ರೌಡಿ ಶೀಟರ್ ಕೊಲೆಗೆ ಯತ್ನ 
ರಾಜ್ಯ

ಸಚಿವೆ ಶಶಿಕಲಾ ಜೊಲ್ಲೆ ನಿವಾಸದ ಎದುರು ರೌಡಿ ಶೀಟರ್ ಕೊಲೆಗೆ ಸ್ನೇಹಿತರ ಯತ್ನ

ಸಚಿವೆ ಶಶಿಕಲಾ ಜೊಲ್ಲೆ ಮನೆಯ ಮುಂದೆ ಕೊಲೆಯ ಯತ್ನ ನಡೆದಿದೆ. ಕಿಡಿಗೇಡಿಗಳು ತಮ್ಮ ಸ್ನೇಹಿನ ಮೇಲೆಯೇ ಕಾರು ಹತ್ತಿಸಿ ಕೊಲೆಗೆ ಯತ್ನಿಸಿದ್ದಾರೆ. ಮೂರ್ನಾಲ್ಕು ಬಾರಿ ಕಾರು ಹತ್ತಿಸಿ ವಿಕೃತಿ ಮೆರೆದಿರುವ ಭಯಾನಕ ಘಟನೆ ನಡೆದಿದೆ. ಸದ್ಯ ಗಾಯಾಳು ರೌಡಿಶೀಟರ್​ನನ್ನು ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ಕೊಡಿಸಲಾಗುತ್ತಿದ್ದು ಸಾವು ಬದುಕಿನ ನಡುವೆ ಹೋರಾಡುತ್ತಿದ್ದಾರೆ. 

ಬೆಂಗಳೂರು: ಸಚಿವೆ ಶಶಿಕಲಾ ಜೊಲ್ಲೆ ಮನೆಯ ಮುಂದೆ ಕೊಲೆಯ ಯತ್ನ ನಡೆದಿದೆ. ಕಿಡಿಗೇಡಿಗಳು ತಮ್ಮ ಸ್ನೇಹಿನ ಮೇಲೆಯೇ ಕಾರು ಹತ್ತಿಸಿ ಕೊಲೆಗೆ ಯತ್ನಿಸಿದ್ದಾರೆ. ಮೂರ್ನಾಲ್ಕು ಬಾರಿ ಕಾರು ಹತ್ತಿಸಿ ವಿಕೃತಿ ಮೆರೆದಿರುವ ಭಯಾನಕ ಘಟನೆ ನಡೆದಿದೆ. ಸದ್ಯ ಗಾಯಾಳು ರೌಡಿಶೀಟರ್​ನನ್ನು ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ಕೊಡಿಸಲಾಗುತ್ತಿದ್ದು ಸಾವು ಬದುಕಿನ ನಡುವೆ ಹೋರಾಡುತ್ತಿದ್ದಾರೆ. 

ನಿನ್ನೆ ಮಂಗಳವಾರ ಮುಂಜಾನೆ 5.30 ರಿಂದ 6 ಗಂಟೆಯ ನಡುವೆ ನಗರದಲ್ಲಿ ಈ ಘಟನೆ ನಡೆದಿದೆ. ಹೌಗ್ರೌಂಡ್ ಠಾಣೆಯಲ್ಲಿ ರೌಡಿಶೀಟರ್ ಆಗಿರುವ ಗಗನ್ ಶರ್ಮಾ ಎಂಬಾತನ ಮೇಲೆ ಸುನೀಲ್ ಕುಮಾರ್, ಅರುಣ್, ಕೃಷ್ಣ ಕೃತ್ಯ ಎಸಗಿ ವಿಕೃತಿ ಮೆರೆದಿದ್ದಾರೆ.

ರೌಡಿಶೀಟರ್ ಗಗನ್ ಮತ್ತು ಉಳಿದ ಆರೋಪಿಗಳೆಲ್ಲರೂ ಸ್ನೇಹಿತರು. ಬಿಬಿಎಂಪಿ ಟ್ಯಾಕ್ಸ್ ಕಲೆಕ್ಟರ್ ಆಗಿರುವ ಸುನೀಲ್ ಕುಮಾರ್ ಹಾಗೂ ಗಗನ್ ನಡುವೆ ಆಸ್ತಿ ವಿಚಾರಕ್ಕಾಗಿ ಮನಸ್ತಾಪವಾಗಿತ್ತು. ಹೀಗಾಗಿ ಸುನೀತ್ ಮಾತನಾಡಬೇಕು ಎಂದು ಮೊನ್ನೆ ಮಾರ್ಚ್ 20 ರಂದು ರಾತ್ರಿ 10 ಗಂಟೆಗೆ ಗಗನ್​ಗೆ ಕಾಲ್ ಮಾಡಿ ಫ್ರೇಜರ್ ಟೌನ್​ಗೆ ಕರೆಸಿಕೊಂಡಿದ್ದ. ಬಳಿಕ ಅಲ್ಲಿಂದ ಕಾರಿನಲ್ಲಿ ಕೂರಿಸಿಕೊಂಡು ಸಿಟಿ ರೌಂಡ್ಸ್ ಹೊಡೆದು ಮಾರ್ಚ್ 21 ರ ಬೆಳಗ್ಗೆ ಜಯಮಹಲ್ ರಸ್ತೆ ಬಳಿ ಬಂದು ಕಾರು ನಿಲ್ಲಿಸಿದ್ದ. 

ಈ ವೇಳೆ ಗಲಾಟೆ ನಡೆದಿದೆ. ಸುನೀಲ್ ಸೇರಿ ಮೂವರು ಗಗನ್ ಮೇಲೆ ಹಲ್ಲೆ ನಡೆಸಿದ್ದಾರೆ. ಪೊಲೀಸರು ಗಾಯಾಳು ಗಗನ್​ನನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದಾರೆ. ಘಟನೆ ಸಂಬಂಧ ಜೆಸಿ ನಗರ ಠಾಣೆಯಲ್ಲಿ ಕೊಲೆಯತ್ನ ಪ್ರಕರಣ ದಾಖಲಾಗಿದ್ದು ಆರೋಪಿ ಸುನೀಲ್​ನನ್ನು ಪೊಲೀಸರು ಬಂಧಿಸಿದ್ದಾರೆ. ಉಳಿದ ಇಬ್ಬರಿಗಾಗಿ ಶೋಧ ನಡೆಯುತ್ತಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT