ಅಂಬರೀಶ್ ರಸ್ತೆ ನಾಮಫಲಕ ಅನಾವರಣಗೊಳಿಸಿದ ಸಿಎಂ ಬೊಮ್ಮಾಯಿ 
ರಾಜ್ಯ

ಬೆಂಗಳೂರು: ಡಾ. ಎಂ.ಹೆಚ್. ಅಂಬರೀಶ್ ರಸ್ತೆ, ನಾಮಫಲಕ ಅನಾವರಣಗೊಳಿಸಿದ ಸಿಎಂ ಬೊಮ್ಮಾಯಿ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಂದು ಬೆಂಗಳೂರಿನ ಮೌರ್ಯ ವೃತ್ತದಿಂದ ಬಸವೇಶ್ವರ ವೃತ್ತದ ವರೆಗಿನ ರೇಸ್ ಕೋರ್ಸ್ ರಸ್ತೆಗೆ ರೆಬೆಲ್‌ ಸ್ಟಾರ್‌ ಡಾ.ಎಂ.ಹೆಚ್ ಅಂಬರೀಶ್ ರಸ್ತೆ ಎಂದು ನಾಮಕರಣ ಮಾಡಿ ನಾಮ ಫಲಕ ಅನಾವರಣ ಗೊಳಿಸಿದರು.

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಂದು ಬೆಂಗಳೂರಿನ ಮೌರ್ಯ ವೃತ್ತದಿಂದ ಬಸವೇಶ್ವರ ವೃತ್ತದ ವರೆಗಿನ ರೇಸ್ ಕೋರ್ಸ್ ರಸ್ತೆಗೆ ರೆಬೆಲ್‌ ಸ್ಟಾರ್‌ ಡಾ.ಎಂ.ಹೆಚ್ ಅಂಬರೀಶ್ ರಸ್ತೆ ಎಂದು ನಾಮಕರಣ ಮಾಡಿ ನಾಮಫಲಕ ಅನಾವರಣಗೊಳಿಸಿದರು.

ಈ ಸಂದರ್ಭದಲ್ಲಿ ಸಂಸದೆ ಸುಮಲತಾ ಅಂಬರೀಶ್‌, ಪುತ್ರ ಅಭಿಷೇಕ್‌ ಅಂಬರೀಶ್‌, ನಟ ರಾಘವೇಂದ್ರ ರಾಜ್‌ ಕುಮಾರ್‌, ಫಿಲಂ ಚೇಂಬರ್‌ ಅಧ್ಯಕ್ಷ ಭಾ.ಮ ಹರೀಶ್‌, ರಾಕ್‌ ಲೈನ್‌ ವೆಂಕಟೇಶ್‌, ಚಿನ್ನೆಗೌಡರು ಸೇರಿದಂತೆ ಮತ್ತಿತರು ಉಪಸ್ಥಿತರಿದ್ದರು.

ನಂತರ ಮಾತನಾಡಿದ ಮುಖ್ಯಮಂತ್ರಿ, ರೇಸ್ ಕೋರ್ಸ್ ರಸ್ತೆಯನ್ನು ಅಂಬರೀಶ್ ಅವರ ಹೆಸರಿನಲ್ಲಿ ಅತ್ಯಂತ ಸಂತೋಷದಿಂದ ನಾಮಕರಣ ಮಾಡಿದ್ದೇವೆ. ಇದು ಅವರು ಹೆಚ್ಚು ಓಡಾಡಿದ ಸ್ಥಳ. ಎಲ್ಲ ಅಭಿಮಾನಿಗಳ ಒತ್ತಾಸೆ ಮೇರೆಗೆ ಇವರ ಹೆಸರನ್ನು ಇಟ್ಟಿದ್ದೇವೆ. ಹಲವು ಪ್ರತಿಭೆಯಿರುವ ಮೇರು ವ್ಯಕ್ತಿತ್ವ ಅವರದ್ದು. ಸಿನಿಮಾದಲ್ಲಿ ಸಹಜವಾಗಿ ನಟನೆ ಮಾಡುತ್ತಿದ್ದರು. ಜನರನ್ನು ಹಿಡಿದಿಟ್ಟುಕೊಳ್ಳುವ ವ್ಯಕ್ತಿತ್ವ ಅವರಿಗಿತ್ತು. ಕರ್ನಾಟಕದ ರೆಬಲ್ ಸ್ಟಾರ್, ಎಲ್ಲರ ಮನಸ್ಸನ್ನು ಗೆದ್ದಂತಹ ನೇರ ದಿಟ್ಟ, ನಿರಂತರ ಅಂಬರೀಶ್ ಅವರ ಹೆಸರು ಚಿರಸ್ಥಾಯಿಯಾಗಿ ಉಳಿಯಲಿ ಎಂದರು. 

