ಸಂಗ್ರಹ ಚಿತ್ರ 
ರಾಜ್ಯ

ಮಾ. 29ರಿಂದ ಏ.8ರವರೆಗೆ ಐತಿಹಾಸಿಕ ಬೆಂಗಳೂರು ಕರಗ ಮಹೋತ್ಸವ

11 ದಿನಗಳ ವಾರ್ಷಿಕ ಬೆಂಗಳೂರು ಕರಗ ಉತ್ಸವವು ಮಾರ್ಚ್ 29 ರಂದು ಪ್ರಾರಂಭವಾಗಲಿದ್ದು, ಏಪ್ರಿಲ್8ರವರೆಗೂ ನಡೆಯಲಿದೆ ಎಂದು ಬಿಬಿಎಂಪಿ ಅಧಿಕಾರಿಗಳು ಮಂಗಳವಾರ ಮಾಹಿತಿ ನೀಡಿದ್ದಾರೆ.

ಬೆಂಗಳೂರು: 11 ದಿನಗಳ ವಾರ್ಷಿಕ ಬೆಂಗಳೂರು ಕರಗ ಉತ್ಸವವು ಮಾರ್ಚ್ 29 ರಂದು ಪ್ರಾರಂಭವಾಗಲಿದ್ದು, ಏಪ್ರಿಲ್8ರವರೆಗೂ ನಡೆಯಲಿದೆ ಎಂದು ಬಿಬಿಎಂಪಿ ಅಧಿಕಾರಿಗಳು ಮಂಗಳವಾರ ಮಾಹಿತಿ ನೀಡಿದ್ದಾರೆ.

ಈ ವರ್ಷದ ಕರಗ ಉತ್ಸವಕ್ಕೆ 75 ಲಕ್ಷ ರೂ.ಗೆ ಮಂಜೂರಾತಿ ಮಾಡುವುದಾಗಿ ಹಾಗೂ ರೂ.40 ಲಕ್ಷ ಮುಂಗಡ ಹಣ ಬಿಡುಗಡೆ ಮಾಡುವುದಾಗಿ ಬಿಬಿಎಂಪಿ ಅಧಿಕಾರಿಗಳು ತಿಳಿಸಿದ್ದಾರೆ.

ಪಾಲಿಕೆ ಕೇಂದ್ರ ಕಚೇರಿಯಲ್ಲಿ ಮಂಗಳವಾರ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್‌ ಗಿರಿನಾಥ್‌ ಆಯೋಜಿಸಿದ್ದ ಪೂರ್ವಸಿದ್ಧತಾ ಸಭೆಯಲ್ಲಿ ಧರ್ಮರಾಯಸ್ವಾಮಿ ದೇವಸ್ಥಾನ ಟ್ರಸ್ಟ್‌ ಅಧ್ಯಕ್ಷ ಕೆ.ಸತೀಶ್‌, ಶಾಸಕ ಉದಯ್‌ ಗರುಡಾಚಾರ್‌ ಪಾಲ್ಗೊಂಡು ಕಾರ್ಯಕ್ರಮದ ವೇಳಾಪಟ್ಟಿಯೊಂದಿಗೆ ಬೆಂಗಳೂರು ಕರಗ ಪೋಸ್ಟರ್‌ ಬಿಡುಗಡೆ ಮಾಡಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ತುಷಾರ್‌ ಗಿರಿನಾಥ್ ಅವರು, ಮಾ.29ರಿಂದ ರಥೋತ್ಸವ ಧ್ವಜಾರೋಹಣ ಮಾಡುವ ಮೂಲಕ ಕರಗ ಉತ್ಸವ ಆರಂಭವಾಗಲಿದೆ. ಏಪ್ರಿಲ್ 6ರಂದು ರಾತ್ರಿ ಮುಖ್ಯ ಕರಗ ನಡೆಯಲಿದೆ. ಬೇಸಿಗೆಯಲ್ಲಿ ಹಬ್ಬ ಇರುವುದರಿಂದ ಈ ಬಾರಿ ಎಲ್ಲ ಭಕ್ತರಿಗೆ ಹಣ್ಣು ಹಂಪಲು ವಿತರಿಸಲು ಬಿಬಿಎಂಪಿಗೆ ಹಣ ಮಂಜೂರು ಮಾಡುವಂತೆ ಧರ್ಮರಾಯಸ್ವಾಮಿ ದೇವಸ್ಥಾನ ಟ್ರಸ್ಟ್ ವತಿಯಿಂದ ಮನವಿ ಮಾಡಿಕೊಳ್ಳಲಾಗಿದೆ ಎಂದರು.

ಹೆಚ್ಚುವರಿ ಹಣದಲ್ಲಿ ಕರಗ ವೀಕ್ಷಿಸಲು ಬರುವ ಸುಮಾರು 5 ಸಾವಿರ ವೀರಕುಮಾರ, ವಣಿಕುಲ ಕ್ಷತ್ರಿಯ ಸಮುದಾಯ ಹಾಗೂ ಸಾರ್ವಜನಿಕರಿಗೆ ಹಣ್ಣು ಹಂಪಲು ನೀಡುತ್ತೇವೆ. ಚುನಾವಣಾ ನೀತಿ ಸಂಹಿತೆ ಜಾರಿಯಾಗುವುದರಿಂದ ಉತ್ಸವದ ಸಂದರ್ಭದಲ್ಲಿ ಯಾವುದೇ ರಾಜಕೀಯ ಬ್ಯಾನರ್‌ಗಳನ್ನು ಹಾಕಲಾಗುವುದಿಲ್ಲ ಎಂದು ಧರ್ಮರಾಯಸ್ವಾಮಿ ದೇವಸ್ಥಾನ ಟ್ರಸ್ಟ್‌ ಅಧ್ಯಕ್ಷ ಕೆ.ಸತೀಶ್‌ ಅವರು ಹೇಳಿದ್ದಾರೆ.

ಕರಗ ಉತ್ಸವ ನಡೆಯುವುದರೊಳಗೆ ಚುನಾವಣಾ ನೀತಿ ಸಂಹಿತೆ ಜಾರಿಯಾದರೂ ಬೆಂಗಳೂರು ಕರಗಕ್ಕೆ ಯಾವುದೇ ಸಮಸ್ಯೆಗಳಾಗುವುದಿಲ್ಲ. ಕರಗ ಉತ್ಸವ ಶಾಂತಿಯುತವಾಗಿ ನಡೆಯಲಿದ್ದು, ಕರಗವು ಕಾಟನ್‌ಪೇಟೆಯ ಹಜರತ್‌ ತವಕ್ಕಲ್‌ ಮಸ್ತಾನ್‌ ಸಾಹೇಬ್‌ ದರ್ಗಾದಲ್ಲಿ ಮುಂಜಾನೆ ಸ್ವಲ್ಪ ಕಾಲ ನಿಲ್ಲಲಿದೆ ಎಂದು ಗರುಡಾಚಾರ್‌ ತಿಳಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT