ಗದಗ ಜಿಲ್ಲೆಯ ಕೋಟುಮಚಗಿಯಲ್ಲಿ ರೈತರು ಹಸುವಿನ ಗೊಬ್ಬರವನ್ನು ಲೋಡ್ ಮಾಡುತ್ತಿರುವುದು. 
ರಾಜ್ಯ

ಸಗಣಿ ಎಂದು ಮೂಗು ಮುರಿಯದಿರಿ: ಸಾವಯವ ಗೊಬ್ಬರದತ್ತ ರೈತರ ಒಲವು, ಸಗಣಿಗೂ ಬಂತು ಬಂಗಾರದ ಬೆಲೆ!

ಸಾವಯವ ಕೃಷಿಗೆ ಒತ್ತು ನೀಡುವ ಜತೆಗೆ, ರಾಸಾಯನಿಕಗಳಿಲ್ಲದ ಉತ್ಪನ್ನಗಳಿಗೆ ಮಾರುಕಟ್ಟೆಯಲ್ಲಿ ಆದ್ಯತೆ ಸಿಗುತ್ತಿರುವ ಹಿನ್ನೆಲೆಯಲ್ಲಿ ರೈತರ ಒಲವು ಸಹಜವಾಗಿಯೇ ಸಗಣಿ ಅಥವಾ ಕೊಟ್ಟಿಗೆ ಗೊಬ್ಬರದತ್ತ ವಾಲುತ್ತಿದೆ. ಹೀಗಾಗಿ, ಈಗ ಕೊಟ್ಟಿಗೆ ಗೊಬ್ಬರಕ್ಕೆ ಎಲ್ಲಿಲ್ಲದ ಬೇಡಿಕೆ ಹಾಗೂ ಬಂಗಾರದ ಬೆಲೆ ಬಂದಿದೆ.

ಗದಗ: ಸಾವಯವ ಕೃಷಿಗೆ ಒತ್ತು ನೀಡುವ ಜತೆಗೆ, ರಾಸಾಯನಿಕಗಳಿಲ್ಲದ ಉತ್ಪನ್ನಗಳಿಗೆ ಮಾರುಕಟ್ಟೆಯಲ್ಲಿ ಆದ್ಯತೆ ಸಿಗುತ್ತಿರುವ ಹಿನ್ನೆಲೆಯಲ್ಲಿ ರೈತರ ಒಲವು ಸಹಜವಾಗಿಯೇ ಸಗಣಿ ಅಥವಾ ಕೊಟ್ಟಿಗೆ ಗೊಬ್ಬರದತ್ತ ವಾಲುತ್ತಿದೆ. ಹೀಗಾಗಿ, ಈಗ ಕೊಟ್ಟಿಗೆ ಗೊಬ್ಬರಕ್ಕೆ ಎಲ್ಲಿಲ್ಲದ ಬೇಡಿಕೆ ಹಾಗೂ ಬಂಗಾರದ ಬೆಲೆ ಬಂದಿದೆ.

ಸಗಣಿಗೆ ಬೇಡಿಕೆ ಹೆಚ್ಚಾಗಿರವ ಹಿನ್ನೆಲೆಯಲ್ಲಿ ಒಂದು ಕಾಲದಲ್ಲಿ ಜಾನುವಾರು ಸಾಕಲಾಗದೆ ಮಾರುತ್ತಿದ್ದವರೆಲ್ಲ ಈಗ ಮತ್ತೆ ಕೊಟ್ಟಿಗೆ ತುಂಬ ದನ, ಎಮ್ಮೆಗಳನ್ನು ಕಟ್ಟಿಕೊಂಡು, ಗೊಬ್ಬರ ತಯಾರಿಸುವ ಕೆಲಸ ಮಾಡುತ್ತಿದ್ದಾರೆ.

