ಭೀಮಗಡ ವನ್ಯಜೀವಿ ಅಭಯಾರಣ್ಯ ವ್ಯಾಪ್ತಿಯ ಶಿರೋಳಿ, ಹೇಮಡ್ಗಾ, ನೇರಸ ಮತ್ತು ಸುತ್ತಮುತ್ತಲಿನ ಗ್ರಾಮಗಳ ನಿವಾಸಿಗಳು ಸೋಮವಾರ ಬೆಳಗಾವಿಯ ಉಪ ಅರಣ್ಯ ಸಂರಕ್ಷಣಾಧಿಕಾರಿ ಹರ್ಷಾ ಬಾನು ಅವರಿಗೆ ಮನವಿ ಸಲ್ಲಿಸಿದರು. 
ರಾಜ್ಯ

ಮರೀಚಿಕೆಯಾದ ಮೂಲಭೂತ ಸೌಕರ್ಯ: ಭೀಮಗಡ ಅಭಯಾರಣ್ಯ ವಾಸಿಗಳಿಂದ ಚುನಾವಣೆ ಬಹಿಷ್ಕಾರ ಎಚ್ಚರಿಕೆ

ಮೂಲಭೂತ ಸೌಕರ್ಯ ದೊರಯದೆ ಬೇಸತ್ತು ಹೋಗಿರುವಭೀಮಗಡ ವನ್ಯಜೀವಿ ಅಭಯಾರಣ್ಯ (ಬಿಡಬ್ಲ್ಯುಎಸ್) ಆವರಣದಲ್ಲಿರುವ ಕುಗ್ರಾಮಗಳ ಗ್ರಾಮಸ್ಥರು, ಬೇಡಿಕೆಗಳ ನಿರ್ಲಕ್ಷಿಸಿದ್ದೇ ಆದರೆ, ಮುಂಬರುವ ವಿಧಾನಸಭಾ ಚುನಾವಣೆಯನ್ನು ಬಹಿಷ್ಕರಿಸುವುದಾಗಿ ಎಚ್ಚರಿಕೆ ನೀಡಿದ್ದಾರೆ.

ಬೆಳಗಾವಿ: ಮೂಲಭೂತ ಸೌಕರ್ಯ ದೊರಯದೆ ಬೇಸತ್ತು ಹೋಗಿರುವಭೀಮಗಡ ವನ್ಯಜೀವಿ ಅಭಯಾರಣ್ಯ (ಬಿಡಬ್ಲ್ಯುಎಸ್) ಆವರಣದಲ್ಲಿರುವ ಕುಗ್ರಾಮಗಳ ಗ್ರಾಮಸ್ಥರು, ಬೇಡಿಕೆಗಳ ನಿರ್ಲಕ್ಷಿಸಿದ್ದೇ ಆದರೆ, ಮುಂಬರುವ ವಿಧಾನಸಭಾ ಚುನಾವಣೆಯನ್ನು ಬಹಿಷ್ಕರಿಸುವುದಾಗಿ ಎಚ್ಚರಿಕೆ ನೀಡಿದ್ದಾರೆ.

ವನ್ಯಜೀವಿ ಅಭಯಾರಣ್ಯ (ಬಿಡಬ್ಲ್ಯುಎಸ್) ಆವರಣದಲ್ಲಿರುವ ಶಿರೋಳಿ, ಹೇಮಡಗಾ, ತಳೇವಾಡಿ ಮತ್ತು ಸುತ್ತಮುತ್ತಲಿನ ಗ್ರಾಮಸ್ಥರು ಬೆಳಗಾವಿಯಲ್ಲಿ ಜಿಲ್ಲಾಡಳಿತ ಮತ್ತು ಅರಣ್ಯ ಇಲಾಖೆಗೆ ಸೋಮವಾರ ಭೇಟಿ ನೀಡಿದ್ದು, ಮನವಿ ಪತ್ರ ಸಲ್ಲಿಸಿದರು.

ಖಾನಾಪುರ ತಾಲೂಕಿನ ಶಿರೋಳಿ ಗ್ರಾಮದಲ್ಲಿ ಇತ್ತೀಚೆಗೆ ಆಯೋಜಿಸಿದ್ದ ಸಭೆಯಲ್ಲಿ ಚುನಾವಣೆ ಬಹಿಷ್ಕರಿಸಿ ಧರಣಿ ನಡೆಸುವ ನಿರ್ಣಯವನ್ನು ಕೈಗೊಳ್ಳಲಾಯಿತು.

ಇದೇ ಗ್ರಾಮಸ್ಥರು 2019ರ ಲೋಕಸಭೆ ಚುನಾವಣೆಯನ್ನೂ ಬಹಿಷ್ಕರಿಸಿದ್ದರು. ಬೇಡಿಕೆಗಳ ಈಡೇರಿಸದ ಹಿನ್ನೆಲೆಯಲ್ಲಿ ಗವಳಿ, ಕೃಷ್ಣಾಪುರ, ಪಾಸ್ತೋಲಿ, ಕೊಂಗಾಲ, ತಳೇವಾಡಿ, ಜೋರ್ಡಾನ್, ಸಾಯಚೆ ಮಾಳ, ಚಾಪೋಲಿ, ಕಾಪೋಲಿ, ಮುದಗೈ, ಚಿರೇಖಣಿ, ಆಮಗಾಂವ ಗ್ರಾಮಗಳ ನಿವಾಸಿಗಳು ಚುನಾವಣೆಯನ್ನು ಬಹಿಷ್ಕರಿಸಿದ್ದರು. ಚುನಾವಣೆಯಲ್ಲಿ ಈ ಗ್ರಾಮಗಳ ಯಾವುದೇ ವ್ಯಕ್ತಿ ಕೂಡ ಮತ ಚಲಾಯಿಸಿರಲಿಲ್ಲ. ಇದೀಗ ಮತ್ತೊಮ್ಮೆ ಬೇಡಿಕೆಯನ್ನು ಮುಂದಿಟ್ಟು, ಚುನಾವಣೆ ಬಹಿಷ್ಕರಿಸುವುದಾಗಿ ಹೇಳಿದ್ದಾರೆ.  

ಬಿಡಬ್ಲ್ಯೂಎಸ್‌ನಲ್ಲಿರುವ ಹೇಮಡ್ಗಾ ಗ್ರಾಮದ ನಿವಾಸಿ ವಿಜಯ್ ಮಾದರ್ ಎಂಬುವವರು ಮಾತನಾಡಿ, ಈ ಗ್ರಾಮಗಳಿಗೆ ಸರಿಯಾದ ರಸ್ತೆಗಳಿಲ್ಲ, ಹೀಗಾಗಿಯೇ ಸಾರ್ವಜನಿಕ ಸಾರಿಗೆ ವ್ಯವಸ್ಥೆ ಇಲ್ಲದಂತಾಗಿದೆ. ಮಳೆಗಾಲದಲ್ಲಿ ನದಿ, ತೊರೆಗಳಲ್ಲಿ ಪ್ರವಾಹ ಉಂಟಾಗಿ ಕಾಡಂಚಿನ ಹಲವಾರು ಗ್ರಾಮಗಳು ಸಂಪರ್ಕ ಕಡಿತಗೊಳ್ಳುತ್ತವೆ ಎಂದು ಬೇಸರ ವ್ಯಕ್ತಪಡಿಸಿದರು.

ಸೇತುವೆಗಳನ್ನು ನಿರ್ಮಿಸಲು ಯೋಜನೆಗಳನ್ನು ಮಂಜೂರು ಮಾಡಿದ್ದರೂ, ಅರಣ್ಯಗಳಲ್ಲಿ ನಿರ್ಮಾಣಕ್ಕೆ ಸಂಬಂಧಿಸಿದಂತೆ ಅನುಮತಿ ನೀಡಲಾಗುತ್ತಿಲ್ಲ ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನಮ್ಮಲ್ಲೂ ಅಸ್ತ್ರಗಳಿವೆ, ದಾಳಿಗೆ ಸಂಪೂರ್ಣ ಸಿದ್ಧ: ಅಮೆರಿಕಾ ಆರ್ಥಿಕ ದಿಗ್ಬಂಧನಕ್ಕೆ ಇರಾನ್‌ ಪ್ರತಿರೋಧ, ಭಾರೀ ಪ್ರತೀಕಾರದ ಎಚ್ಚರಿಕೆ

‘Iran ನನ್ನ ಪುತ್ರನನ್ನು ಹತ್ಯೆ ಮಾಡಲು ಯತ್ನಿಸಿತ್ತು’: ಟೆಹ್ರಾನ್‌ ವಿರುದ್ಧ ನೆತನ್ಯಾಹು ಗಂಭೀರ ಆರೋಪ

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