ಶಿಕಾರಿಪುರದಲ್ಲಿ ಬಂಜಾರ ಸಮುದಾಯದ ಪ್ರತಿಭಟನೆ 
ರಾಜ್ಯ

ಎಸ್‌ಸಿಗಳಿಗೆ ಒಳಮೀಸಲಾತಿ ವಿರುದ್ಧ ಬಂಜಾರ ಸಮುದಾಯದ ಪ್ರತಿಭಟನೆ; ಶಿಕಾರಿಪುರದಲ್ಲಿ ನಿಷೇಧಾಜ್ಞೆ ಜಾರಿ

ಶಿಕಾರಿಪುರದಲ್ಲಿ ಸೋಮವಾರ ಬಿಎಸ್ ಯಡಿಯೂರಪ್ಪ ಅವರ ಮನೆಯನ್ನು ಗುರಿಯಾಗಿಸಿಕೊಂಡು ಬಂಜಾರ ಸಮುದಾಯದ ಸದಸ್ಯರು ಕಲ್ಲು ತೂರಾಟ ನಡೆಸಿದರು. ರಾಜ್ಯ ಸರ್ಕಾರವು ಪರಿಶಿಷ್ಟ ಸಮುದಾಯಗಳಿಗೆ (ಎಸ್‌ಸಿ) ಒಳ ಮೀಸಲಾತಿ ಘೋಷಿಸಿರುವುದನ್ನು ವಿರೋಧಿಸಿ ನಡೆಸುತ್ತಿರುವ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದ್ದು, ಪಟ್ಟಣದಲ್ಲಿ ನಿಷೇಧಾಜ್ಞೆ (ಸೆಕ್ಷನ್‌ 144) ಜಾರಿಗೊಳಿಸಲಾಗಿದೆ.

ಶಿವಮೊಗ್ಗ: ಜಿಲ್ಲೆಯ ಶಿಕಾರಿಪುರದಲ್ಲಿ ಸೋಮವಾರ ಬಿಜೆಪಿ ನಾಯಕ ಬಿಎಸ್ ಯಡಿಯೂರಪ್ಪ ಅವರ ಮನೆಯನ್ನು ಗುರಿಯಾಗಿಸಿಕೊಂಡು ಬಂಜಾರ ಸಮುದಾಯದ ಸದಸ್ಯರು ಕಲ್ಲು ತೂರಾಟ ನಡೆಸಿದರು. ರಾಜ್ಯ ಸರ್ಕಾರವು ಪರಿಶಿಷ್ಟ ಸಮುದಾಯಗಳಿಗೆ (ಎಸ್‌ಸಿ) ಒಳ ಮೀಸಲಾತಿ ಘೋಷಿಸಿರುವುದನ್ನು ವಿರೋಧಿಸಿ ನಡೆಸುತ್ತಿರುವ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದ್ದು, ಪಟ್ಟಣದಲ್ಲಿ ನಿಷೇಧಾಜ್ಞೆ (ಸೆಕ್ಷನ್‌ 144) ಜಾರಿಗೊಳಿಸಲಾಗಿದೆ.

ಪ್ರತಿಭಟನೆಯಲ್ಲಿ ಕೆಲವು ಪೊಲೀಸರು ಗಾಯಗೊಂಡಿದ್ದಾರೆ. ಮಹಿಳೆಯರು ಸೇರಿದಂತೆ ಹೆಚ್ಚಿನ ಸಂಖ್ಯೆಯ ಪ್ರತಿಭಟನಾಕಾರರನ್ನು ಚದುರಿಸಲು ಪೊಲೀಸರು ಲಾಠಿ ಪ್ರಹಾರ ನಡೆಸಿದರು. ಲಮಾಣಿ ಅಥವಾ ಲಂಬಾಣಿ ಎಂದು ಕರೆಯಲ್ಪಡುವ ಬಂಜಾರ ಸಮುದಾಯದ ಕೆಲವರು ಗಾಯಗೊಂಡಿದ್ದಾರೆ.

ಬಹುತೇಕ ಯುವಕರು ಯಡಿಯೂರಪ್ಪ ಅವರ ಮನೆ ಬಳಿ ನುಗ್ಗಿ ಕಲ್ಲು ತೂರಾಟ ನಡೆಸಿ, ಕಿಟಕಿ ಗಾಜುಗಳಿಗೆ ಹಾನಿ ಮಾಡಿದ್ದು, ಪೊಲೀಸರು ಕ್ರಮ ಕೈಗೊಂಡರು. ಪರಿಸ್ಥಿತಿ ನಿಯಂತ್ರಣ ಮೀರುತ್ತಿರುವುದನ್ನು ಗಮನಿಸಿ ಹೆಚ್ಚುವರಿ ಪಡೆಗಳನ್ನು ಸ್ಥಳಕ್ಕೆ ಕರೆಸಲಾಯಿತು.

