ಪ್ರತಿಭಟನಾನಿರತ ಕಾಂಗ್ರೆಸ್ ನಾಯಕರು. 
ರಾಜ್ಯ

ಎಸ್‌ಟಿ, ಎಸ್‌ಸಿ ಮೀಸಲಾತಿ ವಿಳಂಬ ಖಂಡಿಸಿ ರಾಜಭವನ ಚಲೋ: ಸಿದ್ದರಾಮಯ್ಯ, ಡಿಕೆ.ಶಿವಕುಮಾರ್ ವಶಕ್ಕೆ ಪಡೆದ ಪೊಲೀಸರು

ಎಸ್‌ಸಿ, ಎಸ್‌ಟಿ ಮೀಸಲಾತಿ ಹೆಚ್ಚಳ ಮಾಡಿ ಆದೇಶ ಮಾಡಿದರೂ ಸಂವಿಧಾನದ 8 ನೇ ಪರಿಚ್ಛೇದಕ್ಕೆ ಸೇರಿಸಲು ಕೇಂದ್ರಕ್ಕೆ ರಾಜ್ಯ ಸರ್ಕಾರ‌ ಶಿಫಾರಸ್ಸು ಮಾಡಿಲ್ಲ ಎಂದು‌ ಆರೋಪಿಸಿ ರಾಜಭವನ ಚಲೋ ಹಮ್ಮಿಕೊಂಡಿದ್ದ ಕಾಂಗ್ರೆಸ್ ನಾಯಕರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಬೆಂಗಳೂರು: ಎಸ್‌ಸಿ, ಎಸ್‌ಟಿ ಮೀಸಲಾತಿ ಹೆಚ್ಚಳ ಮಾಡಿ ಆದೇಶ ಮಾಡಿದರೂ ಸಂವಿಧಾನದ 8 ನೇ ಪರಿಚ್ಛೇದಕ್ಕೆ ಸೇರಿಸಲು ಕೇಂದ್ರಕ್ಕೆ ರಾಜ್ಯ ಸರ್ಕಾರ‌ ಶಿಫಾರಸ್ಸು ಮಾಡಿಲ್ಲ ಎಂದು‌ ಆರೋಪಿಸಿ ರಾಜಭವನ ಚಲೋ ಹಮ್ಮಿಕೊಂಡಿದ್ದ ಕಾಂಗ್ರೆಸ್ ನಾಯಕರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಕೆಪಿಸಿಸಿ ಕಚೇರಿಯಿಂದ ರಾಜಭವನಕ್ಕೆ ತೆರಳಲು ಮುಂದಾದ ಕಾಂಗ್ರೆಸ್‌ ನಾಯಕರನ್ನು ಪೊಲೀಸರು ಮಾರ್ಗದ ಮಧ್ಯೆಯೇ ತಡೆದರು.

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿಕೆ.ಶಿವಕುಮಾರ್ ಸೇರಿದಂತೆ ಹಲವಾರು ನಾಯಕರನ್ನು ಪೊಲೀಸರು ವಶಕ್ಕೆ ಪಡೆದರು. ಸದ್ಯ ಕಾಂಗ್ರೆಸ್‌ ನಾಯಕರನ್ನು ವಶಕ್ಕೆ ಪಡೆದಿರುವ ಪೊಲೀಸರು ಬಸ್‌ನಲ್ಲಿ ಕರೆದುಕೊಂಡು ಹೋಗಿದ್ದಾರೆ.

ವಶಕ್ಕೆ ಪಡೆಯುವುದಕ್ಕೆ ಮುನ್ನ ಮಾತನಾಡಿದ ಮಾಜಿ ಸಿಎಂ ಸಿದ್ದರಾಮಯ್ಯ, ಬಿಜೆಪಿ ಸರ್ಕಾರ ಎಸ್‌ಸಿ, ಎಸ್‌ಟಿ ಸಮುದಾಯಕ್ಕೆ ಮೋಸ ಮಾಡಿದೆ. ಇಲ್ಲಿಯವರೆಗೆ ಸುಮ್ಮನಿದ್ದ ಅವರು ನಾವು ಪ್ರತಿಭಟನೆಗೆ ಮುಂದಾದ ಬಳಿ ಇವತ್ತು ಕಳುಹಿಸಲು ಮುಂದಾಗಿದ್ದಾರೆ ಎಂದು ಕಿಡಿಕಾರಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕ ನಾಳೆ ಜಾರಿ: ಕರಡು ಸೂಚನೆ ಹೊರಡಿಸಿದ ಅಮೆರಿಕ

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

ವಿಧಾನಪರಿಷತ್'ಗೆ ನಾಮನಿರ್ದೇಶನ: ನಾಲ್ವರು MLC ಅಭ್ಯರ್ಥಿಗಳು ಹೆಸರು ಬದಲು, ಪಟ್ಟಿಯಲ್ಲಿ TNIE ಮೈಸೂರು ವಿಭಾಗದ ಮುಖ್ಯಸ್ಥನಿಗೆ ಸ್ಥಾನ

ಬಾನು ಮುಷ್ತಾಕ್‌ ದಸರಾ ಉದ್ಘಾಟನೆಗೆ ಆಕ್ಷೇಪ; ಮುಸ್ಲಿಂ ದ್ವೇಷ ಮನಸ್ಥಿತಿಯನ್ನು ಬದಿಗಿಟ್ಟು, ಸಂವಿಧಾನದ ಆಶಯ ಅರ್ಥ ಮಾಡಿಕೊಳ್ಳಿ: ಸಚಿವ ಹೆಚ್.ಸಿ.ಮಹದೇವಪ್ಪ

SCROLL FOR NEXT