ಸಾಂದರ್ಭಿಕ ಚಿತ್ರ 
ರಾಜ್ಯ

ಹಿರಿಯ ಅಧಿಕಾರಿಯಿಂದ ಕಿರುಕುಳ ಆರೋಪ; ರಾಷ್ಟ್ರಪತಿ ದ್ರೌಪದಿ ಮುರ್ಮುಗೆ ಪತ್ರ ಬರೆದ ಬೆಂಗಳೂರು ಪೊಲೀಸರು

ಬೆಂಗಳೂರಿನ ಪೊಲೀಸ್ ಠಾಣೆಯೊಂದರ ಸಿಬ್ಬಂದಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಬರೆದಿರುವ ಪತ್ರ ಸೋಮವಾರ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಕರ್ನಾಟಕ ಪೊಲೀಸರಿಗೆ ತೀವ್ರ ಮುಜುಗರ ಉಂಟು ಮಾಡಿದೆ.

ಬೆಂಗಳೂರು: ಬೆಂಗಳೂರಿನ ಪೊಲೀಸ್ ಠಾಣೆಯೊಂದರ ಸಿಬ್ಬಂದಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಬರೆದಿರುವ ಪತ್ರ ಸೋಮವಾರ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಕರ್ನಾಟಕ ಪೊಲೀಸರಿಗೆ ತೀವ್ರ ಮುಜುಗರ ಉಂಟು ಮಾಡಿದೆ.

ಒಂಬತ್ತು ಪುಟಗಳ ಈ ಪತ್ರವನ್ನು ಕಿರುಕುಳಕ್ಕೆ ಒಳಗಾದ ಸುಬ್ರಹ್ಮಣ್ಯನಗರ ಪೊಲೀಸ್ ಠಾಣೆಯ ಪೊಲೀಸರು ಬರೆದಿದ್ದಾರೆ ಎಂದು ಹೇಳಲಾಗಿದೆ. ಪೊಲೀಸ್ ಇನ್‌ಸ್ಪೆಕ್ಟರ್ ಉಸ್ತುವಾರಿ ಶರಣಗೌಡ ಅವರು ಕೆಳಹಂತದ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಹಣವನ್ನು ಲಪಟಾಯಿಸಿ ತನಗೆ ನೀಡುವಂತೆ ಪೀಡಿಸುತ್ತಿದ್ದಾರೆ ಎಂದು ಆರೋಪಿಸಲಾಗಿದೆ.

ರಜೆಗಾಗಿ ಪೊಲೀಸ್ ಇನ್ಸ್‌ಪೆಕ್ಟರ್‌ರನ್ನು ಸಂಪರ್ಕಿಸಿದಾಗಲೆಲ್ಲಾ ಅವರು, ಭ್ರಷ್ಟಾಚಾರ ಮತ್ತು ಲಂಚದ ಮೂಲಕ ಹಣವನ್ನು ಲಪಟಾಯಿಸಲು ಸಾಧ್ಯವಾದರೆ ಮಾತ್ರ ಅಂತವರು ರಜೆ ಪಡೆಯಬಹುದು ಎನ್ನುತ್ತಾರೆ. ಯಾರೇ ಹಣ ಕೊಟ್ಟರೂ ಅವರಿಗೆ ರಜೆ ಮತ್ತು ಇತರೆ ಸೌಲಭ್ಯಗಳನ್ನು ನೀಡಲಾಗುತ್ತಿದೆ ಎಂದು ಅವರು ಪತ್ರದಲ್ಲಿ ಆರೋಪಿಸಿದ್ದಾರೆ.

ಬೀಟ್ ಪೊಲೀಸರು ತಮಗೆ ಬೀಟ್ ವಾಹನಗಳನ್ನು (ದ್ವಿಚಕ್ರ ವಾಹನಗಳು) ನೀಡಲು ಅಧಿಕಾರಿಗೆ 5,000 ಲಂಚವನ್ನು ನೀಡಬೇಕಾಗಿದೆ. ಪೊಲೀಸ್ ಇನ್ಸ್‌ಪೆಕ್ಟರ್ ತಮ್ಮ ಹೆಂಡತಿಯನ್ನು ಠಾಣೆಗೆ ಕರೆತಂದು, ಚೇಂಬರ್‌ನಲ್ಲಿ ಆಕೆಯೊಂದಿಗೆ ಮಾತುಕತೆ ಮಾಡುತ್ತಾರೆ ಎಂದೂ ಆರೋಪಿಸಲಾಗಿದೆ.

ಪೊಲೀಸ್ ಇನ್ಸ್‌ಪೆಕ್ಟರ್ ತನ್ನ ಮಕ್ಕಳನ್ನು ಇಲಾಖೆಯ ವಾಹನಗಳಲ್ಲಿ ಈಜುಕೊಳಕ್ಕೆ ಕರೆದೊಯ್ಯುತ್ತಾರೆ. ತನಗೆ ಹಣ ವಸೂಲಿ ಮಾಡದ ಸಿಬ್ಬಂದಿಗೆ ಕಿರುಕುಳ ನೀಡುತ್ತಾರೆ. ಋತುಚಕ್ರದ ಸಮಯದಲ್ಲಿ ರಜೆಗಾಗಿ ಮಹಿಳಾ ಸಿಬ್ಬಂದಿ ಅವರನ್ನು ಸಂಪರ್ಕಿಸಿದಾಗ, ರಾಜೀನಾಮೆ ನೀಡಿ ಮನೆಗೆ ಹೋಗುವಂತೆ ಹೇಳುತ್ತಾರೆ. ಇನ್ಸ್‌ಪೆಕ್ಟರ್ ಅವರೊಂದಿಗೆ ಅನುಚಿತವಾಗಿ ವರ್ತಿಸುತ್ತಾರೆ ಮತ್ತು ಮನೆಗೆ ಆಹ್ವಾನಿಸಿದ್ದಾರೆ. ಮೀಟಿಂಗ್‌ಗಳಲ್ಲಿ, ತನ್ನ ಪೋಸ್ಟಿಂಗ್‌ಗಾಗಿ 25 ಲಕ್ಷ ರೂ.ಗಳನ್ನು ನೀಡಿರುವುದಾಗಿ ಬಹಿರಂಗವಾಗಿ ಘೋಷಿಸುತ್ತಾರೆ ಮತ್ತು ಸಿಬ್ಬಂದಿಯ ತೊಂದರೆಗಳನ್ನು ಕೇಳಲು ಇಲ್ಲಿಗೆ ಬಂದಿಲ್ಲ ಎನ್ನುತ್ತಾರೆ ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ.

