ಸೋಮವಾರ ಬೆಂಗಳೂರಿನಲ್ಲಿ ಎಸ್‌ಡಿಪಿಐ ಸದಸ್ಯರು ಮುಸ್ಲಿಮರಿಗೆ ನೀಡಿದ್ದ ಶೇ 4 ರಷ್ಟು ಮೀಸಲಾತಿಯನ್ನು ರದ್ದುಪಡಿಸಿದ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದರು. 
ರಾಜ್ಯ

ಶೇ 4ರಷ್ಟು ಮೀಸಲಾತಿ ರದ್ದು; ಶಾಂತಿಯುತ ಪ್ರತಿಭಟನೆ ನಡೆಸಲಾಗುವುದು ಎಂದ ಮುಸ್ಲಿಂ ವೇದಿಕೆ

2ಬಿ ವರ್ಗದಡಿ ಮುಸ್ಲಿಮರಿಗೆ ಶೇ 4ರಷ್ಟು ಮೀಸಲಾತಿಯನ್ನು ರದ್ದುಗೊಳಿಸುವ ಸರ್ಕಾರದ ನಿರ್ಧಾರವನ್ನು ಖಂಡಿಸಿ, ವಿವಿಧ ವೇದಿಕೆಗಳ ಬೆಂಬಲದೊಂದಿಗೆ ಶಾಂತಿಯುತ ಪ್ರತಿಭಟನೆ ನಡೆಸಲಾಗುವುದು ಎಂದು ಅಖಿಲ ಭಾರತ ಮುಸ್ಲಿಂ ಅಭಿವೃದ್ಧಿ ವೇದಿಕೆ ಅಧ್ಯಕ್ಷ ನಸೀರ್ ಅಹ್ಮದ್ ಹೇಳಿದರು.

ಚಿಕ್ಕಮಗಳೂರು: 2ಬಿ ವರ್ಗದಡಿ ಮುಸ್ಲಿಮರಿಗೆ ಶೇ 4ರಷ್ಟು ಮೀಸಲಾತಿಯನ್ನು ರದ್ದುಗೊಳಿಸುವ ಸರ್ಕಾರದ ನಿರ್ಧಾರವನ್ನು ಖಂಡಿಸಿ, ವಿವಿಧ ವೇದಿಕೆಗಳ ಬೆಂಬಲದೊಂದಿಗೆ ಶಾಂತಿಯುತ ಪ್ರತಿಭಟನೆ ನಡೆಸಲಾಗುವುದು ಎಂದು ಅಖಿಲ ಭಾರತ ಮುಸ್ಲಿಂ ಅಭಿವೃದ್ಧಿ ವೇದಿಕೆ ಅಧ್ಯಕ್ಷ ನಸೀರ್ ಅಹ್ಮದ್ ಹೇಳಿದರು.

ಸೋಮವಾರ ಇಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪ್ರಧಾನಮಂತ್ರಿ ನರೇಂದ್ರ ಮೋದಿಯವರ ‘ಸಬ್ ಕಾ ಸಾಥ್, ಸಬ್ ಕಾ ವಿಕಾಸ್’ ಎಂಬ ಘೋಷವಾಕ್ಯವನ್ನು ಅದರ ನಿಜವಾದ ಸ್ಪೂರ್ತಿಯಲ್ಲಿ ಅನುಸರಿಸುವಂತೆ ಮನವಿ ಮಾಡಿದ ಅವರು, 'ಮುಸ್ಲಿಂ ಸಮುದಾಯದಲ್ಲಿ ಅನೇಕರು ಆರ್ಥಿಕವಾಗಿ ಹಿಂದುಳಿದ ಜನರಿದ್ದಾರೆ' ಎಂದರು.

