ಕೊಪ್ಪಳ ವಿವಿ ಕುಲಪತಿ ಡಾ.ಬಿ.ಕೆ. ರವಿ 
ರಾಜ್ಯ

ರಾಜ್ಯದ ನೂತನ 7 ವಿಶ್ವವಿದ್ಯಾನಿಲಯಗಳಿಗೆ ಕುಲಪತಿಗಳನ್ನು ನೇಮಿಸಿ ಸರ್ಕಾರ ಆದೇಶ

ರಾಜ್ಯದ ನೂತನ 7 ವಿಶ್ವವಿದ್ಯಾನಿಲಯಗಳಿಗೆ ಕುಲಪತಿಗಳನ್ನು ನೇಮಿಸಿ ರಾಜ್ಯ  ಸರ್ಕಾರ ಆದೇಶಿಸಿದೆ. ರಾಜ್ಯ ಸರ್ಕಾರ ನೂತನವಾಗಿ ಸ್ಥಾಪಿಸಿರುವ ಚಾಮರಾಜನಗರ, ಬೀದರ್, ಹಾವೇರಿ, ಹಾಸನ, ಕೊಡಗು, ಕೊಪ್ಪಳ ಮತ್ತು ಬಾಗಲಕೋಟೆ ವಿಶ್ವವಿದ್ಯಾಲಯಗಳಿಗೆ ಚೊಚ್ಚಲ ಕುಲಪತಿಗಳನ್ನು ನೇಮಿಸಿ, ಸೋಮವಾರ ಆದೇಶ ಹೊರಡಿಸಿದೆ.

ಬೆಂಗಳೂರು: ರಾಜ್ಯದ ನೂತನ 7 ವಿಶ್ವವಿದ್ಯಾನಿಲಯಗಳಿಗೆ ಕುಲಪತಿಗಳನ್ನು ನೇಮಿಸಿ ರಾಜ್ಯ  ಸರ್ಕಾರ ಆದೇಶಿಸಿದೆ. ರಾಜ್ಯ ಸರ್ಕಾರ ನೂತನವಾಗಿ ಸ್ಥಾಪಿಸಿರುವ ಚಾಮರಾಜನಗರ, ಬೀದರ್, ಹಾವೇರಿ, ಹಾಸನ, ಕೊಡಗು, ಕೊಪ್ಪಳ ಮತ್ತು ಬಾಗಲಕೋಟೆ ವಿಶ್ವವಿದ್ಯಾಲಯಗಳಿಗೆ ಚೊಚ್ಚಲ ಕುಲಪತಿಗಳನ್ನು ನೇಮಿಸಿ, ಸೋಮವಾರ ಆದೇಶ ಹೊರಡಿಸಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ ಎನ್ ಅಶ್ವತ್ಥನಾರಾಯಣ ತಿಳಿಸಿದ್ದಾರೆ.

ಬೆಂಗಳೂರು ವಿಶ್ವವಿದ್ಯಾನಿಲಯದ ಪತ್ರಿಕೋದ್ಯಮ ವಿಭಾಗದ ಪ್ರೊಫೆಸರ್  ಡಾ.ಬಿ ಕೆ ರವಿ ಅವರನ್ನು ಕೊಪ್ಪಳ ವಿಶ್ವವಿದ್ಯಾನಿಲಯದ ಕುಲಪತಿಯನ್ನಾಗಿ ನೇಮಿಸಲಾಗಿದೆ.  ಬಾಗಲಕೋಟೆಯ ತೋಟಗಾರಿಕೆ ವಿ.ವಿಯ ಡಾ.ಅಶೋಕ ಸಂಗಪ್ಪ ಆಲೂರು ಅವರನ್ನು ಕೊಡಗು ವಿಶ್ವವಿದ್ಯಾನಿಲಯದ ಕುಲಪತಿಯನ್ನಾಗಿ,  ಮೈಸೂರು ವಿಶ್ವವಿದ್ಯಾನಿಲಯದ ಮಾನವಶಾಸ್ತ್ರ ವಿಭಾಗದ ಡಾ.ಎಂ ಆರ್ ಗಂಗಾಧರ ಅವರನ್ನು ಚಾಮರಾಜನಗರ ವಿಶ್ವವಿದ್ಯಾನಿಲಯದ ಕುಲಪತಿಯನ್ನಾಗಿ ನೇಮಕ ಮಾಡಲಾಗಿದೆ.

