ಸಂಗ್ರಹ ಚಿತ್ರ 
ರಾಜ್ಯ

ಏಪ್ರಿಲ್ 20ರಿಂದ ಕೆ.ಆರ್‌.ಕ್ಷೇತ್ರಕ್ಕೆ ಕಬಿನಿಯಿಂದ 20 ಎಂಎಲ್‌ಡಿ ಹೆಚ್ಚುವರಿ ನೀರು: ರಾಮದಾಸ್‌

ಏಪ್ರಿಲ್ 20 ರಿಂದ ಕೃಷ್ಣರಾಜ ಕ್ಷೇತ್ರಕ್ಕೆ ಕಬಿನಿಯಿಂದ ಹೆಚ್ಚುವರಿಯಾಗಿ 20 ಎಂಎಲ್ ಡಿ ನೀರು ಹರಿದು ಬರಲಿದೆ ಎಂದು ಶಾಸಕ ಎಸ್ ಎ ರಾಮದಾಸ್ ಅವರು ಗುರುವಾರ ಹೇಳಿದರು.

ಮೈಸೂರು: ಏಪ್ರಿಲ್ 20 ರಿಂದ ಕೃಷ್ಣರಾಜ ಕ್ಷೇತ್ರಕ್ಕೆ ಕಬಿನಿಯಿಂದ ಹೆಚ್ಚುವರಿಯಾಗಿ 20 ಎಂಎಲ್ ಡಿ ನೀರು ಹರಿದು ಬರಲಿದೆ ಎಂದು ಶಾಸಕ ಎಸ್ ಎ ರಾಮದಾಸ್ ಅವರು ಗುರುವಾರ ಹೇಳಿದರು.

ತಮ್ಮ ಕ್ಷೇತ್ರವನ್ನು ಬೋರ್‌ವೆಲ್ ರಹಿತ ಕ್ಷೇತ್ರವನ್ನಾಗಿ ಮಾಡುವ ಘೋಷಣೆ ಮಾಡಿದ್ದ ರಾಮದಾಸ್ ಅವರು, ಕ್ಷೇತ್ರಕ್ಕೆ ಹೆಚ್ಚವರಿ ನೀರು ತರುವ ಕುರಿತು ಬಿದರಗೂಡು ಸಮೀಪ ಇರುವ ಕಬಿನಿ ಜಲಾ ಸಂಗ್ರಹಣಾ ಘಟಕ್ಕೆ ಭೇಟಿ ನೀಡಿ, ನಗರಪಾಲಿಕೆ ಆಯುಕ್ತರು, ವಾಣಿವಿಲಾಸ, ಜಲಮಂಡಳಿ, ವಿದ್ಯುತ್‌ ಇಲಾಖೆ, ನೀರಾವರಿ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳ ಚರ್ಚೆ ನಡೆಸಿದರು, ಇದೇ ವೇಳೆ ವಿವಿಧ ಕಾಮಗಾರಿಗಳನ್ನೂ ಪರಿಶೀಲನೆ ನಡೆಸಿದರು.

ಬಳಿಕ ಮಾತನಾಡಿದ ಅವರು, ಸದ್ಯ ಬಿದರಗೂಡಿನಿಂದ 60 ಎಂಎಲ್‌ಡಿ ನೀರು ಹರಿದುಬರುತ್ತಿದ್ದು, ಕೆಆರ್‌ ಕ್ಷೇತ್ರವನ್ನು ಬೋರ್‌ವೆಲ್‌ ಮುಕ್ತ ಮಾಡಲು ಹೆಚ್ಚುವರಿಯಾಗಿ 20-30 ಎಂಎಲ್‌ಡಿ ನೀರು ಅಗತ್ಯವಿದೆ ಎಂದು ಹೇಳಿದರು.

ಎಲ್ಲವೂ ಅಂದುಕೊಂಡಂತೆ ನಡೆದರೆ ಇನ್ನು ಕೆಲವೇ ತಿಂಗಳುಗಳಲ್ಲಿ 120 ಎಂಎಲ್ ಡಿ ನೀರು ಹೆಚ್ಚುವರಿಯಾಗಿ ಲಭ್ಯವಾಗಲಿದ್ದು, ನೀರಿನ ಹರಿವಿನ ಲೆಕ್ಕಾಚಾರ ಮಾಡಬೇಕಾದ ಹಿನ್ನೆಲೆಯಲ್ಲಿ ಮಾ. 27ರಂದು ಕ್ಷೇತ್ರದಲ್ಲಿ 8 ಗಂಟೆಗಳ ಕಾಲ ನೀರಿನ ಸೇವೆಯಲ್ಲಿ ವ್ಯತ್ಯಯ ಆಗಲಿದೆ. ಅಂದು ಸಹಕರಿಸುವಂತೆ ಸಾರ್ವಜನಿಕರಲ್ಲಿ ಮನವಿ ಮಾಡುವುದಾಗಿ ತಿಳಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

US tariff: ಚೀನಾ ಮೇಲೆ ಅಮೆರಿಕ ಶೇ.100 ರಷ್ಟು ಸುಂಕ; ಭಾರತಕ್ಕೆ ಎಚ್ಚರಿಕೆಯ ಗಂಟೆ!

ದ್ವಿಶತಕ ಮಿಸ್: ಗಿಲ್ ತಪ್ಪಿನಿಂದ ರನ್ ಔಟ್ ಆಗಿ ತಲೆ ಚಚ್ಚಿಕೊಂಡ ಜೈಸ್ವಾಲ್; ಮೈದಾನ ತೊರೆಯುವಂತೆ ಅಂಪೈರ್ ತಾಕೀತು, Video!

ಅಧಿಕೃತವಾಗಿ 'ಹೊಸ ಗರ್ಲ್‌ ಫ್ರೆಂಡ್‌' ಪರಿಚಯಿಸಿದ ಹಾರ್ದಿಕ್ ಪಾಂಡ್ಯ! Video

2nd Test, Day 2: ವಿಂಡೀಸ್ ವಿರುದ್ಧ ಶತಕ, ವಿರಾಟ್ ಕೊಹ್ಲಿ ದಾಖಲೆ ಸರಿಗಟ್ಟಿದ ಶುಭ್ ಮನ್ ಗಿಲ್!

BBk 12: ಟಾಸ್ಕ್‌ನೇ ಮರೆತುಬಿಟ್ರಾ ಅಸುರಾಧಿಪತಿ ಕಾಕ್ರೋಚ್? ಬಾಗಿಲನ್ನು ಓಪನ್ ಮಾಡಿ ಎಂದ ಕಿಚ್ಚ ಸುದೀಪ್!

SCROLL FOR NEXT