ಸಂಗ್ರಹ ಚಿತ್ರ 
ರಾಜ್ಯ

ಬೆಂಗಳೂರು: ಮಹಿಳೆಯರಿಗಾಗಿ ಪ್ರತ್ಯೇಕ ಆಯುಷ್ಮತಿ ಕ್ಲಿನಿಕ್, ಶೀಘ್ರದಲ್ಲೇ ಆರಂಭ!

ರಾಷ್ಟ್ರೀಯ ಆರೋಗ್ಯ ಮಿಷನ್ (ಎನ್‌ಎಚ್‌ಎಂ) ಅಡಿಯಲ್ಲಿ ನಗರ ಮತ್ತು ರಾಜ್ಯದ ಇತರ ಭಾಗಗಳಲ್ಲಿ ಮಂಜೂರಾದ ಆಯುಷ್ಮತಿ ಕ್ಲಿನಿಕ್ ಗಳ ತೆರೆಯಲು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಮತ್ತು ಆರೋಗ್ಯ ಇಲಾಖೆ ಸಿದ್ಧತೆಗಳನ್ನು ನಡೆಸುತ್ತಿದೆ.

ಬೆಂಗಳೂರು: ರಾಷ್ಟ್ರೀಯ ಆರೋಗ್ಯ ಮಿಷನ್ (ಎನ್‌ಎಚ್‌ಎಂ) ಅಡಿಯಲ್ಲಿ ನಗರ ಮತ್ತು ರಾಜ್ಯದ ಇತರ ಭಾಗಗಳಲ್ಲಿ ಮಂಜೂರಾದ ಆಯುಷ್ಮತಿ ಕ್ಲಿನಿಕ್ ಗಳ ತೆರೆಯಲು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಮತ್ತು ಆರೋಗ್ಯ ಇಲಾಖೆ ಸಿದ್ಧತೆಗಳನ್ನು ನಡೆಸುತ್ತಿದೆ.

ಕೆಲ ದಿನಗಳ ಹಿಂದಷ್ಟೇ ನಮ್ಮ ಕ್ಲಿನಿಕ್ ಗಳನ್ನು ತೆರೆಯಲಾಗಿತ್ತು. ಅದೇ ರೀತಿ ಆಯುಷ್ಮತಿ ಕ್ಲಿನಿಕ್ ಗಳ ತೆರೆದು, ತಜ್ಞ ವೈದ್ಯರಿಂದ ಮಹಿಳೆಯರಿಗೆ ಉಚಿತ ಚಿಕಿತ್ಸೆ ನೀಡಲು ಸರ್ಕಾರ ಮುಂದಾಗಿದೆ.

ಎನ್‌ಎಚ್‌ಎಂನ ನಿರ್ದೇಶಕ ಡಾ.ನವೀನ್ ಭಟ್ ಅವರು ಮಾತನಾಡಿ, ರಾಜ್ಯದಲ್ಲಿ 50 ಕ್ಲಿನಿಕ್‌ಗಳು ಕಾರ್ಯಾಚರಣೆ ಮಾಡಲು ಸಿದ್ಧವಾಗಿವೆ. 128 ಕ್ಲಿನಿಕ್‌ಗಳ ಪೈಕಿ 70 ಕ್ಲಿನಿಕ್ ಗಳನ್ನು ಮಾರ್ಚ್ ಅಂತ್ಯದೊಳಗೆ ತೆರೆಯಲು ಆರೋಗ್ಯ ಇಲಾಖೆ ಮುಂದಾಗಿದೆ ಎಂದು ಹೇಳಿದ್ದಾರೆ.

ರಾಜ್ಯದ ನಗರ ಸಾರ್ವಜನಿಕ ಆರೋಗ್ಯ ಕೇಂದ್ರಗಳಲ್ಲಿ (UPHC) ಕ್ಲಿನಿಕ್‌ಗಳನ್ನು ತೆರೆಯಲು ಜುಲೈ 2022 ರಲ್ಲಿ ಯೋಜನೆಯನ್ನು ರೂಪಿಸಲಾಗಿತ್ತು.

ಆರೋಗ್ಯ ಇಲಾಖೆ ಘೋಷಿಸಿರುವಂತೆ ಬಿಬಿಎಂಪಿ ವ್ಯಾಪ್ತಿಯಲ್ಲಿ 57 ಕ್ಲಿನಿಕ್ ಗಳು ಮತ್ತು ಉಳಿದ ಕ್ಲಿನಿಕ್ ಗಳನ್ನು ರಾಜ್ಯದ ಇತರ ಭಾಗಗಳಲ್ಲಿ ತೆರೆಯಲು ಸಿದ್ಧತೆ ನಡೆಲಾಗುತ್ತಿದೆ ಎಂದು ತಿಳಿದುಬಂದಿದೆ.

ಮಕ್ಕಳ ತಜ್ಞರು, ಸ್ತ್ರೀರೋಗ ತಜ್ಞರು, ಪ್ರಸೂತಿ ತಜ್ಞರು ಮತ್ತು ಮಾನಸಿಕ ಆರೋಗ್ಯ ತಜ್ಞರ ಸೇವೆಗಳನ್ನು ರೋಗಿಗಳಿಗೆ ಲಭ್ಯವಾಗುವಂತೆ ಯುಪಿಎಚ್‌ಸಿಗಳಲ್ಲಿ ಕ್ಲಿನಿಕ್‌ಗಳನ್ನು ಸ್ಥಾಪಿಸಲಾಗುವುದು ಎಂದು ಡಾ ಭಟ್ ತಿಳಿಸಿದ್ದಾರೆ.

ನಗರದ ಜನರಿಗೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವಿಶೇಷ ಸೇವೆಗಳನ್ನು ಒದಗಿಸುವುದು ಈ ಚಿಕಿತ್ಸಾಲಯಗಳ ಉದ್ದೇಶವಾಗಿದೆ ಎಂದು ಭಟ್ ಅವರು ಮಾಹಿತಿ ನೀಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

SCROLL FOR NEXT