ಕಿರುಕುಳದಿಂದಾಗಿ ಪೊಲೀಸ್ ಠಾಣೆಯ ಸಿಬ್ಬಂದಿಯೊಬ್ಬರು ಆತ್ಮಹತ್ಯೆಗೆ ಯತ್ನಿಸಿದ್ದರು ಎಂದಿರುವ ಪತ್ರ ವೈರಲ್ ಆಗಿದ್ದು, ಇಲಾಖೆಯಲ್ಲಿನ ಭ್ರಷ್ಟಾಚಾರ ಮತ್ತು ಪೋಸ್ಟಿಂಗ್‌ಗಾಗಿ ಲಂಚದ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ. ಆಡಳಿತಾರೂಢ ಬಿಜೆಪಿ ಸರ್ಕಾರದತ್ತ ಬೆರಳು ತೋರಿಸಲಾಗುತ್ತಿದೆ.

ಪತ್ರದಲ್ಲಿ ವಿವಿಧ ಬಾರ್‌ಗಳು, ಮಾಲ್‌ಗಳು ಮತ್ತು ಪಬ್‌ಗಳಿಗೆ ನಿಗದಿ ಪಡಿಸಿರುವ ಲಂಚದ ಮೊತ್ತದ ವಿವರಗಳನ್ನು ತಿಳಿಸಲಾಗಿದೆ. ಪೊಲೀಸ್ ಠಾಣೆಯಲ್ಲಿ ದ್ವಿಚಕ್ರ ವಾಹನ ಕಳ್ಳತನಕ್ಕೆ ಎಫ್‌ಐಆರ್ ದಾಖಲಿಸಲು 15 ಸಾವಿರ ಹಾಗೂ ಲ್ಯಾಪ್‌ಟಾಪ್ ಕಳ್ಳತನಕ್ಕೆ 5 ಸಾವಿರ ರೂಪಾಯಿ ವಸೂಲಿ ಮಾಡಲಾಗಿದೆ ಎಂದು ಪತ್ರದಲ್ಲಿ ಆರೋಪಿಸಿದ್ದಾರೆ.

ಸುಳ್ಳಿನ ಕಳ್ಳತನ ಪ್ರಕರಣವೊಂದರಲ್ಲಿ ಬಂಧನಕ್ಕೊಳಗಾದ ಯುವಕನ ಆತ್ಮಹತ್ಯೆ ಪ್ರಕರಣದ ಬಗ್ಗೆಯೂ ಪತ್ರದಲ್ಲಿ ಉಲ್ಲೇಖಿಸಲಾಗಿದೆ. ಆತನಿಂದ 3 ಲಕ್ಷ ರೂ.ಗಳಿಗೆ ಬೇಡಿಕೆ ಇಡಲಾಗಿತ್ತು.  ಆತ್ಮಹತ್ಯೆಯ ನಂತರ, ಪ್ರಕರಣವನ್ನು ಮುಚ್ಚಿಹಾಕಲು ಇನ್ಸ್‌ಪೆಕ್ಟರ್ 15 ಲಕ್ಷ ರೂ. ಖರ್ಚು ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.

ಹೀಗಾಗಿ, ಸಾಮೂಹಿಕವಾಗಿ ಬೇರೆ ಠಾಣೆಗೆ ವರ್ಗಾವಣೆ ಮಾಡುವಂತೆ ಸಂತ್ರಸ್ತ ಪೊಲೀಸ್ ಸಿಬ್ಬಂದಿ ರಾಷ್ಟ್ರಪತಿಗೆ ಮನವಿ ಮಾಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

2030 Commonwealth Games: ಭಾರತದ ಬಿಡ್‌ಗೆ ಕ್ಯಾಬಿನೆಟ್ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

Theaterisation: 'ಥಿಯೇಟರ್ ಕಮಾಂಡ್‌' ರಚನೆ: ಪ್ರಯತ್ನದಲ್ಲಿ ಪ್ರಗತಿ ಸಾಧಿಸಲಾಗುತ್ತಿದೆಯೇ? ಆಡ್ಮಿರಲ್ ಡಿಕೆ ತ್ರಿಪಾಠಿ ಹೇಳಿದ್ದು ಹೀಗೆ...

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

'ಧಮ್ ಇದ್ರೆ.. ಸನಾತನಧರ್ಮ, ಬಿಹಾರಿಗಳ ಕುರಿತ ಹೇಳಿಕೆ ಮತ್ತೆ ಹೇಳ್ತೀರಾ?': MK Stalin ಗೆ ಬಿಜೆಪಿ-ಜೆಡಿಯು ಸವಾಲು!

SCROLL FOR NEXT