಡಾರ್‌ ಪ್ರದೇಶ ಯೋಜನಾ ಪ್ರಾಧಿಕಾರ (ಬಿಎಂಐಸಿಎಪಿಎ) ಅಧಿಕಾರಿಗಳು ಭಾಗಿಯಾಗಿದ್ದಾರೆ. ಈ ಬಗ್ಗೆ ಸೂಕ್ತ ತನಿಖೆ ಕೈಗೊಳ್ಳಬೇಕು ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ದಾಖಲೆಗಳನ್ನು ಬಿಡುಗಡೆ ಮಾಡಿ ಮಾತನಾಡಿದ ರಮೇಶ್‌, ರಾಮನಗರ ಜಿಲ್ಲೆಯ ಮಾಗಡಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಕೊಡಿಯಾಲ ಕರೇನಹಳ್ಳಿ ಗ್ರಾಮದ ವಿವಿಧ ಸರ್ವೇ ನಂಬರ್‌ನ ಒಟ್ಟು 40.09 ಎಕರೆಯಷ್ಟುವಿಸ್ತೀರ್ಣದ ಸ್ವತ್ತನ್ನು ಅಲ್ಲಿನ ರೈತರಿಂದ 2011-12ರಲ್ಲಿ ಕೇವಲ ಲಕ್ಷ ರು.ಗೆ ಕ್ರಯಕ್ಕೆ ಪಡೆಯಲಾಗಿದೆ. ನಂತರ ಬಿಬಿಎಂಪಿ ವ್ಯಾಪ್ತಿಯಲ್ಲಿ ಸಂಗ್ರಹವಾಗುವ ತ್ಯಾಜ್ಯದ ಸಮಸ್ಯೆಯನ್ನು ಪರಿಹರಿಸುವ ನಿಟ್ಟಿನಲ್ಲಿ ತ್ಯಾಜ್ಯ ಸಂಸ್ಕರಣಾ ಘಟಕವನ್ನು ಸ್ಥಾಪಿಸುವ ಉದ್ದೇಶ ಹೊಂದಲಾಗಿದೆ ಎಂಬ ವರಸೆಯನ್ನು ಪ್ರಾರಂಭಿಸಲಾಗಿದೆ ಎಂದು ಆರೋಪಿಸಿದರು.

ಮೇಲ್ನೋಟಕ್ಕೆ ಇದು ಯಾವುದೇ ಪ್ರತಿಫಲಾಪೇಕ್ಷೆ ಇಲ್ಲದೆ ಉಚಿತವಾಗಿ ನೀಡುತ್ತಿದ್ದಾರೆ ಎಂಬ ಭಾವನೆ ಮೂಡುತ್ತದೆ. ಆದರೆ, ಅವರ ಪ್ರಸ್ತಾವನೆಯ ಹಿಂದೆ ಇದ್ದಂತಹ ಬೃಹತ್‌ ಮಟ್ಟದ ಮಹಾವಂಚನೆ ಕ್ರಿಮಿನಲ್‌ ಯೋಜನೆಯ ದುರುದ್ದೇಶ ಯಾರ ಊಹೆಗೂ ನಿಲುಕದ್ದು ಎಂದು ಗೊತ್ತಾಗುತ್ತದೆ.

ಯಾವುದೇ ಪ್ರಾಧಿಕಾರದ ವ್ಯಾಪ್ತಿಯಲ್ಲಿ ನೀಡಲಾಗುವ ಟಿಡಿಆರ್‌ ಅನ್ನು ಅದೇ ಪ್ರಾಧಿಕಾರದ ವ್ಯಾಪ್ತಿಯಲ್ಲಿಯೇ ಬಳಸಬೇಕು ಎಂಬ ನಿಯಮ ಇದೆ. ಆದರೆ, ಪಾಲಿಕೆಯ ಹಿರಿಯ ಅಧಿಕಾರಿಗಳು ಮತ್ತು ಬಿಎಂಐಸಿಎಪಿಎ ಅಧಿಕಾರಿಗಳು ಟಿಡಿಆರ್‌ ಮಾಫಿಯಾದೊಂದಿಗೆ ಶಾಮೀಲಾಗಿದ್ದಾರೆ. ಈ ನಡುವೆ, ನ್ಯಾಯಾಲಯಕ್ಕೆ ಅರ್ಜಿದಾರರ ದುರುದ್ದೇಶದ ಬಗ್ಗೆ ಮನವರಿಕೆ ಮಾಡಿಕೊಡಬೇಕಿದ್ದ ಬಿಬಿಎಂಪಿ ವಕೀಲರು ಸರಿಯಾಗಿ ವಾದ ಮಂಡಿಸಲಿಲ್ಲ. ಪಾಲಿಕೆ ವಕೀಲ ದೇವೇಂದ್ರಪ್ಪ ನ್ಯಾಯಾಲಯದಲ್ಲಿ ಯಾವುದೇ ಆಕ್ಷೇಪ ವ್ಯಕ್ತಪಡಿಸದೆ ಪರೋಕ್ಷವಾಗಿ ಟಿಡಿಆರ್ ಆರೋಪಿಗಳಿಗೆ ಅನುಕೂಲ ಮಾಡಿಕೊಟ್ಟರು ಹೀಗಾಗಿ ನ್ಯಾಯಾಲಯವು ಅರ್ಜಿದಾರರ ಪರವಾದ ಆದೇಶ ನೀಡಿದೆ ಎಂದರು.

40 ಎಕರೆಯನ್ನು ಚದರ ಅಡಿಯಾಗಿ ಪರಿವರ್ತಿಸಿದರೆ, ಅದು 26,44,353 ಚದರ ಅಡಿ ಆಗುತ್ತದೆ. ಬಿಬಿಎಂಪಿ ಮಿತಿಯಲ್ಲಿ ಪ್ರತಿ ಚದರ ಅಡಿಗೆ ಸಾವಿರಾರು ರೂಪಾಯಿ ವೆಚ್ಚವಾಗುತ್ತದೆ. ನಗರಾಭಿವೃದ್ಧಿ ಇಲಾಖೆ ಪರಿಶೀಲಿಸಿ ನಿಲ್ಲಿಸಬೇಕಿತ್ತು ಆದರೆ ಟಿಡಿಆರ್‌ಗೆ ಆದೇಶ ಹೊರಡಿಸಲಾಗಿದೆ ಎಂದರು.

ಇಡೀ ಘಟನೆ ಸಿಎಂ ಸಿದ್ದರಾಮಯ್ಯ ಅವರ ಅವಧಿಯಲ್ಲಿ ನಡೆದಿದ್ದು, ಈ ಪ್ರಕರಣದಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಲಿದ್ದೇನೆ, ಹಗರಣದ ಕುರಿತು ಸಿಬಿಐ ತನಿಖೆ ನಡೆಸಬೇಕು ಎಂದು ಒತ್ತಾಯಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

SCROLL FOR NEXT