ಭೀಮಗಡ ವನ್ಯಜೀವಿ ಅಭಯಾರಣ್ಯ ವ್ಯಾಪ್ತಿಯ ಶಿರೋಳಿ, ಹೇಮಡ್ಗಾ, ನೇರಸ ಮತ್ತು ಸುತ್ತಮುತ್ತಲಿನ ಗ್ರಾಮಗಳ ನಿವಾಸಿಗಳು ಸೋಮವಾರ ಬೆಳಗಾವಿಯ ಉಪ ಅರಣ್ಯ ಸಂರಕ್ಷಣಾಧಿಕಾರಿ ಹರ್ಷಾ ಬಾನು ಅವರಿಗೆ ಮನವಿ ಸಲ್ಲಿಸಿದರು. 
ರಾಜ್ಯ

ಮರೀಚಿಕೆಯಾದ ಮೂಲಭೂತ ಸೌಕರ್ಯ: ಭೀಮಗಡ ಅಭಯಾರಣ್ಯ ವಾಸಿಗಳಿಂದ ಚುನಾವಣೆ ಬಹಿಷ್ಕಾರ ಎಚ್ಚರಿಕೆ

ಮೂಲಭೂತ ಸೌಕರ್ಯ ದೊರಯದೆ ಬೇಸತ್ತು ಹೋಗಿರುವಭೀಮಗಡ ವನ್ಯಜೀವಿ ಅಭಯಾರಣ್ಯ (ಬಿಡಬ್ಲ್ಯುಎಸ್) ಆವರಣದಲ್ಲಿರುವ ಕುಗ್ರಾಮಗಳ ಗ್ರಾಮಸ್ಥರು, ಬೇಡಿಕೆಗಳ ನಿರ್ಲಕ್ಷಿಸಿದ್ದೇ ಆದರೆ, ಮುಂಬರುವ ವಿಧಾನಸಭಾ ಚುನಾವಣೆಯನ್ನು ಬಹಿಷ್ಕರಿಸುವುದಾಗಿ ಎಚ್ಚರಿಕೆ ನೀಡಿದ್ದಾರೆ.

ಬೆಳಗಾವಿ: ಮೂಲಭೂತ ಸೌಕರ್ಯ ದೊರಯದೆ ಬೇಸತ್ತು ಹೋಗಿರುವಭೀಮಗಡ ವನ್ಯಜೀವಿ ಅಭಯಾರಣ್ಯ (ಬಿಡಬ್ಲ್ಯುಎಸ್) ಆವರಣದಲ್ಲಿರುವ ಕುಗ್ರಾಮಗಳ ಗ್ರಾಮಸ್ಥರು, ಬೇಡಿಕೆಗಳ ನಿರ್ಲಕ್ಷಿಸಿದ್ದೇ ಆದರೆ, ಮುಂಬರುವ ವಿಧಾನಸಭಾ ಚುನಾವಣೆಯನ್ನು ಬಹಿಷ್ಕರಿಸುವುದಾಗಿ ಎಚ್ಚರಿಕೆ ನೀಡಿದ್ದಾರೆ.

ವನ್ಯಜೀವಿ ಅಭಯಾರಣ್ಯ (ಬಿಡಬ್ಲ್ಯುಎಸ್) ಆವರಣದಲ್ಲಿರುವ ಶಿರೋಳಿ, ಹೇಮಡಗಾ, ತಳೇವಾಡಿ ಮತ್ತು ಸುತ್ತಮುತ್ತಲಿನ ಗ್ರಾಮಸ್ಥರು ಬೆಳಗಾವಿಯಲ್ಲಿ ಜಿಲ್ಲಾಡಳಿತ ಮತ್ತು ಅರಣ್ಯ ಇಲಾಖೆಗೆ ಸೋಮವಾರ ಭೇಟಿ ನೀಡಿದ್ದು, ಮನವಿ ಪತ್ರ ಸಲ್ಲಿಸಿದರು.

ಖಾನಾಪುರ ತಾಲೂಕಿನ ಶಿರೋಳಿ ಗ್ರಾಮದಲ್ಲಿ ಇತ್ತೀಚೆಗೆ ಆಯೋಜಿಸಿದ್ದ ಸಭೆಯಲ್ಲಿ ಚುನಾವಣೆ ಬಹಿಷ್ಕರಿಸಿ ಧರಣಿ ನಡೆಸುವ ನಿರ್ಣಯವನ್ನು ಕೈಗೊಳ್ಳಲಾಯಿತು.

ಇದೇ ಗ್ರಾಮಸ್ಥರು 2019ರ ಲೋಕಸಭೆ ಚುನಾವಣೆಯನ್ನೂ ಬಹಿಷ್ಕರಿಸಿದ್ದರು. ಬೇಡಿಕೆಗಳ ಈಡೇರಿಸದ ಹಿನ್ನೆಲೆಯಲ್ಲಿ ಗವಳಿ, ಕೃಷ್ಣಾಪುರ, ಪಾಸ್ತೋಲಿ, ಕೊಂಗಾಲ, ತಳೇವಾಡಿ, ಜೋರ್ಡಾನ್, ಸಾಯಚೆ ಮಾಳ, ಚಾಪೋಲಿ, ಕಾಪೋಲಿ, ಮುದಗೈ, ಚಿರೇಖಣಿ, ಆಮಗಾಂವ ಗ್ರಾಮಗಳ ನಿವಾಸಿಗಳು ಚುನಾವಣೆಯನ್ನು ಬಹಿಷ್ಕರಿಸಿದ್ದರು. ಚುನಾವಣೆಯಲ್ಲಿ ಈ ಗ್ರಾಮಗಳ ಯಾವುದೇ ವ್ಯಕ್ತಿ ಕೂಡ ಮತ ಚಲಾಯಿಸಿರಲಿಲ್ಲ. ಇದೀಗ ಮತ್ತೊಮ್ಮೆ ಬೇಡಿಕೆಯನ್ನು ಮುಂದಿಟ್ಟು, ಚುನಾವಣೆ ಬಹಿಷ್ಕರಿಸುವುದಾಗಿ ಹೇಳಿದ್ದಾರೆ.  

ಬಿಡಬ್ಲ್ಯೂಎಸ್‌ನಲ್ಲಿರುವ ಹೇಮಡ್ಗಾ ಗ್ರಾಮದ ನಿವಾಸಿ ವಿಜಯ್ ಮಾದರ್ ಎಂಬುವವರು ಮಾತನಾಡಿ, ಈ ಗ್ರಾಮಗಳಿಗೆ ಸರಿಯಾದ ರಸ್ತೆಗಳಿಲ್ಲ, ಹೀಗಾಗಿಯೇ ಸಾರ್ವಜನಿಕ ಸಾರಿಗೆ ವ್ಯವಸ್ಥೆ ಇಲ್ಲದಂತಾಗಿದೆ. ಮಳೆಗಾಲದಲ್ಲಿ ನದಿ, ತೊರೆಗಳಲ್ಲಿ ಪ್ರವಾಹ ಉಂಟಾಗಿ ಕಾಡಂಚಿನ ಹಲವಾರು ಗ್ರಾಮಗಳು ಸಂಪರ್ಕ ಕಡಿತಗೊಳ್ಳುತ್ತವೆ ಎಂದು ಬೇಸರ ವ್ಯಕ್ತಪಡಿಸಿದರು.

ಸೇತುವೆಗಳನ್ನು ನಿರ್ಮಿಸಲು ಯೋಜನೆಗಳನ್ನು ಮಂಜೂರು ಮಾಡಿದ್ದರೂ, ಅರಣ್ಯಗಳಲ್ಲಿ ನಿರ್ಮಾಣಕ್ಕೆ ಸಂಬಂಧಿಸಿದಂತೆ ಅನುಮತಿ ನೀಡಲಾಗುತ್ತಿಲ್ಲ ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಟ್ರಂಪ್ ಎಚ್ಚರಿಕೆಗೆ ತಲೆಬಾಗದ ಇರಾನ್​: ಸೌದಿ ನೆಲೆಯಲ್ಲಿ ಕ್ಷಿಪಣಿ ದಾಳಿ; ಅಮೆರಿಕಾದ 5 ಟ್ಯಾಂಕರ್ ವಿಮಾನಗಳಿಗೆ ಹಾನಿ..!

West Asia conflict effect: LPG ಕೊರತೆ ತೀವ್ರ; ಮನೆಗಳಲ್ಲಿ PNG, ಹೋಟೆಲ್ ಗಳು ಕಲ್ಲಿದ್ದಲು ಬಳಕೆ ಮಾಡುವಂತೆ ಕೇಂದ್ರ ಸರ್ಕಾರ ಸಲಹೆ

ಒಡಿಶಾ 'ಕೈ' ಶಾಸಕರಿಗೆ' ಟ್ರಬಲ್ ಶೂಟರ್ ಡಿಕೆಶಿ ಆತಿಥ್ಯ: 'ಆಪರೇಷನ್ ಕಮಲ' ತಡೆಗೆ ಕೈಗೊಂಡ ಮುನ್ನೆಚ್ಚರಿಕಾ ಕ್ರಮ; ಕಾಂಗ್ರೆಸ್ ಸಮರ್ಥನೆ

ಒಂದೇ ಸೂರಿನಡಿ ರಾಮ್-ರಹೀಮ್: ದ್ವೇಷ ಹರಡುವವರ ಮಧ್ಯೆ ಮುಸ್ಲಿಮರಿಗಾಗಿ ‘ಇಫ್ತಾರ್ ಕೂಟ’ ಆಯೋಜಿಸುತ್ತಿರುವ ಹಿಂದೂ ಮಹಿಳೆ..!

Strait of Hormuz: 'ಹೌದು.. ನಮ್ಮ ಆಪ್ತ ರಾಷ್ಟ್ರ'... ಭಾರತದ ನೌಕೆಗಳಿಗೆ ಅನುಮತಿ ಕುರಿತು ಇರಾನ್ ರಾಯಭಾರಿ ಹೇಳಿಕೆ!

SCROLL FOR NEXT