ಬಸವಜಯ ಮೃತ್ಯುಂಜಯ ಸ್ವಾಮೀಜಿ 
ರಾಜ್ಯ

ಪಂಚಮಸಾಲಿ ಮೀಸಲಾತಿ ಹೋರಾಟ; ಇಂದಿನ ಸಭೆಯ ಬಳಿಕ ನಿರ್ಣಯ ಪ್ರಕಟ: ಬಸವ ಜಯಮೃತ್ಯುಂಜಯ ಸ್ವಾಮೀಜಿ

ಪಂಚಮಸಾಲಿ ಲಿಂಗಾಯತ ಸಮುದಾಯಕ್ಕೆ 2ಎ ಮೀಸಲಾತಿ ನೀಡುವಂತೆ ಆಗ್ರಹಿಸಿ ನಡೆಸಲಾಗುತ್ತಿರುವ ಪ್ರತಿಭಟನೆ ಮುಂದುವರಿಸಬೇಕೇ ಅಥವಾ ಬೇಡವೇ ಎಂಬುದನ್ನು ಇಂದು ನಡೆಯುವ ಸಭೆಯಲ್ಲಿ ನಿರ್ಧರಿಸಲಾಗುವುದು ಎಂದು ಪಂಚಮಸಾಲಿ ಸಮುದಾಯದ ಧರ್ಮಾಧ್ಯಕ್ಷ ಬಸವ ಜಯಮೃತ್ಯುಂಜಯ ಸ್ವಾಮೀಜಿ ಹೇಳಿದ್ದಾರೆ.

ಬೆಂಗಳೂರು: ಪಂಚಮಸಾಲಿ ಲಿಂಗಾಯತ ಸಮುದಾಯಕ್ಕೆ 2ಎ ಮೀಸಲಾತಿ ನೀಡುವಂತೆ ಆಗ್ರಹಿಸಿ ನಡೆಸಲಾಗುತ್ತಿರುವ ಪ್ರತಿಭಟನೆ ಮುಂದುವರಿಸಬೇಕೇ ಅಥವಾ ಬೇಡವೇ ಎಂಬುದನ್ನು ಇಂದು ನಡೆಯುವ ಸಭೆಯಲ್ಲಿ ನಿರ್ಧರಿಸಲಾಗುವುದು ಎಂದು ಪಂಚಮಸಾಲಿ ಸಮುದಾಯದ ಧರ್ಮಾಧ್ಯಕ್ಷ ಬಸವ ಜಯಮೃತ್ಯುಂಜಯ ಸ್ವಾಮೀಜಿ ಹೇಳಿದ್ದಾರೆ.

“ಲಿಂಗಾಯತ ಮೀಸಲಾತಿ ಹೆಚ್ಚಿಸುವ ಸಂಪುಟ ನಿರ್ಧಾರ ನಮಗೆ ತಲುಪಿಲ್ಲ. ಹೀಗಾಗಿ ಸಮುದಾಯದವರು ವಿಜಯವೆಂದು ಆಚರಿಸಬಾರದು. ಮೀಸಲಾತಿಗಾಗಿ 25 ವರ್ಷದಿಂದ ಕಾಯುತ್ತಿದ್ದೇವೆ. ಇನ್ನೂ ಕೆಲ ಗಂಟೆಗಳ ಕಾಲ ಕಾಯೋಣ. ಶನಿವಾರದಂದು ಸಮುದಾಯದ ಸದಸ್ಯರೊಂದಿಗೆ ಸಭೆ ನಡೆಸಲಾಗುತ್ತಿದ್ದು, ಸಭೆಯಲ್ಲಿ ನಿರ್ಧಾರ ಕೈಗೊಳ್ಳಳಾಗುತ್ತದೆ ಎಂದು ಹೇಳಿದ್ದಾರೆ.