ಕೊಟ್ಟಿಗೆ ಗೊಬ್ಬರಕ್ಕಾಗಿ ರೈತರು ಮನೆ ಮನೆಗೆ ಎಡತಾಕುತ್ತ, ಈ ಸಲ ಸಗಣಿ ಗೊಬ್ಬರ ನಮಗೇ ಕೊಡಿ ಎಂದು ದುಂಬಾಲು ಬೀಳುತ್ತಿದ್ದಾರೆ.

ಕಳೆದ ವರ್ಷ ಗದಗ ಸೇರಿದಂತೆ ರಾಜ್ಯದ ಹಲವೆಗೆ ಭಾರಿ ಮಳೆ ಸುರಿದಿತ್ತು. ಹೀಗಾಗಿ ರೈತರು ಅಪಾರ ಪ್ರಮಾಣ ನಷ್ಟ ಅನುಭವಿಸಿದ್ದು. ಈ ಸಂದರ್ಭದಲ್ಲಿ ಮಣ್ಣಿನ ಫಲವತ್ತತೆ ಹೆಚ್ಚಿಸಿಕೊಳ್ಳಲು ಗೋಮಾಳದ ಗೊಬ್ಬರದ ಮೊರೆ ಹೋಗುತ್ತಿದ್ದಾರೆ. ಹಸುವಿನ ಸಗಣಿ ಬೇಡಿಕೆ ಹೆಚ್ಚಾಗಿದ್ದು, ಒಂದು ಟ್ರ್ಯಾಕ್ಟರ್ ಹಸುವಿನ ಸಗಣಿಗೆ ಈ ಹಿಂದೆ 3,000 ರೂ ಇತ್ತು. ಆದರೀಗ 6,000 ರಿಂದ 8,000 ರೂಗೆ ಹೆಚ್ಚಾಗಿದೆ.

ಹೆಚ್ಚಿನ ಇಳುವರಿಗೆ ಮಣ್ಣಿನ ಫಲವತ್ತತೆ ಬಹಳ ಮುಖ್ಯ ಎಂಬುದನ್ನು ಅರಿತಿರುವ ರೈತರು ಸಾವಯವ ಗೊಬ್ಬರಕ್ಕೆ ಹೆಚ್ಚಿನ ಮಹತ್ವ ನೀಡುತ್ತಿದ್ದಾರೆ. ಹೀಗಾಗಿ ಈ ಋತುವಿನಲ್ಲಿ ಉತ್ತಮ ಫಸಲು ಪಡೆಯುವ ನಿರೀಕ್ಷೆಯಲ್ಲಿರುವ ರೈತರು ಮಣ್ಣಿನ ಪರೀಕ್ಷೆಗಳನ್ನು ನಡೆಸುತ್ತಿದ್ದಾರೆ.

ನಿರಂತರ ಮಳೆಯಿಂದಾಗಿ ಮಣ್ಣಿನ ಸವೆತ ಹೆಚ್ಚಾಗುತ್ತಿದೆ. ಇದು ಮಣ್ಣಿನ ಗುಣಮಟ್ಟದ ಮೇಲೆ ಪರಿಣಾಮ ಬೀರುತ್ತದೆ. ಹೀಗಾಗಿ ಮಣ್ಣಿನ ಗುಣಮಟ್ಟ ಕಾಯ್ದುಕೊಳ್ಳಲು ಸಾವಯವ ಗೊಬ್ಬರ ಬಳಸುವಂತೆ ಕೃಷಿ ತಜ್ಞರು ಹಾಗೂ ಕೃಷಿ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.

ಈ ನಡುವೆ ಮುದ್ದೆ ಚರ್ಮ ರೋಗ ರೈತರ ತಲೆತೋರಿದೆ. ಸಾಕಷ್ಟು ರೈತರು ಜಾನುವಾರುಗಳ ಬಳಕೆಯನ್ನೇ ನಿಲ್ಲಿಸಿದ್ದು, ಚಿಕಿತ್ಸೆಗಳು ದೊರೆಯದ ಕಾರಣ ರೋಗಗ್ರಸ್ಥ ಜಾನುವಾರುಗಳನ್ನು ಗೋಶಾಲೆಗಳಿಗೆ ಕಳುಹಿಸಿದ್ದಾರೆಂದು ತಿಳಿದುಬಂದಿದೆ.

