ಆನೆ ದಾಳಿ 
ರಾಜ್ಯ

ಕೊಡಗಿನಲ್ಲಿ ಕಾಡಾನೆ ದಾಳಿ; ಬೆಳೆ ಉಳಿಸಿಕೊಳ್ಳಲು ಹೋದ ರೈತನಿಗೆ ಗಂಭೀರ ಗಾಯ

ಜಮೀನಿಗೆ ನುಗ್ಗಿದ ಕಾಡಾನೆಯಿಂದ ಬೆಳೆ ಉಳಿಸಿಕೊಳ್ಳುವ ಹೋರಾಟದಲ್ಲಿ ಆನೆ ದಾಳಿಯಿಂದ ರೈತ ಗಾಯಗೊಂಡಿರುವ ಘಟನೆ ಕೊಡಗಿನಲ್ಲಿ ನಡೆದಿದೆ.

ಮಡಿಕೇರಿ: ಜಮೀನಿಗೆ ನುಗ್ಗಿದ ಕಾಡಾನೆಯಿಂದ ಬೆಳೆ ಉಳಿಸಿಕೊಳ್ಳುವ ಹೋರಾಟದಲ್ಲಿ ಆನೆ ದಾಳಿಯಿಂದ ರೈತ ಗಾಯಗೊಂಡಿರುವ ಘಟನೆ ಕೊಡಗಿನಲ್ಲಿ ನಡೆದಿದೆ.

ಕೊಡಗಿನ  ಕುಶಾಲನಗರ ತಾಲೂಕಿನ ಹಾರಂಗಿ ಸಮೀಪದ ಅಟ್ಟೂರು ಗ್ರಾಮ ವ್ಯಾಪ್ತಿಯಲ್ಲಿ ಭಾನುವಾರ ರಾತ್ರಿ ಈ ಘಟನೆ ನಡೆದಿದ್ದು, ಬೆಳೆ ಉಳಿಸಿಕೊಳ್ಳಲು ಮುಂದಾದ ರೈತನ ಮೇಲೆ ಕಾಡಾನೆ ದಾಳಿ ನಡೆಸಿ ಘಾಸಿಗೊಳಿಸಿದೆ. ಬೆಳ್ಳಿಪ್ಪಾಡಿ ಲೋಕೇಶ್ ಎಂಬ ರೈತ ಗಾಯಗೊಂಡಿದ್ದು,  ಲೋಕೇಶ್ ತನ್ನ ಜಮೀನಿನಲ್ಲಿ ಸಿಹಿ ಗೆಣಸು ಬೆಳೆ ಬೆಳೆದಿದ್ದರು. ಬೆಳೆಗಳು ಇಳುವರಿ ಹಂತದಲ್ಲಿದ್ದವು. ಆದರೆ, ಭಾನುವಾರ ರಾತ್ರಿ 8 ಗಂಟೆ ಸುಮಾರಿಗೆ ಲೋಕೇಶ್ ಅವರ ಜಮೀನಿಗೆ ಕಾಡು ಆನೆಯೊಂದು ನುಗ್ಗಿರುವ ಬಗ್ಗೆ ನೆರೆಹೊರೆಯವರು ಮಾಹಿತಿ ನೀಡಿದ್ದಾರೆ. 

ಘಟನೆಯಿಂದ ಆತಂಕಗೊಂಡ ಲೋಕೇಶ್ ಟಾರ್ಚ್ ಲೈಟ್ ಹಿಡಿದುಕೊಂಡು ಮನೆಯಿಂದ ಕೃಷಿ ಜಮೀನಿಗೆ ತೆರಳಿದ್ದರು. ಈ ವೇಳೆ ಕಾಡಾನೆ ಮರಿ ಎದುರಾದಾಗ ಆನೆ ಮರಿ ಅವರನ್ನು ಜಮೀನಿನಿಂದ ಓಡಿಸಲು ಯತ್ನಿಸಿತು. ಅಲ್ಲದೆ ಅವರ ಮೇಲೆ ದಾಳಿ ಮಾಡಿ ಲೋಕೇಶ್‌ ಅವರನ್ನು ಕಾಲಿನಿಂದ ತುಳಿದು, ದೂರಕ್ಕೆ ಎಸೆದಿದೆ. ಆನೆ ದಾಳಿಯಿಂದ ಲೊಕೇಶ್ ಅವರ ಕಾಲಿಗೆ ಗಂಭೀರ ಗಾಯಗಳಾಗಿದ್ದು, ಅವರ ಕಿಡ್ನಿಗೂ ಹಾನಿಯಾಗಿದೆ ಎಂದು ಮೂಲಗಳು ದೃಢಪಡಿಸಿವೆ. 

ಈ ಪ್ರದೇಶದಲ್ಲಿ ಆನೆಗಳ ಚಲನವಲನದ ಬಗ್ಗೆ ಎಚ್ಚೆತ್ತ ಅರಣ್ಯ ಇಲಾಖೆ ಸಿಬ್ಬಂದಿ ಸ್ಥಳಕ್ಕಾಗಮಿಸಿ ಗಾಯಾಳು ಲೋಕೇಶ್‌ನನ್ನು ಮಡಿಕೇರಿಯ ಜಿಲ್ಲಾಸ್ಪತ್ರೆಗೆ ರವಾನಿಸಿದ್ದಾರೆ. ಲೋಕೇಶ್ ಇದೀಗ ಉತ್ತಮ ಚಿಕಿತ್ಸೆಗಾಗಿ ಮೈಸೂರಿನ ಖಾಸಗಿ ಆಸ್ಪತ್ರೆಗೆ ರವಾನಿಸಲಾಗಿದೆ. ಅಧಿಕಾರಿಗಳ ತ್ವರಿತ ಸ್ಪಂದನೆಗೆ ಗ್ರಾಮಸ್ಥರು ಮೆಚ್ಚುಗೆ ವ್ಯಕ್ತಪಡಿಸಿದ್ದು, ಹೆಚ್ಚುತ್ತಿರುವ ಮನುಷ್ಯ-ಆನೆ ಸಂಘರ್ಷಕ್ಕೆ ಶಾಶ್ವತ ಪರಿಹಾರ ನೀಡಬೇಕು ಎಂದು ಒತ್ತಾಯಿಸಿದ್ದಾರೆ.

ಅರಣ್ಯ ಪ್ರದೇಶದಲ್ಲಿ ಮೇವಿನ ಮರಗಳನ್ನು ಬೆಳೆಸುವುದರಿಂದ ಗ್ರಾಮಗಳಿಗೆ ಆನೆಗಳ ಓಡಾಟ ನಿಯಂತ್ರಿಸಲು ಸಹಕಾರಿಯಾಗಲಿದೆ ಎಂಬ ಅಭಿಪ್ರಾಯ ವ್ಯಕ್ತಪಡಿಸಿದ ಅವರು, ಅರಣ್ಯ ಇಲಾಖೆಯು ಅರಣ್ಯದ ಅಂಚಿನಲ್ಲಿ ಸೋಲಾರ್ ಬೇಲಿ ಮತ್ತು ಟ್ರೆಂಚ್‌ಗಳನ್ನು ಮುಚ್ಚಬೇಕು ಎಂದು ಒತ್ತಾಯಿಸಿದ್ದಾರೆ.
 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel