ವಚನಾನಂದ ಸ್ವಾಮೀಜಿ 
ರಾಜ್ಯ

ನಾಳೆ ಪಂಚಮಸಾಲಿ ಸಮುದಾಯಕ್ಕೆ ರಾಜ್ಯ ಸರ್ಕಾರದಿಂದ ಅತ್ಯುತ್ತಮ ಕೊಡುಗೆ: ವಚನಾನಂದ ಸ್ವಾಮೀಜಿ ವಿಶ್ವಾಸ

ಹರಿಹರ ಪಂಚಮಸಾಲಿ ಪೀಠದ ಸತತ ಹೋರಾಟದ ಫಲವಾಗಿ ನಾಳೆ ಪಂಚಮಸಾಲಿ ಸಮುದಾಯಕ್ಕೆ ರಾಜ್ಯ ಸರಕಾರದಿಂದ ಅತ್ಯುತ್ತಮ ಕೊಡುಗೆ ಘೋಷಣೆಯಾಗುವ ವಿಶ್ವಾಸವಿದೆ ಎಂದು ಹರಿಹರ ವೀರಶೈವ ಲಿಂಗಾಯತ ಪಂಚಮಸಾಲಿ ಪೀಠದ ಪೀಠಾಧ್ಯಕ್ಷರಾದ ವಚನಾನಂದ ಸ್ವಾಮೀಜಿ ಹೇಳಿದ್ದಾರೆ. 

ಬೆಂಗಳೂರು: ಹರಿಹರ ಪಂಚಮಸಾಲಿ ಪೀಠದ ಸತತ ಹೋರಾಟದ ಫಲವಾಗಿ ನಾಳೆ ಪಂಚಮಸಾಲಿ ಸಮುದಾಯಕ್ಕೆ ರಾಜ್ಯ ಸರಕಾರದಿಂದ ಅತ್ಯುತ್ತಮ ಕೊಡುಗೆ ಘೋಷಣೆಯಾಗುವ ವಿಶ್ವಾಸವಿದೆ ಎಂದು ಹರಿಹರ ವೀರಶೈವ ಲಿಂಗಾಯತ ಪಂಚಮಸಾಲಿ ಪೀಠದ ಪೀಠಾಧ್ಯಕ್ಷರಾದ ವಚನಾನಂದ ಸ್ವಾಮೀಜಿ ಹೇಳಿದ್ದಾರೆ. 

ಬೆಂಗಳೂರಿನಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದ ಪ್ರಮುಖ ಸಮುದಾಯಗಳಲ್ಲಿ ಒಂದಾಗಿರುವ ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿ ನೀಡಬೇಕು ಎನ್ನುವುದರ ಹೋರಾಟದ ಹಿಂದೆ 3 ದಶಕಗಳ ಇತಿಹಾಸವಿದೆ. ಹಂತಹಂತಗಳಲ್ಲಿ ನಡೆಸಿದ ಹೋರಾಟ ಅಂತಿಮ ಹಂತಕ್ಕೆ ಬಂದಿದೆ ಎಂದರು.

2 ಡಿ ಹಾಗೂ 2 ಸಿ ಮೀಸಲಾತಿಯನ್ನು ಘೋಷಣೆ ಮಾಡಿದ್ದನ್ನ ನಾವು ಸ್ವಾಗತಿಸುವುದಾಗಲಿ ಅಥವಾ ತಿರಸ್ಕರಿಸುವುದಾಗಲಿ ಮಾಡಿರಲಿಲ್ಲ. ಈ ಘೋಷಣೆಯಲ್ಲಿ ಸ್ಪಷ್ಟತೆಯ ಅಗತ್ಯತೆಯನ್ನು ಒತ್ತಿ ಹೇಳಿದ್ದೇವು. ಈ ಹಿನ್ನಲೆಯಲ್ಲಿ ರಾಜ್ಯ ಸರಕಾರ ಹಿಂದುಳಿದ ಆಯೋಗದ ಮಧ್ಯಂತರ ಮಧ್ಯಂತರ ವರದಿಯನ್ನು ಸಮಗ್ರವಾಗಿ ಪರಿಶೀಲಿಸಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ ಕೈಗೊಳ್ಳುವ ಭರವಸೆ ನೀಡಿದ್ದಾರೆ ಎಂದರು. 

ಪ್ರವರ್ಗ ಯಾವುದಾರೂ ಇರಲಿ ಆದರೆ ನಮ್ಮ ಸಮುದಾಯಕ್ಕೆ ಮೀಸಲಾತಿ ದೊರೆಯುವುದು ಬಹಳ ಅಗತ್ಯ. ಅದಕ್ಕೆ ಬೇಕಾದಂತಹ ಪೂರಕ ವಾತಾವರಣ ಈಗ ಸಿದ್ದವಾಗಿದೆ. ಆಯೋಗದ ಮಧ್ಯಂತರ ವರದಿ ಹಾಗೂ ಇಂದಿನ ಹೈಕೋರ್ಟ್‌ನಲ್ಲಿನ ಪಿಐಎಲ್‌ ಕುರಿತ ತೀರ್ಪು ಬಹುದೊಡ್ಡ ಬೆಳವಣಿಗೆಗಳಾಗಿವೆ ಎಂದು ಅವರು ಹೇಳಿದರು.

ಪಂಚಮಸಾಲಿ ಮೀಸಲಾತಿ ಹೋರಾಟದ ಕಾನೂನಾತ್ಮಕ ಹೋರಾಟದ ಮುಂಚೂಣಿಯಲ್ಲಿರುವ ವಕೀಲರಾದ ಬಿ.ಎಸ್‌ ಪಾಟೀಲ್‌  ಮಾತನಾಡಿ, ಮಧ್ಯಂತರ ವರದಿಯ ನಂತರ ಆಯೋಗ ಮತ್ತೊಮ್ಮೆ ದಾಖಲೆಗಳ ಸಲ್ಲಿಕೆಗೆ ಅವಕಾಶ ಕಲ್ಪಿಸಿತು. ಈ ಸಂಧರ್ಭದಲ್ಲಿ ನಾವು 1871 ರಿಂದ ಇದುವರೆಗಿನ ಸುಮಾರು 900 ಪುಟಗಳಷ್ಟು ದಾಖಲೆಯನ್ನು ಸಲ್ಲಿಸಿದ್ದೇವೆ. 1871 ರ ವರದಿಯಲ್ಲಿ ಪಂಚಮಸಾಲಿ ಸಮುದಾಯವನ್ನ ಶೂದ್ರರ ಗುಂಪಿನಲ್ಲಿ ಸೇರಿಸಿದ್ದರ ದಾಖಲೆಯನ್ನು ಪ್ರಮುಖವಾಗಿ ಪರಿಗಣಿಸಲಾಗಿದೆ. ಈ ಹಿನ್ನಲೆಯಲ್ಲಿ ಹರಿಹರ ಪಂಚಮಸಾಲಿ ಪೀಠದ ನೇತೃತ್ವದಲ್ಲಿ ನಡೆದಂತಹ ಕಾನೂನಾತ್ಮಕ ಹೋರಾಟಕ್ಕೆ ಜಯ ಸಿಗುವ ಸುಸಂದರ್ಭ ಬಂದೊದಗಿದೆ ಎಂದು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

Tariff ಬೆನ್ನಲ್ಲೇ ಅಮೆರಿಕ ಅಧ್ಯಕ್ಷರಿಗೆ ಯುದ್ಧೋನ್ಮಾದ: "ಯುದ್ಧ ಇಲಾಖೆ" ಬಗ್ಗೆ ಟ್ರಂಪ್ ಒಲವು!

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

Ragigudda Metro ಮೆಟ್ರೋ ನಿಲ್ದಾಣದಲ್ಲಿ ತಪ್ಪಿದ ದುರಂತ, ಆಯತಪ್ಪಿ ಹಳಿ ಮೇಲೆ ಬಿದ್ದ ಸಿಬ್ಬಂದಿ!... ಮುಂದೇನಾಯ್ತು? Video

ಸೌರಭ್ ಭಾರದ್ವಾಜ್ ಮನೆ ಮೇಲೆ ಇಡಿ ದಾಳಿ; ಮೋದಿ ನಕಲಿ ಪದವಿ ಕುರಿತ ಗಮನ ಬೇರೆಡೆ ಸೆಳೆಯಲು ಯತ್ನ ಎಂದ AAP

SCROLL FOR NEXT