ರಾಜಿಂದರ್ ಸಾಚಾರ್ ಸಮಿತಿಯ ವರದಿಯಲ್ಲಿ ಮುಸ್ಲಿಮರಿಗೆ ಶೇ 10ರಷ್ಟು ಮೀಸಲಾತಿಯನ್ನು ಶಿಫಾರಸು ಮಾಡಲಾಗಿತ್ತು. ಆದರೆ, ಅದು ಜಾರಿಯಾಗಿರಲಿಲ್ಲ. ಈಗ, ಮುಸ್ಲಿಮರನ್ನು ಆರ್ಥಿಕವಾಗಿ ದುರ್ಬಲ ವಿಭಾಗದ ಅಡಿಯಲ್ಲಿ ವರ್ಗೀಕರಿಸಲಾಗಿದೆ. ಇದು ಪ್ರಜಾಪ್ರಭುತ್ವ ವಿರೋಧಿ ಮತ್ತು ಸಂವಿಧಾನ ವಿರೋಧಿ ಎಂದು ದೂರಿದರು.

ಸರ್ಕಾರವು 2ಬಿ ಪ್ರವರ್ಗದ ಅಡಿಯಲ್ಲಿ ಮೀಸಲಾತಿಯನ್ನು ರದ್ದುಪಡಿಸಿ ಮತ್ತು ಅದನ್ನು ಒಕ್ಕಲಿಗರು ಮತ್ತು ಲಿಂಗಾಯತರಿಗೆ ಹಂಚುವುದರಿಂದ ಮುಸ್ಲಿಂ ಸಮುದಾಯವು 300 ವೈದ್ಯಕೀಯ ಸೀಟುಗಳು, 1,700 ಎಂಜಿನಿಯರಿಂಗ್ ಸೀಟುಗಳು ಮತ್ತು 50 ದಂತ ವೈದ್ಯಕೀಯ ಸೀಟುಗಳನ್ನು ಕಳೆದುಕೊಳ್ಳುತ್ತದೆ. ಜೊತೆಗೆ ವಾರ್ಷಿಕ 600 ರಿಂದ 2,000 ಉದ್ಯೋಗಾವಕಾಶಗಳನ್ನು ಕಳೆದುಕೊಳ್ಳುತ್ತದೆ. ಸರ್ಕಾರ ತನ್ನ ನಿರ್ಧಾರವನ್ನು ಹಿಂಪಡೆಯಬೇಕು ಎಂದು ಮನವಿ ಮಾಡಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ವಿಶ್ವಕಪ್ ವಿಜೇತ ಅಂಧ ಕರ್ನಾಟಕದ ಆಟಗಾರ್ತಿಯರಿಗೆ ತಲಾ 10 ಲಕ್ಷ ನಗದು, ಸರ್ಕಾರಿ ಉದ್ಯೋಗ: ಸಿಎಂ ಸಿದ್ದರಾಮಯ್ಯ ಘೋಷಣೆ

ಸ್ಮೃತಿ ಮಂಧಾನ ಮದುವೆ ಮುಂದೂಡಿಕೆಗೆ ಅಸಲಿ ಕಾರಣ? ಮತ್ತೊಂದು ಹೆಣ್ಣಿನೊಂದಿಗೆ ಮೋಹ, ನಂಬಿಕೆ ದ್ರೋಹ; ಬಯಲಾಯ್ತು ಪಲಾಶ್'ನ ಅಸಲಿ ರಂಗಿನಾಟ!

ಅಯೋಧ್ಯ ಧ್ವಜಾರೋಹಣ: ಸ್ವಿಚ್ ಅಥವಾ ಹಗ್ಗ ಬಳಸದ ಪ್ರಧಾನಿ, ಹೇಗೆ ನೆರವೇರಿಸಿದ್ರು?ಈ ಅದ್ಭುತ Video ನೋಡಿ..

ಬರವಣಿಗೆಯಲ್ಲಿ ಖುಷಿ ಕಂಡ ಪೊಲೀಸ್ ಅಧಿಕಾರಿ: 'ಬಸವಣ್ಣನ ವಚನ' ಗಳನ್ನು ಇಂಗ್ಲೀಷ್ ಗೆ ಅನುವಾದ ಮಾಡ್ತಿರೋ DYSP ಬಸವರಾಜ್ ಯಲಿಗಾರ್!

SCROLL FOR NEXT