ರೀಲ್ ಆ್ಯಂಡ್ ರಿಯಲ್ ಲೈಫ್ ಎರಡು ಒಂದೆಯಾಗಿದ್ದು, ನೇರ ವ್ಯಕ್ತಿತ್ವ ಅವರದ್ದಾಗಿತ್ತು. ಕ್ರೀಡೆಯಲ್ಲೂ ಪ್ರತಿಭೆಯನ್ನು ಹೊಂದಿದ್ದ ಅವರು, ಸಾರ್ವಜನಿಕ ಜೀವನಕ್ಕೆ ಬಂದಮೇಲೆ ವಸತಿ ಸಚಿವರಾಗಿ ಬಹಳ ಒಳ್ಳೆಯ ಕೆಲಸ ಮಾಡಿದ್ದಾರೆ. ಕಾವೇರಿ ವಿಚಾರ ಬಂದಾಗ ಕೇಂದ್ರ ಸಚಿವ ಸ್ಥಾನಕ್ಕೆ ರಾಜೀನಾಮೆ ಕೊಟ್ಟವರು. ಅಧಿಕಾರ ಅವರನ್ನು ಹುಡುಕಿಕೊಂಡು ಬರುತ್ತಿತ್ತು ಎಂದು ತಿಳಿಸಿದರು.

ನನಗೆ ಇವತ್ತು ಬಹಳ ಸಂತೋಷವಾಗಿದೆ. ಅಂಬರೀಶ್ ಅವರು ನನ್ನ ಮಿತ್ರರು. ಅವರ ಜೀವನ ತೆರೆದ ಪುಸ್ತಕ. ಹಲವಾರು ಬಾರಿ ಬೇಟಿಯಾಗಬೇಕು ಅಂದಾಗ ಅಲ್ಲೇ ರೇಸ್ ಕೋರ್ಸ್ ನಲ್ಲಿ ಇರುತ್ತೇನೆ ಬಾರಯ್ಯ ಎನ್ನುವವರು. ಅವರ ಹೆಸರನ್ನು ಬಿಟ್ಟು ಬೇರೆ ಯಾರ ಹೆಸರು ಕೂಡ ಈ ರಸ್ತೆಗೆ ಸೂಕ್ತವಲ್ಲ ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮಂಡ್ಯ; ರಾಸಾಯನಿಕ ಕಾರ್ಖಾನೆಯಲ್ಲಿ ಸ್ಫೋಟ ಸಂಭವಿಸಿ ಇಬ್ಬರು ಕಾರ್ಮಿಕರು ಸಾವು, ನಾಲ್ವರಿಗೆ ಗಂಭೀರ ಗಾಯ

T20 World Cup 2026: ಪಾಕ್ ವಿರುದ್ಧದ ಪಂದ್ಯದಲ್ಲಿ 'ಹ್ಯಾಂಡ್ ಶೇಕ್' ಮಾಡದಿರಲು ಟೀಂ ಇಂಡಿಯಾ ನಿರ್ಧಾರ!

ಬಾಂಗ್ಲಾದಲ್ಲಿ BNP ಅಧಿಕಾರ; ಹೊಸ ಸರ್ಕಾರದಲ್ಲಿ ಮುಹಮ್ಮದ್ ಯೂನಸ್ ಗೂ ಮಹತ್ವದ ಸ್ಥಾನ? ರೆಹಮಾನ್ ಬೆಂಬಲ?

Pak ಫೀಲ್ಡ್ ಮಾರ್ಷಲ್ ಮುನೀರ್​ಗೆ ಜಾಗತಿಕ ಮುಖಭಂಗ; ಮ್ಯೂನಿಚ್ ಭದ್ರತಾ ಸಮ್ಮೇಳನದ ಗೇಟ್‌ನಲ್ಲೇ ತಡೆದ ಸಿಬ್ಬಂದಿ, Video!

ಕ್ಯಾಲಿಫೋರ್ನಿಯಾದಲ್ಲಿ ನಾಪತ್ತೆಯಾಗಿದ್ದ ಕರ್ನಾಟಕ ಮೂಲದ ವಿದ್ಯಾರ್ಥಿ ಸಾಕೇತ್ ಶ್ರೀನಿವಾಸಯ್ಯ: 6 ದಿನಗಳ ನಂತರ ಶವ ಪತ್ತೆ

SCROLL FOR NEXT