ನಿತಿನ್ ಗಡ್ಕರಿ 
ರಾಜ್ಯ

ಬೆಳಗಾವಿ: ಕೇಂದ್ರ ಸಚಿವ ನಿತಿನ್‌ ಗಡ್ಕರಿಗೆ ಹಿಂಡಲಗಾ ಜೈಲಿನಿಂದ ಎರಡನೇ ಬಾರಿ ಬೆದರಿಕೆ ಕರೆ!

ಕೆಲ ವಾರಗಳ ಹಿಂದೆ ಹಿಂಡಲಗಾ ಜೈಲಿನಿಂದ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರಿಗೆ ಬೆದರಿಕೆ ಕರೆ ಬಂದಿರುವ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿರುವಾಗಲೇ, ಅದೇ ಸ್ಥಳದಿಂದ ಗಡ್ಕರಿ ಅವರ ಕಚೇರಿಗೆ ಮತ್ತೊಂದು ಬೆದರಿಕೆ ಕರೆ ಬಂದಿದೆ.

ಬೆಳಗಾವಿ: ಕೆಲ ವಾರಗಳ ಹಿಂದೆ ಹಿಂಡಲಗಾ ಜೈಲಿನಿಂದ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರಿಗೆ ಬೆದರಿಕೆ ಕರೆ ಬಂದಿರುವ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿರುವಾಗಲೇ, ಅದೇ ಸ್ಥಳದಿಂದ ಗಡ್ಕರಿ ಅವರ ಕಚೇರಿಗೆ ಮತ್ತೊಂದು ಬೆದರಿಕೆ ಕರೆ ಬಂದಿದೆ.

ಎರಡನೇ ಬಾರಿಗೆ ಸಚಿವರ ಕಚೇರಿಗೆ ದೂರವಾಣಿ ಕರೆ ಮಾಡಿದ ಹಿನ್ನೆಲೆಯಲ್ಲಿ ಗುರುವಾರ ತಡರಾತ್ರಿ ಮಹಾರಾಷ್ಟ್ರದ ಪೊಲೀಸ್ ಅಧಿಕಾರಿಗಳ ತಂಡ ಹಿಂಡಲಗಾ ಕಾರಾಗೃಹದಲ್ಲಿ ತಪಾಸಣೆ ನಡೆಸಿತು.

ಮೂಲಗಳ ಪ್ರಕಾರ, ಕರೆ ಮಾಡಿದವರು ಗಡ್ಕರಿ ಅವರ ಕಚೇರಿಗೆ ಕರೆ ಮಾಡಿ ಕೋಟ್ಯಂತರ ಹಣಕ್ಕೆ ಬೇಡಿಕೆಯಿಟ್ಟಿದ್ದಾರೆ.  ಗಡ್ಕರಿ ಅವರ ಕಚೇರಿಯಲ್ಲಿ ಕರೆ ಸ್ವೀಕರಿಸುವವರಿಗೆ ಬೆದರಿಕೆ ಹಾಕಿದ್ದಾರೆ.

ಮಂಗಳವಾರ ಗಡ್ಕರಿ ಅವರ ಕಚೇರಿಯಲ್ಲಿ ಫೋನ್ ಕರೆಯನ್ನು ಸ್ವೀಕರಿಸಲಾಗಿದೆ ಮತ್ತು ಕರೆ ಮಾಡಿದವರು ಮೊಬೈಲ್ ಪಾವತಿ ಅಪ್ಲಿಕೇಶನ್ ಗೂಗಲ್ ಪೇ ಮೂಲಕ ಹಣವನ್ನು ಪಾವತಿಸಲು ಬಯಸಿದ್ದರು.

ಗಡ್ಕರಿಯಿಂದ ಹಣದ ಬೇಡಿಕೆಯ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡದಂತೆ ಅನಾಮಧೇಯ ಕರೆ ಮಾಡಿದ ವ್ಯಕ್ತಿ ಎಚ್ಚರಿಕೆ ನೀಡಿದ್ದರು. ಹಿಂಡಲಗಾ ಜೈಲಿನಿಂದ ಕರೆ ಮಾಡಲಾಗಿದೆ ಎಂದು ಮಹಾರಾಷ್ಟ್ರ ಪೊಲೀಸರ ತಂಡ ಶಂಕಿಸಿದ್ದು, ಶುಕ್ರವಾರ ಜೈಲಿನೊಳಗೆ ಮೊಬೈಲ್ ಫೋನ್‌ಗಳನ್ನು ಹುಡುಕಲು ಪ್ರಯತ್ನಿಸಿದ್ದಾರೆ.

ಹಿಂಡಲಗಾ ಜೈಲಿನಲ್ಲಿ ತಪಾಸಣೆ ಮಾಡಲಾಗಿದೆ. ಯಾರ ಬಳಿಯೂ ಮೊಬೈಲ್‌ ಇಲ್ಲ. ಜಯೇಶ್‌ ಪೂಜಾರಿಯನ್ನು ಭೇಟಿಯಾಗಲು ಬಂದವರು ಅಥವಾ ಜಾಮೀನು ಮೇಲೆ ಬಿಡುಗಡೆ ಆದವರು ಹೊರಗಿನಿಂದ ಈ ರೀತಿ ಕರೆ ಮಾಡಿರಬಹುದು ಎಂದು ಹೇಳಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

ಆರೋಗ್ಯ ಇಲಾಖೆಯಿಂದ ಉರ್ದು ಭಾಷೆ ಆಹ್ವಾನ ಪತ್ರಿಕೆ: ಜನರನ್ನು ದಾರಿ ತಪ್ಪಿಸಲೇಬೇಕು ಎಂಬ ಹಠಕ್ಕೆ ಬಿದ್ದಿದ್ದೀರಾ?

SCROLL FOR NEXT