ಸಾಂದರ್ಭಿಕ ಚಿತ್ರ 
ರಾಜ್ಯ

ದೀರ್ಘದಂಡ ನಮಸ್ಕಾರ ಮಾಡುತ್ತಿದ್ದ ಯುವತಿ ಮೇಲೆ ಕಾರು ಹರಿದು ಸಾವು

ಜಾತ್ರೆ ನಿಮಿತ್ತ ದೇವರಿಗೆ ದೀರ್ಘದಂಡ ನಮಸ್ಕಾರ ಮಾಡುತ್ತಿದ್ದ ಯುವತಿ ಮೇಲೆ ಕಾರು ಹರಿದ ಪರಿಣಾಮ ಆಕೆ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಗುರುವಾರ ಬೆಳಗಾವಿಯಲ್ಲಿ ನಡೆದಿದೆ.

ಬೆಳಗಾವಿ: ಜಾತ್ರೆ ನಿಮಿತ್ತ ದೇವರಿಗೆ ದೀರ್ಘದಂಡ ನಮಸ್ಕಾರ ಮಾಡುತ್ತಿದ್ದ ಯುವತಿ ಮೇಲೆ ಕಾರು ಹರಿದ ಪರಿಣಾಮ ಆಕೆ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಗುರುವಾರ ಬೆಳಗಾವಿಯಲ್ಲಿ ನಡೆದಿದೆ.

ಬೆಳಗಾವಿ ಜಿಲ್ಲೆ ಅಥಣಿ ತಾಲೂಕಿನ ತೀರ್ಥ ಗ್ರಾಮದಲ್ಲಿ ಜಾತ್ರಾ ಸಂದರ್ಭದಲ್ಲಿ ಈ ಅಹಿತಕರ ಘಟನೆ ಆಕಸ್ಮಿಕವಾಗಿ ನಡೆದಿದ್ದು, ಮೃತ ಯುವತಿಯನ್ನು 22 ವರ್ಷ ವಯಸ್ಸಿನ ಐಶ್ವರ್ಯಾ ನಾಯ್ಕ್ ಎಂದು ಗುರುತಿಸಲಾಗಿದೆ.

ಮೃತ ಐಶ್ವರ್ಯಾ ಎಂಬ ಯುವತಿ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ತನ್ನ ತೀರ್ಥ ಗ್ರಾಮದ ಕೃಷ್ಣಾ ನದಿಯಿಂದ ದೇವಸ್ಥಾನದವರೆಗೆ ದೀರ್ಘ ನಮಸ್ಕಾರ ಹಾಕುವ ಹರಕೆ ತೀರಿಸುವಾಗ ಕಾರು ಆಕೆಯ ಮೇಲೆ ಹರಿದು ಯುವತಿ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಅಪಘಾತದಲ್ಲಿ ಯುವತಿಯ ತಲೆಗೆ ಗಂಭೀರವಾಗಿ ಗಾಯವಾಗಿ ತೀವ್ರ ರಕ್ತಸ್ರಾವವಾಗಿ ಆಕೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. 

ಯುವತಿಯು ಮೂಲತಃ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ನಿವಾಸಿಯಾಗಿದ್ದು,ಈ ಅಪಘಾತದ ವಿಚಾರವಾಗಿ ಅಥಣಿ ಪೋಲಿಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೋಲಿಸರು ಸ್ಥಳಕ್ಕೆ ಬಂದು ಕಾರು ಚಾಲಕನನ್ನು ಬಂಧಿಸಿದ್ದಾರೆ.
 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಪಶ್ಚಿಮ ಏಷ್ಯಾದ ಉದ್ವಿಗ್ನತೆ ನಡುವೆ ಮೋದಿ- ಪೆಜೆಶ್ಕಿಯನ್ ಮಾತುಕತೆ: ದೀರ್ಘಕಾಲೀನ, ಪರಸ್ಪರ ಲಾಭದಾಯಕ ಕಾರ್ಯತಂತ್ರಕ್ಕೆ ಒತ್ತು

ಲೋಕೋಪಯೋಗಿ ಇಲಾಖೆಯಲ್ಲಿ 'ಲಂಚ'; ವಿದೇಶಿ ಷೇರು ಹೂಡಿಕೆ ಇತ್ಯಾದಿ; ಸತೀಶ್ ಜಾರಕಿಹೊಳಿ ಮನೆಯಲ್ಲಿ ಸಿಕ್ಕಿದ್ದೇನು? EDಯಿಂದ ಅಧಿಕೃತ ಹೇಳಿಕೆ

ಬದರಿನಾಥದ 'ತಪ್ತ ಕುಂಡ'ದಲ್ಲಿ 108 ಬಾರಿ ಧಾರ್ಮಿಕ ಸ್ನಾನ: ರಾಜಸ್ಥಾನದ ಇಬ್ಬರು ವೃದ್ಧೆಯರು ಸಾವು!

BRICS 2026: ಪುಟಿನ್-ಮೋದಿ ಮಾತುಕತೆ: ಕಪ್ಪು ಸಮುದ್ರದಲ್ಲಿ ಭಾರತೀಯರ ಸುರಕ್ಷತೆಯ ವಿಷಯ ಪ್ರಸ್ತಾಪ ರಷ್ಯಾ ಅಧ್ಯಕ್ಷ ಹೇಳಿದ್ದೇನು?

ಬ್ರಿಕ್ಸ್ ಶೃಂಗಸಭೆ: ಭಾರಿ ಭದ್ರತೆ, ಐಷಾರಾಮಿ ವಿಮಾನದಲ್ಲಿ ನವದೆಹಲಿಗೆ ಆಗಮಿಸಿದ ಪುಟಿನ್! "ಡೂಮ್ಸ್ ಡೇ' ವಿಶೇಷತೆ ಏನು ಗೊತ್ತಾ? Video