ಬೆಳಗಾವಿಯ ಕೆ.ಎಸ್‌.ಗೋಗಟೆ ಎಂಜಿನಿಯರಿಂಗ್ ಕಾಲೇಜಿನ ಪ್ರಾಂಶುಪಾಲರಾದ ಡಾ.ಆನಂದ್‌ ಶರದ್‌ ದೇಶಪಾಂಡೆ ಅವರನ್ನು ಬಾಗಲಕೋಟೆ ವಿವಿ ಕುಲಪತಿಯನ್ನಾಗಿ, ಕುವೆಂಪು ವಿಶ್ವವಿದ್ಯಾಲಯದ ಡಾ.ಬಿ ಎಸ್‌ ಬಿರಾದಾರ್ ಅವರನ್ನು ಬೀದರ್‍‌ ವಿವಿ ಕುಲಪತಿಯನ್ನಾಗಿ ನೇಮಿಸಲಾಗಿದೆ.

ಬಾಗಲಕೋಟೆಯ ಬಸವೇಶ್ವರ ಎಂಜಿನಿಯರಿಂಗ್ ಕಾಲೇಜಿನ ಎಲೆಕ್ಟ್ರಿಕಲ್ ಮತ್ತು ಎಲೆಕ್ಟ್ರಾನಿಕ್ಸ್‌ ವಿಭಾಗದ ಡಾ.ಸುರೇಶ್‌ ಎಚ್‌ ಜಂಗಮಶೆಟ್ಟಿ ಅವರನ್ನು ಹಾವೇರಿ ವಿವಿ ಮತ್ತು ಧಾರವಾಡದ ಕರ್ನಾಟಕ ವಿವಿನಿವೃತ್ತ ಪ್ರೊಫೆಸರ್ ಡಾ.ಟಿ ಸಿ ತಾರಾನಾಥ್‌ ಅವರನ್ನು ಹಾಸನ ವಿಶ್ವವಿದ್ಯಾಲಯದ ಕುಲಪತಿಗಳಾಗಿ ನೇಮಿಸಲಾಗಿದೆ ಎಂದು ಪ್ರಕಟಣೆಯಲ್ಲಿ ಹೇಳಿದ್ದಾರೆ. ಸರ್ಕಾರ ಜಿಲ್ಲೆಗೆ ಒಂದಾದರೂ ವಿಶ್ವವಿದ್ಯಾಲಯ ಇರಬೇಕು ಎನ್ನುವ ತತ್ತ್ವದಡಿಯಲ್ಲಿ ಈ ವಿಶ್ವವಿದ್ಯಾಲಯಗಳನ್ನು ಸ್ಥಾಪಿಸಿರುವುದನ್ನು ಇಲ್ಲಿ ಸ್ಮರಿಸಬಹುದಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ವೆನೆಜುವೆಲಾ ಪರಿಸ್ಥಿತಿ ನಿಮಗೂ ಬರಬಹುದು.. ತಡ ಮಾಡದೇ ನಮ್ ಜೊತೆ ಒಪ್ಪಂದ ಮಾಡ್ಕೊಳ್ಳಿ': ಕ್ಯೂಬಾಗೂ Donald Trump ಎಚ್ಚರಿಕೆ!

ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ತ್ರಿಪುರದಲ್ಲಿ ಎರಡು ಸಮುದಾಯಗಳ ನಡುವೆ ಘರ್ಷಣೆ: ಉನಕೋಟಿಯಲ್ಲಿ ಮಸೀದಿ-ಮುಸ್ಲಿಂ ಅಂಗಡಿಗಳಿಗೆ ಬೆಂಕಿ

ಒಂದು ವಾರದ ಚಿಕಿತ್ಸೆ ಬಳಿಕ ಆಸ್ಪತ್ರೆಯಿಂದ ಸೋನಿಯಾ ಗಾಂಧಿ ಡಿಸ್ಚಾರ್ಜ್!

Tubelight in his head: ಹಿಮಂತಾ ಬಿಸ್ವಾ ಶರ್ಮಾ ವಿರುದ್ಧ AIMIM ಮುಖ್ಯಸ್ಥ ಓವೈಸಿ ಕಿಡಿ! ಏನಿದು ವಿವಾದ?

SCROLL FOR NEXT