ಸಾವಯವ ಗೊಬ್ಬರದ ಬಗ್ಗೆ ಜಾಗೃತಿ ಮೂಡಿಸುತ್ತಿರುವ ರೈತ ವೀರೇಶ ನೇಗಲಿ ಮಾತನಾಡಿ, ನೀರಾವರಿ ಸೌಲಭ್ಯವಿರುವ ರೈತರು ಹಸುವಿನ ಸಗಣಿ ಸರಿಯಾಗಿ ಮಿಶ್ರಣವಾಗುವಂತೆ ಮಣ್ಣಿನಲ್ಲಿ ನೀರು ಚಿಮುಕಿಸಬೇಕು. ಇಲ್ಲವಾದರೆ ಸಗಣಿ ಕೆಸರಿನಲ್ಲಿ ಬೆರೆತು ವ್ಯರ್ಥವಾಗುತ್ತದೆ ಎಂದು ಮಾಹಿತಿ ನೀಡಿದ್ದಾರೆ.

ಈ ನಿಟ್ಟಿನಲ್ಲಿ ಸಮಾನ ಮನಸ್ಕ ರೈತರ ಗುಂಪೊಂದು ನರೇಗಲ್, ತೋಟಗಂಟಿ, ಕೋಚಲಾಪುರ, ಡಿ.ಎಸ್.ಹಡಗಲಿ, ಬೂದಿಹಾಳ್, ಜಕ್ಕಲಿ ಮತ್ತಿತರ ಗ್ರಾಮಗಳಿಗೆ ಭೇಟಿ ನೀಡುತ್ತಿದ್ದು, ರೈತರಿಗೆ ಮಾಹಿತಿ ನೀಡುವ ಕೆಲಸ ಮಾಡುತ್ತಿದೆ ಎಂದು ಹೇಳಿದ್ದಾರೆ.

ಗದಗದ ಕೃಷಿ ಇಲಾಖೆಯ ಅಧಿಕಾರಿಯೊಬ್ಬರು ಮಾತನಾಡಿ, ಅನೇಕ ರೈತರು ಸಾವಯವ ಗೊಬ್ಬರದತ್ತ ಮುಖ ಮಾಡುತ್ತಿದ್ದಾರೆ. ಒಮ್ಮೆ ಮಳೆಯಾದರೂ ಮಣ್ಣಿನ ಜೊತೆಗೆ ಹಸುವಿನ ಸಗಣಿಯನ್ನು ಸರಿಯಾದ ರೀತಿಯಲ್ಲಿ ಮಿಶ್ರಣ ಮಾಡುವಂತೆ ತಿಳಿಸುತ್ತಿದ್ದೇವೆ. ಯಾವುದೇ ಸಹಾಯಕ್ಕಾಗಿ ರೈತರು ತಮ್ಮ ಹತ್ತಿರದ ಕೃಷಿ ಇಲಾಖೆ ಕಚೇರಿಯನ್ನು ಸಂಪರ್ಕಿಸುವಂತೆಯೂ ತಿಳಿಸಲಾಗಿದೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ದಿನದ ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥರು ಹಿಂಗ್ಯಾಕಂದ್ರು?

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟದ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

Theaterisation: 'ಥಿಯೇಟರ್ ಕಮಾಂಡ್‌' ರಚನೆ: ಪ್ರಯತ್ನದಲ್ಲಿ ಪ್ರಗತಿ ಸಾಧಿಸಲಾಗುತ್ತಿದೆಯೇ? ಆಡ್ಮಿರಲ್ ಡಿಕೆ ತ್ರಿಪಾಠಿ ಹೇಳಿದ್ದು ಹೀಗೆ...

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

SCROLL FOR NEXT