ಸಾಂದರ್ಭಿಕ ಚಿತ್ರ 
ರಾಜ್ಯ

ದೀರ್ಘದಂಡ ನಮಸ್ಕಾರ ಮಾಡುತ್ತಿದ್ದ ಯುವತಿ ಮೇಲೆ ಕಾರು ಹರಿದು ಸಾವು

ಜಾತ್ರೆ ನಿಮಿತ್ತ ದೇವರಿಗೆ ದೀರ್ಘದಂಡ ನಮಸ್ಕಾರ ಮಾಡುತ್ತಿದ್ದ ಯುವತಿ ಮೇಲೆ ಕಾರು ಹರಿದ ಪರಿಣಾಮ ಆಕೆ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಗುರುವಾರ ಬೆಳಗಾವಿಯಲ್ಲಿ ನಡೆದಿದೆ.

ಬೆಳಗಾವಿ: ಜಾತ್ರೆ ನಿಮಿತ್ತ ದೇವರಿಗೆ ದೀರ್ಘದಂಡ ನಮಸ್ಕಾರ ಮಾಡುತ್ತಿದ್ದ ಯುವತಿ ಮೇಲೆ ಕಾರು ಹರಿದ ಪರಿಣಾಮ ಆಕೆ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಗುರುವಾರ ಬೆಳಗಾವಿಯಲ್ಲಿ ನಡೆದಿದೆ.

ಬೆಳಗಾವಿ ಜಿಲ್ಲೆ ಅಥಣಿ ತಾಲೂಕಿನ ತೀರ್ಥ ಗ್ರಾಮದಲ್ಲಿ ಜಾತ್ರಾ ಸಂದರ್ಭದಲ್ಲಿ ಈ ಅಹಿತಕರ ಘಟನೆ ಆಕಸ್ಮಿಕವಾಗಿ ನಡೆದಿದ್ದು, ಮೃತ ಯುವತಿಯನ್ನು 22 ವರ್ಷ ವಯಸ್ಸಿನ ಐಶ್ವರ್ಯಾ ನಾಯ್ಕ್ ಎಂದು ಗುರುತಿಸಲಾಗಿದೆ.

ಮೃತ ಐಶ್ವರ್ಯಾ ಎಂಬ ಯುವತಿ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ತನ್ನ ತೀರ್ಥ ಗ್ರಾಮದ ಕೃಷ್ಣಾ ನದಿಯಿಂದ ದೇವಸ್ಥಾನದವರೆಗೆ ದೀರ್ಘ ನಮಸ್ಕಾರ ಹಾಕುವ ಹರಕೆ ತೀರಿಸುವಾಗ ಕಾರು ಆಕೆಯ ಮೇಲೆ ಹರಿದು ಯುವತಿ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಅಪಘಾತದಲ್ಲಿ ಯುವತಿಯ ತಲೆಗೆ ಗಂಭೀರವಾಗಿ ಗಾಯವಾಗಿ ತೀವ್ರ ರಕ್ತಸ್ರಾವವಾಗಿ ಆಕೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. 

ಯುವತಿಯು ಮೂಲತಃ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ನಿವಾಸಿಯಾಗಿದ್ದು,ಈ ಅಪಘಾತದ ವಿಚಾರವಾಗಿ ಅಥಣಿ ಪೋಲಿಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೋಲಿಸರು ಸ್ಥಳಕ್ಕೆ ಬಂದು ಕಾರು ಚಾಲಕನನ್ನು ಬಂಧಿಸಿದ್ದಾರೆ.
 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT