ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ನಿವಾಸದಲ್ಲಿ ಉಪಾಹಾರಕ್ಕೆ ಸಿದ್ಧತೆ ನಡೆಸುತ್ತಿರುವ ಅಮಿತ್ ಶಾ ಮತ್ತು ರಾಜ್ಯ ಬಿಜೆಪಿ ನಾಯಕರು 
ರಾಜ್ಯ

ಬೆಂಗಳೂರಿನಲ್ಲಿ ಇಂದು ಕೇಂದ್ರ ಗೃಹ ಸಚಿವ ಅಮಿತ್ ಶಾ: ಈ ಮಾರ್ಗಗಳಲ್ಲಿ ಸಂಚಾರ ಮಾರ್ಗ ಬದಲಾವಣೆ ಗಮನಿಸಿ

ಕೇಂದ್ರ ಗೃಹ ಸಚಿವ ಅಮಿತ್ ಶಾ ತಡರಾತ್ರಿ ಬೆಂಗಳೂರಿಗೆ ಆಗಮಿಸಿದ್ದು, ಇಂದು ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. ಅಮಿತ್ ಶಾ ಅವರ ಸುಗಮ ಸಂಚಾರಕ್ಕಾಗಿ ಬೆಂಗಳೂರಿನ ಕೆಲವು ರಸ್ತೆ ಮಾರ್ಗಗಳಲ್ಲಿ ವಾಹನ ಸಂಚಾರ ಮಾರ್ಗ ಬದಲಾಯಿಸಲಾಗಿದೆ. 

ಬೆಂಗಳೂರು: ಕೇಂದ್ರ ಗೃಹ ಸಚಿವ ಅಮಿತ್ ಶಾ ತಡರಾತ್ರಿ ಬೆಂಗಳೂರಿಗೆ ಆಗಮಿಸಿದ್ದು, ಇಂದು ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. ಅಮಿತ್ ಶಾ ಅವರ ಸುಗಮ ಸಂಚಾರಕ್ಕಾಗಿ ಬೆಂಗಳೂರಿನ ಕೆಲವು ರಸ್ತೆ ಮಾರ್ಗಗಳಲ್ಲಿ ವಾಹನ ಸಂಚಾರ ಮಾರ್ಗ ಬದಲಾಯಿಸಲಾಗಿದೆ. 

ಅಮಿತ್‌ ಶಾ ಅವರು ಬೆಂಗಳೂರಿನ ಕಮ್ಮಘಟ್ಟದಲ್ಲಿ ಇವತ್ತು ಶೇಖರ್‌ ಸಮೃದ್ಧಿ ಸೌಧದ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಈ ಮಾರ್ಗದಲ್ಲಿ ಅವರು ಸಂಚರಿಸುವ ಹಿನ್ನೆಲೆಯಲ್ಲಿ ಸುಗಮ ಸಂಚಾರಕ್ಕಾಗಿ ಸಾರ್ವಜನಿಕ ವಾಹನ ಸಂಚಾರದಲ್ಲಿ ಕೆಲವು ಬದಲಾವಣೆಗಳನ್ನು ಮಾಡಲಾಗಿದೆ. ಇಂದು ಇಂದು ಮಧ್ಯಾಹ್ನ 12 ಗಂಟೆಯಿಂದ ಸಾಯಂಕಾಲ 4 ಗಂಟೆಯವರಿಗೆ ಅನ್ವಯವಾಗಿಲಿದ. 

ಸಂಚಾರ ನಿರ್ಬಂಧ ರಸ್ತೆಗಳು: ಹಳೆ ವಿಮಾನ ನಿಲ್ದಾಣ ರಸ್ತೆ, ಮೈಸೂರು ರಸ್ತೆ, ಎನ್ ಆರ್ ರಸ್ತೆ, ನೃಪತೃಂಗ ರಸ್ತೆ, ಶೇಷಾದ್ರಿ ರಸ್ತೆ, ಪ್ಯಾಲೇಸ್ ರಸ್ತೆ, ರೇಸ್ ಕೋರ್ಸ್ ರಸ್ತೆ ಹಾಗೂ ಕೆಂಗೇರಿ ಯಿಂದ ಕೊಮ್ಮಘಟ್ಟ ರಸ್ತೆಗಳಲ್ಲಿ ಮಧ್ಯಾಹ್ನ 12ರಿಂದ ಅಪರಾಹ್ನ 4 ಗಂಟೆಯವರೆಗೆ ವಾಹನ ಸಂಚಾರಕ್ಕೆ ನಿರ್ಬಂಧ ಹೇರಲಾಗಿದೆ.

ಟೌನ್ ಹಾಲ್ ಕಡೆಯಿಂದ ಎನ್ ಆರ್ ರಸ್ತೆಯ ಮಾರ್ಗವಾಗಿ ಮೈಸೂರು ರಸ್ತೆಗೆ ಸಂಚರಿಸುವ ಲಘು, ಮಧ್ಯಮ ಮತ್ತು ಭಾರಿ ಸರಕು ವಾಹನಗಳನ್ನು ನಿರ್ಬಂಧಿಸಲಾಗಿದೆ.