ಪಂಚಮಸಾಲಿಗಳು ಸೇರಿದಂತೆ ಲಿಂಗಾಯತರಿಗೆ ಶೇ 7ರಷ್ಟು ಮೀಸಲಾತಿ ನೀಡಲು ಸಂಪುಟ ನಿರ್ಧರಿಸಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶುಕ್ರವಾರ ಹೇಳಿದ್ದರು.

ಶನಿವಾರ ಈ ಬಗ್ಗೆ ಚರ್ಚೆ ಮಾಡಿ ಲೀಗಲ್​ ಟೀಂಗೆ ಕಳುಹಿಸುತ್ತೇವೆ. ಅವರ ಸಲಹೆ ಮೇರೆಗೆ ಹೋರಾಟ ಮುಂದುವರೆಸಬೇಕಾ? ಅಥವಾ ಬೇಡವಾ? ಎಂದು ಕಾರ್ಯಾಕಾರಿಣಿ ಸಭೆ ಬಳಿಕ ತಿಳಿಸುತ್ತೇವೆ ಎಂದು ಬಸವಜಯ ಮೃತ್ಯುಂಜಯ ಸ್ವಾಮೀಜಿ ತಿಳಿಸಿದ್ದಾರೆ.

ಬಿಜೆಪಿಯ ಮಾಜಿ ಸಚಿವ ಬಸನಗೌಡ ಪಾಟೀಲ್ ಯತ್ನಾಳ್‌ ಅವರು ಮಾತನಾಡಿ, ಕಾಂಗ್ರೆಸ್‌ನ ವಿಜಯಾನಂದ ಕಾಶಪ್ಪನವರ, ಕಾನೂನು ಸಮಿತಿ ಸೇರಿದಂತೆ ಸಮಾಜದ ಮುಖಂಡರ ಜತೆ ಚರ್ಚಿಸಿದ ನಂತರವೇ ಧರಣಿ ಮುಂದುವರಿಸುವ ಕುರಿತು ತೀರ್ಮಾನಿಸಲಾಗುವುದು ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ವೆನೆಜುವೆಲಾ ಪರಿಸ್ಥಿತಿ ನಿಮಗೂ ಬರಬಹುದು.. ತಡ ಮಾಡದೇ ನಮ್ ಜೊತೆ ಒಪ್ಪಂದ ಮಾಡ್ಕೊಳ್ಳಿ': ಕ್ಯೂಬಾಗೂ Donald Trump ಎಚ್ಚರಿಕೆ!

ಒಂದು ವಾರದ ಚಿಕಿತ್ಸೆ ಬಳಿಕ ಆಸ್ಪತ್ರೆಯಿಂದ ಸೋನಿಯಾ ಗಾಂಧಿ ಡಿಸ್ಚಾರ್ಜ್!

'ಒಬ್ಬ ಅಲ್ಲ.. ಭಾರತದ ಮೇಲೆ ದಾಳಿಗೆ ಸಾವಿರಾರು ಆತ್ಮಹತ್ಯಾ ಬಾಂಬರ್‌ಗಳು ಸಿದ್ಧ': ಪಾಕ್ ಮೂಲದ ಉಗ್ರ Masood Azhar ಆಡಿಯೋ ವೈರಲ್!

1st ODI: ನ್ಯೂಜಿಲೆಂಡ್ ವಿರುದ್ಧ ಭರ್ಜರಿ ಬ್ಯಾಟಿಂಗ್, ಸಚಿನ್ ತೆಂಡೂಲ್ಕರ್, ಸಂಗಕ್ಕಾರ ದಾಖಲೆ ಮುರಿದ Virat Kohli

ಗಂಗೂಲಿ ಹಿಂದಿಕ್ಕಿದ ವಿರಾಟ್ ಕೊಹ್ಲಿ: ನ್ಯೂಜಿಲೆಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಈ ಮೈಲಿಗಲ್ಲು ಸಾಧಿಸಿದ Kohli

SCROLL FOR NEXT