ಬಂಜಾರ ಸಮುದಾಯಕ್ಕೆ ಸೇರಿದ ಪರಿಶಿಷ್ಟ ಜಾತಿಗಳಿಗೆ 'ಕಡಿಮೆ' ಮೀಸಲಾತಿ ನೀಡಲಾಗಿದೆ ಎಂದು ಆರೋಪಿಸಿ ಪ್ರತಿಭಟನಾಕಾರರು ತಮ್ಮ ಆಕ್ರೋಶವನ್ನು ಹೊರಹಾಕಿದರು.

ಪರಿಶಿಷ್ಟ ಸಮುದಾಯಗಳ ಒಳ ಮೀಸಲಾತಿಗೆ ಸಂಬಂಧಿಸಿದ ನ್ಯಾಯಮೂರ್ತಿ ಸದಾಶಿವ ಆಯೋಗದ ವರದಿ ಜಾರಿಗಾಗಿ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಲು ರಾಜ್ಯ ಸರ್ಕಾರ ಕಳೆದ ವಾರ ನಿರ್ಧರಿಸಿದೆ. 

ಪರಿಶಿಷ್ಟ ಜಾತಿಗೆ ಶೇ 15 ರಿಂದ ಶೇ 17 ಕ್ಕೆ ಮೀಸಲಾತಿ ಹೆಚ್ಚಿಸಿದ ನಂತರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಎಸ್‌ಸಿ ಎಡ ಪ್ರವರ್ಗಕ್ಕೆ ಶೇ 6, ಎಸ್‌ಸಿ ಬಲ ಪಂಗಡಕ್ಕೆ ಶೇ.5.5, ಅಸ್ಪೃಶ್ಯರಿಗೆ ಶೇ 4.5 ಮತ್ತು ಇತರರಿಗೆ ಶೇ. 1ರಷ್ಟು ಮೀಸಲಾತಿ ಘೋಷಿಸಿದ್ದಾರೆ. ಈ ಪ್ರಸ್ತಾವನೆಯನ್ನು ಸಂವಿಧಾನದ ಒಂಬತ್ತನೇ ಶೆಡ್ಯೂಲ್‌ಗೆ ಸೇರಿಸುವಂತೆ ಶಿಫಾರಸು ಮಾಡಿ ರಾಜ್ಯ ಸರ್ಕಾರ ಕೇಂದ್ರಕ್ಕೆ ಪತ್ರ ಬರೆದಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ವಿಶ್ವಕಪ್ ವಿಜೇತ ಕರ್ನಾಟಕದ ಅಂಧ ಕ್ರಿಕೆಟ್ ಆಟಗಾರ್ತಿಯರಿಗೆ ತಲಾ 10 ಲಕ್ಷ ರೂ ನಗದು, ಸರ್ಕಾರಿ ಉದ್ಯೋಗ: ಸಿಎಂ ಸಿದ್ದರಾಮಯ್ಯ ಘೋಷಣೆ

ನಾಯಕತ್ವ ಬದಲಾವಣೆ ಬಗ್ಗೆ ಸಾರ್ವಜನಿಕವಾಗಿ ಚರ್ಚಿಸಲು ಸಾಧ್ಯವಿಲ್ಲ: ಮಲ್ಲಿಕಾರ್ಜುನ ಖರ್ಗೆ

ಸ್ಮೃತಿ ಮಂಧಾನ ಮದುವೆ ಮುಂದೂಡಿಕೆಗೆ ಅಸಲಿ ಕಾರಣ? ಮತ್ತೊಂದು ಹೆಣ್ಣಿನೊಂದಿಗೆ ಮೋಹ, ನಂಬಿಕೆ ದ್ರೋಹ; ಬಯಲಾಯ್ತು ಪಲಾಶ್'ನ ಅಸಲಿ ರಂಗಿನಾಟ!

ಅಯೋಧ್ಯ ಧ್ವಜಾರೋಹಣ ನೆರವೇರಿಸಿದ್ದು ಹೇಗೆ?: ಸ್ವಿಚ್ ಅಥವಾ ಹಗ್ಗ ಬಳಸದ ಪ್ರಧಾನಿ; ಈ ಅದ್ಭುತ Video ನೋಡಿ..

SCROLL FOR NEXT