ಕೆಂಪೇಗೌಡ-ಬಸವೇಶ್ವರಪ್ಪ ಪ್ರತಿಕೃತಿಗಳನ್ನು ನೀಡಿ ಅಮಿತ್ ಶಾ ಅವರನ್ನು ಸನ್ಮಾನಿಸುತ್ತಿರುವ ರಾಜ್ಯ ಬಿಜೆಪಿ ಮುಖಂಡರು 
ರಾಜ್ಯ

ವಿಧಾನಸೌಧದ ಎದುರು ಅಶ್ವಾರೋಹಿ ಬಸವಣ್ಣ, ಕೆಂಪೇಗೌಡರ ಪ್ರತಿಮೆ ಅನಾವರಣಗೊಳಿಸಿದ ಅಮಿತ್ ಶಾ 

ವಿಧಾನಸೌಧ ಮುಂದೆ ಸ್ಥಾಪಿಸಿರುವ ಸಮಾಜ ಪರಿವರ್ತಕ, ಜಗಜ್ಯೋತಿ ಬಸವೇಶ್ವರ ಹಾಗೂ ಬೆಂಗಳೂರು ನಿರ್ಮಾತೃ, ನಾಡಪ್ರಭು ಕೆಂಪೇಗೌಡ ಅವರ ಪ್ರತಿಮೆಗಳನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ, ಮಾ.26 ರಂದು ಅನಾವರಣಗೊಳಿಸಿದರು. 

ಬೆಂಗಳೂರು: ವಿಧಾನಸೌಧ ಮುಂದೆ ಸ್ಥಾಪಿಸಿರುವ ಸಮಾಜ ಪರಿವರ್ತಕ, ಜಗಜ್ಯೋತಿ ಬಸವೇಶ್ವರ ಹಾಗೂ ಬೆಂಗಳೂರು ನಿರ್ಮಾತೃ, ನಾಡಪ್ರಭು ಕೆಂಪೇಗೌಡ ಅವರ ಪ್ರತಿಮೆಗಳನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ, ಮಾ.26 ರಂದು ಅನಾವರಣಗೊಳಿಸಿದರು. 

ವಿಧಾನಸೌಧದ ಆವರಣದಲ್ಲಿರುವ ದೇಶದ ಮೊದಲ ಪ್ರಧಾನಿ ಜವಾಹರ್ ಲಾಲ್ ನೆಹರು ಹಾಗೂ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಪುತ್ಥಳಿ ಮಧ್ಯಭಾಗದಲ್ಲಿ ಈ ಇಬ್ಬರೂ ಮಹಾನೀಯರ ನಾಲ್ಕು ಮೀಟರ್ ಎತ್ತರದ ಅಶ್ವಾರೂಢ ಪ್ರತಿಮೆಗಳು ಸ್ಥಾಪನೆಯಾಗಿವೆ. 

ಸುಮಾರು ರೂ.8 ಕೋಟಿ ವೆಚ್ಚದಲ್ಲಿ ಪ್ರತಿಮೆ ಸಿದ್ಧಗೊಂಡಿದ್ದು, ಕಳೆದ ಜನವರಿಯಲ್ಲಿ ಪ್ರತಿಮೆ ಸ್ಥಾಪನೆ ಸಂಬಂಧ ಶಂಕುಸ್ಥಾಪನೆ ನೆರವೇರಿಸಲಾಗಿತ್ತು.

ಕಾರ್ಯಕ್ರದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕಾರ್ಯಕ್ರಮದಲ್ಲಿ ಸಿಎಂ ಬೊಮ್ಮಾಯಿ, ಕಂದಾಯ ಸಚಿವ ಅಶೋಕ್, ಸುತ್ತೂರು ಶ್ರೀಗಳು,  ಸಿದ್ದಗಂಗಾ ಶ್ರೀಗಳು, ಪೇಜಾವರ ಶ್ರೀಗಳು, ನಿರ್ಮಲಾನಂದನಾಥ ಶ್ರೀಗಳು ಸೇರಿದಂತೆ ಅನೇಕ ಸ್ವಾಮೀಜಿಗಳು, ಗಣ್ಯರು ಭಾಗಿಯಾಗಿದ್ದರು. ಇನ್ನು ರಾಜ್ಯ ಪ್ರವಾಸ ಕೈಗೊಂಡಿರುವ ಅಮಿತ್ ಶಾ, ರಾತ್ರಿ ಬಿಜೆಪಿಯ ಪ್ರಮುಖ ಮುಖಂಡರೊಂದಿಗೆ ಸಭೆ ನಡೆಸಲಿದ್ದಾರೆ. ಈ ಸಭೆಯಲ್ಲಿ ಅಭ್ಯರ್ಥಿಗಳ ಆಯ್ಕೆ ಸಂಬಂಧ ಚರ್ಚೆ ನಡೆಯಲಿದೆ.  

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

ಧರ್ಮಸ್ಥಳ ಪ್ರಕರಣ: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

SCROLL FOR NEXT