ನಾಯಂಡಹಳ್ಳಿ ಜಂಕ್ಷನ್ ನಿಂದ ಬೆಂಗಳೂರು ನಗರದ ಒಳಭಾಗ ಮತ್ತು ಹೊರಭಾಗಕ್ಕೆ ಸಂಚಿಸುವ ಲಘು, ಮಧ್ಯಮ ಮತ್ತು ಭಾರಿ ಸರಕು ವಾಹನಗಳ ಸಂಚಾರಕ್ಕೆ ನಿರ್ಬಂಧ

ಕುಂಬಳಗೋಡು ಕಡೆಯಿಂದ ಕೆಂಗೇರಿ ಕಡೆಗೆ (ಬೆಂಗಳೂರು ನಗರದ ಒಳಕ್ಕೆ) ಸಂಚರಿಸುವ ಲಘು, ಮಧ್ಯಮ ಮತ್ತು ಭಾರಿ ಸರಕು ವಾಹನಗಳ ಸಂಚಾರಕ್ಕೆ ನಿರ್ಬಂಧ

ಪರ್ಯಾಯ ಮಾರ್ಗ: ಟೌನ್ ಹಾಲ್ ಜಂಕ್ಷನ್ ನಿಂದ ಎನ್ ಆರ್ ರಸ್ತೆಯ ಮಾರ್ಗವಾಗಿ ಮೈಸೂರು ರಸ್ತೆಗೆ ಸಂಚರಿಸುವ ವಾಹನಗಳು ಲಾಲ್ ಬಾಗ್ ರಸ್ತೆಯ ಮೂಲಕ ಸಂಚರಿಸಬಹುದು

ನಾಯಂಡಹಳ್ಳಿ ಜಂಕ್ಷನ್ ನಿಂದ ಬೆಂಗಳೂರು ನಗರದ ಒಳ ಮತ್ತು ಹೊರಭಾಗಕ್ಕೆ ಸಂಚರಿಸುವವರು ನಾಗರಭಾವಿ-ಸುಮ್ಮನಹಳ್ಳಿ ರಿಂಗ್ ರಸ್ತೆಯ ಮಾರ್ಗವಾಗಿ ಸಂಚರಿಸಬಹುದು

ಕುಂಬಳಗೋಡುಕಡೆಯಿಂದ ಕೆಂಗೇರಿ ಕಡೆಗೆ (ಬೆಂಗಳೂರು ನಗರ ಒಳಭಾಗಕ್ಕೆ) ಸಂಚರಿಸುವವರು ನೈಸ್ ರಸ್ತೆಯ ಮೂಲಕ ಸಂಚರಿಸಬಹುದು.

ವಿಧಾನಸೌಧದ ಮುಂಭಾಗದಲ್ಲಿ ಬೆಂಗಳೂರು ನಿರ್ಮಾತೃ ಕೆಂಪೇಗೌಡ ಮತ್ತು ಲಿಂಗಾಯತ ಸಮಾಜ ಸುಧಾರಕ ಬಸವೇಶ್ವರ ಸೇರಿದಂತೆ ಮೂರು ಪ್ರತಿಮೆಗಳನ್ನು ಅಮಿತ್‌ ಶಾ ಇವತ್ತು ಅನಾವರಣಗೊಳಿಸಲಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇದು ಕೇವಲ ಧ್ವಜವಲ್ಲ ಭಾರತೀಯ ನಾಗರಿಕತೆಯ ಪುನರ್‌ ಜಾಗೃತಿಯ ಧ್ವಜ, ಶತಮಾನಗಳಷ್ಟು ಹಳೆಯ ಗಾಯ ಈಗ ವಾಸಿಯಾಗುತ್ತಿದೆ: ಪ್ರಧಾನಿ ಮೋದಿ

ಅಯೋಧ್ಯೆ ರಾಮ ಮಂದಿರ ನಿರ್ಮಾಣ ಪೂರ್ಣ: ರಾಮ-ಸೀತೆ ವಿವಾಹ ಪರ್ವದಂದೇ ದೇಗುಲದ ಶಿಖರದ ಮೇಲೆ ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿ

"Misfit For Army": ಗುರುದ್ವಾರ ಪ್ರವೇಶಿಸಲು ನಿರಾಕರಣೆ, ಕ್ರಿಶ್ಚಿಯನ್ ಸೇನಾ ಅಧಿಕಾರಿಗೆ 'ಸುಪ್ರೀಂ' ತರಾಟೆ!

ಭ್ರಷ್ಟರಿಗೆ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಶಾಕ್: ಏಕ ಕಾಲದಲ್ಲಿ ರಾಜ್ಯದ 10 ಕಡೆ ದಾಳಿ- ಪರಿಶೀಲನೆ

WPL 2026 auction: ಈ ಬಾರಿಯ 'ಮೋಸ್ಟ್ ಡಿಮ್ಯಾಂಡ್' ಆಟಗಾರ್ತಿ ಯಾರು?

SCROLL FOR NEXT